ಹೊಸದಿಲ್ಲಿ: ಭಾರತೀಯ ನೌಕಾಪಡೆಯು ಶನಿವಾರ ಅರಬಿ ಸಮುದ್ರದಲ್ಲಿ ಬೃಹತ್ ಸಮರಾಭ್ಯಾಸ ಕೈಗೊಂಡಿತು. ಇತ್ತೀಚಿನ ವರ್ಷಗಳಲ್ಲಿ ನಡೆದ ಬೃಹತ್ ಶಕ್ತಿ ಪ್ರದರ್ಶನದಲ್ಲಿ ಇದೂ ಒಂದು. ಎರಡು ವಿಮಾನ ವಾಹಕ ನೌಕೆಗಳು, ಅನೇಕ ಯುದ್ಧ ಹಡಗುಗಳು, ಜಲಾಂತರ್ಗಾಮಿ ನೌಕೆಗಳು ಮತ್ತು 35ಕ್ಕೂ ಹೆಚ್ಚು ಮುಂಚೂಣಿ ಯುದ್ಧ ವಿಮಾನಗಳು ಈ ಸಮರಾಭ್ಯಾಸದಲ್ಲಿ ಪಾಲ್ಗೊಂಡಿದ್ದವು.
ಹಿಂದೂ ಮಹಾ ಸಮುದ್ರದಲ್ಲಿ ಚೀನ ತನ್ನ ಹಿಡಿತ ಹೆಚ್ಚಿಸುತ್ತಿರುವ ನಡುವೆ ಭಾರತದ ಈ ಶಕ್ತಿ ಪ್ರದರ್ಶನ ಪ್ರಾಮುಖ್ಯ ಪಡೆದಿದೆ. ಐಎನ್ಎಸ್ ವಿಕ್ರಮಾದಿತ್ಯ ಮತ್ತು ಹೊಸದಾಗಿ ಸೇರ್ಪಡೆಯಾದ ಐಎನ್ಎಸ್ ವಿಕ್ರಾಂತ್-ಈ ಸಮರಾಭ್ಯಾಸದ ಪ್ರಮುಖ ಆಕರ್ಷಣೆಯಾಗಿದ್ದವು. ಜತೆಗೆ ಮಿಗ್ 29ಕೆ ಸಹಿತ ಅನೇಕ ಯುದ್ಧ ವಿಮಾನಗಳು ಹಾಗೂ ಹೆಲಿಕಾಪ್ಟರ್ಗಳಾದ ಎಂಎಚ್60ಆರ್, ಕಾಮೊವ್ ಮತ್ತು ಸುಧಾರಿತ ಲಘು ಹೆಲಿಕಾಪ್ಟರ್ಗಳು ಸಮರಾಭ್ಯಾಸದ ಭಾಗವಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಈ ಸಮರಾಭ್ಯಾಸವು ಹಿಂದೂ ಮಹಾಸಾಗರದಲ್ಲಿ ಮತ್ತು ಅದರಾಚೆಗೂ ಕಡಲ ಭದ್ರತೆ ಮತ್ತು ಶಕ್ತಿ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಭಾರತೀಯ ನೌಕಾಪಡೆಯ ನೂತನ ಮೈಲುಗಲ್ಲಾಗಿದೆ’ ಎಂದು ನೌಕಾಪಡೆಯ ವಕ್ತಾರ ಕಮಾಂಡರ್ ವಿವೇಕ್ ಮಧ್ವಲ್ ಹೇಳಿದ್ದಾರೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…