BREAKING NEWS

ಅರಬಿ ಸಮುದ್ರದಲ್ಲಿ ನೌಕಾಪಡೆಯ ಸಮರಾಭ್ಯಾಸ

ಹೊಸದಿಲ್ಲಿ: ಭಾರತೀಯ ನೌಕಾಪಡೆಯು ಶನಿವಾರ ಅರಬಿ ಸಮುದ್ರದಲ್ಲಿ ಬೃಹತ್‌ ಸಮರಾಭ್ಯಾಸ ಕೈಗೊಂಡಿತು. ಇತ್ತೀಚಿನ ವರ್ಷಗಳಲ್ಲಿ ನಡೆದ ಬೃಹತ್‌ ಶಕ್ತಿ ಪ್ರದರ್ಶನದಲ್ಲಿ ಇದೂ ಒಂದು. ಎರಡು ವಿಮಾನ ವಾಹಕ ನೌಕೆಗಳು, ಅನೇಕ ಯುದ್ಧ ಹಡಗುಗಳು, ಜಲಾಂತರ್ಗಾಮಿ ನೌಕೆಗಳು ಮತ್ತು 35ಕ್ಕೂ ಹೆಚ್ಚು ಮುಂಚೂಣಿ ಯುದ್ಧ ವಿಮಾನಗಳು ಈ ಸಮರಾಭ್ಯಾಸದಲ್ಲಿ ಪಾಲ್ಗೊಂಡಿದ್ದವು.

ಹಿಂದೂ ಮಹಾ ಸಮುದ್ರದಲ್ಲಿ ಚೀನ ತನ್ನ ಹಿಡಿತ ಹೆಚ್ಚಿಸುತ್ತಿರುವ ನಡುವೆ ಭಾರತದ ಈ ಶಕ್ತಿ ಪ್ರದರ್ಶನ ಪ್ರಾಮುಖ್ಯ ಪಡೆದಿದೆ. ಐಎನ್‌ಎಸ್‌ ವಿಕ್ರಮಾದಿತ್ಯ ಮತ್ತು ಹೊಸದಾಗಿ ಸೇರ್ಪಡೆಯಾದ ಐಎನ್‌ಎಸ್‌ ವಿಕ್ರಾಂತ್‌-ಈ ಸಮರಾಭ್ಯಾಸದ ಪ್ರಮುಖ ಆಕರ್ಷಣೆಯಾಗಿದ್ದವು. ಜತೆಗೆ ಮಿಗ್‌ 29ಕೆ ಸಹಿತ ಅನೇಕ ಯುದ್ಧ ವಿಮಾನಗಳು ಹಾಗೂ ಹೆಲಿಕಾಪ್ಟರ್‌ಗಳಾದ ಎಂಎಚ್‌60ಆರ್‌, ಕಾಮೊವ್‌ ಮತ್ತು ಸುಧಾರಿತ ಲಘು ಹೆಲಿಕಾಪ್ಟರ್‌ಗಳು ಸಮರಾಭ್ಯಾಸದ ಭಾಗವಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಈ ಸಮರಾಭ್ಯಾಸವು ಹಿಂದೂ ಮಹಾಸಾಗರದಲ್ಲಿ ಮತ್ತು ಅದರಾಚೆಗೂ ಕಡಲ ಭದ್ರತೆ ಮತ್ತು ಶಕ್ತಿ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಭಾರತೀಯ ನೌಕಾಪಡೆಯ ನೂತನ ಮೈಲುಗಲ್ಲಾಗಿದೆ’ ಎಂದು ನೌಕಾಪಡೆಯ ವಕ್ತಾರ ಕಮಾಂಡರ್‌ ವಿವೇಕ್‌ ಮಧ್ವಲ್‌ ಹೇಳಿದ್ದಾರೆ.

andolanait

Recent Posts

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

4 mins ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

58 mins ago

ಅಮೇರಿಕಾ-ಇರಾನ್‌ ಸಂಧಾನ: ಪಾಕ್‌ನಲ್ಲೇ 2ನೇ ಸುತ್ತಿನ ಮಾತುಕತೆ

ವಾಷಿಂಗ್ಟನ್:‌ ಇರಾನ್‌ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

1 hour ago

2 ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು…

1 hour ago

ಹನೂರು ತಾಲ್ಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರ ಶ್ರೀರೂಪ ಭೇಟಿ: ಗ್ರಾಮಸ್ಥರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ,…

1 hour ago

ಯುವಕರಲ್ಲಿ ಮಾನವೀಯತೆ ಹೆಚ್ಚಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…

2 hours ago