ತಿರುವನಂತಪುರ : ಕೊಚ್ಚಿಯ ನೌಕಾ ವಾಯು ನಿಲ್ದಾಣದ ಐಎನ್ಎಸ್ ಗರುಡಾ ರನ್ವೇಯಲ್ಲಿ ಚೇತಕ್ ಹೆಲಿಕಾಪ್ಟರ್ವೊಂದು ಪತನಗೊಂಡಿದ್ದು, ಘಟನೆಯಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.
ನೌಕಾ ವಾಯು ನಿಲ್ದಾಣದಲ್ಲಿ ನಿರ್ವಹಣಾ ಟ್ಯಾಕ್ಸಿ ತಪಾಸಣೆ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ನೌಕಾಪಡೆಯ ವಕ್ತಾರರು ಎಕ್ಸ್ನಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಂದು ಕೊಚ್ಚಿಯ ಐಎನ್ಎಸ್ ಗರುಡಾದಲ್ಲಿ ನಿರ್ವಹಣಾ ಟ್ಯಾಕ್ಸಿ ತಪಾಸಣೆಯ ವೇಳೆ ಚೇತಕ್ ಹೆಲಿಕಾಪ್ಟರ್ ಅಪಘಾತಕ್ಕೀಡಾಯಿತು. ಇದರ ಪರಿಣಾಮವಾಗಿ ಸಿಬ್ಬಂದಿಯೊಬ್ಬರು ದುರಾದೃಷ್ಟಕರವಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನೌಕಾಪಡೆ ಎಕ್ಸ್ನಲ್ಲಿ ತಿಳಿಸಿದೆ.
ಅಪಘಾತದ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ. ನೌಕಾಪಡೆಯ ವಕ್ತಾರರು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಎಲ್ಲಾ ನೌಕಾಪಡೆಯ ಸಿಬ್ಬಂದಿ, ಯೋಗೇಂದ್ರ ಸಿಂಗ್ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಅಡ್ಮಿರಲ್ ಹರಿ ಕುಮಾರ್ ಮತ್ತು ಭಾರತೀಯ ನೌಕಾಪಡೆಯ ಎಲ್ಲಾ ಸಿಬ್ಬಂದಿ ಘಟನೆಯಲ್ಲಿ ಮೃತಪಟ್ಟ ಸಿಬ್ಬಂದಿಗೆ ಸಂತಾಪ ಸೂಚಿಸಿದ್ದಾರೆ. ಕೊಚ್ಚಿಯಲ್ಲಿ ನಡೆದ ದುರದೃಷ್ಟಕರ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಸಿಬ್ಬಂದಿ ಯೋಗೇಂದ್ರ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದು, ದುಃಖಿತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…
ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…
ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್ ಕುಮಾರ್ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…
ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ…
ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್ ಆಗಿದ್ದ ಶಿರಿನ್ ಶರ್ಮಿನ್ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗವು…