BREAKING NEWS

ಅರಬಿ ಸಮುದ್ರದಲ್ಲಿ ನೌಕಾಪಡೆಯ ಸಮರಾಭ್ಯಾಸ

ಹೊಸದಿಲ್ಲಿ: ಭಾರತೀಯ ನೌಕಾಪಡೆಯು ಶನಿವಾರ ಅರಬಿ ಸಮುದ್ರದಲ್ಲಿ ಬೃಹತ್‌ ಸಮರಾಭ್ಯಾಸ ಕೈಗೊಂಡಿತು. ಇತ್ತೀಚಿನ ವರ್ಷಗಳಲ್ಲಿ ನಡೆದ ಬೃಹತ್‌ ಶಕ್ತಿ ಪ್ರದರ್ಶನದಲ್ಲಿ ಇದೂ ಒಂದು. ಎರಡು ವಿಮಾನ ವಾಹಕ ನೌಕೆಗಳು, ಅನೇಕ ಯುದ್ಧ ಹಡಗುಗಳು, ಜಲಾಂತರ್ಗಾಮಿ ನೌಕೆಗಳು ಮತ್ತು 35ಕ್ಕೂ ಹೆಚ್ಚು ಮುಂಚೂಣಿ ಯುದ್ಧ ವಿಮಾನಗಳು ಈ ಸಮರಾಭ್ಯಾಸದಲ್ಲಿ ಪಾಲ್ಗೊಂಡಿದ್ದವು.

ಹಿಂದೂ ಮಹಾ ಸಮುದ್ರದಲ್ಲಿ ಚೀನ ತನ್ನ ಹಿಡಿತ ಹೆಚ್ಚಿಸುತ್ತಿರುವ ನಡುವೆ ಭಾರತದ ಈ ಶಕ್ತಿ ಪ್ರದರ್ಶನ ಪ್ರಾಮುಖ್ಯ ಪಡೆದಿದೆ. ಐಎನ್‌ಎಸ್‌ ವಿಕ್ರಮಾದಿತ್ಯ ಮತ್ತು ಹೊಸದಾಗಿ ಸೇರ್ಪಡೆಯಾದ ಐಎನ್‌ಎಸ್‌ ವಿಕ್ರಾಂತ್‌-ಈ ಸಮರಾಭ್ಯಾಸದ ಪ್ರಮುಖ ಆಕರ್ಷಣೆಯಾಗಿದ್ದವು. ಜತೆಗೆ ಮಿಗ್‌ 29ಕೆ ಸಹಿತ ಅನೇಕ ಯುದ್ಧ ವಿಮಾನಗಳು ಹಾಗೂ ಹೆಲಿಕಾಪ್ಟರ್‌ಗಳಾದ ಎಂಎಚ್‌60ಆರ್‌, ಕಾಮೊವ್‌ ಮತ್ತು ಸುಧಾರಿತ ಲಘು ಹೆಲಿಕಾಪ್ಟರ್‌ಗಳು ಸಮರಾಭ್ಯಾಸದ ಭಾಗವಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಈ ಸಮರಾಭ್ಯಾಸವು ಹಿಂದೂ ಮಹಾಸಾಗರದಲ್ಲಿ ಮತ್ತು ಅದರಾಚೆಗೂ ಕಡಲ ಭದ್ರತೆ ಮತ್ತು ಶಕ್ತಿ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಭಾರತೀಯ ನೌಕಾಪಡೆಯ ನೂತನ ಮೈಲುಗಲ್ಲಾಗಿದೆ’ ಎಂದು ನೌಕಾಪಡೆಯ ವಕ್ತಾರ ಕಮಾಂಡರ್‌ ವಿವೇಕ್‌ ಮಧ್ವಲ್‌ ಹೇಳಿದ್ದಾರೆ.

andolanait

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

51 mins ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

3 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

3 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

8 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

8 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

8 hours ago