ತಿರುವನಂತಪುರ : ಕೊಚ್ಚಿಯ ನೌಕಾ ವಾಯು ನಿಲ್ದಾಣದ ಐಎನ್ಎಸ್ ಗರುಡಾ ರನ್ವೇಯಲ್ಲಿ ಚೇತಕ್ ಹೆಲಿಕಾಪ್ಟರ್ವೊಂದು ಪತನಗೊಂಡಿದ್ದು, ಘಟನೆಯಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.
ನೌಕಾ ವಾಯು ನಿಲ್ದಾಣದಲ್ಲಿ ನಿರ್ವಹಣಾ ಟ್ಯಾಕ್ಸಿ ತಪಾಸಣೆ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ನೌಕಾಪಡೆಯ ವಕ್ತಾರರು ಎಕ್ಸ್ನಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಂದು ಕೊಚ್ಚಿಯ ಐಎನ್ಎಸ್ ಗರುಡಾದಲ್ಲಿ ನಿರ್ವಹಣಾ ಟ್ಯಾಕ್ಸಿ ತಪಾಸಣೆಯ ವೇಳೆ ಚೇತಕ್ ಹೆಲಿಕಾಪ್ಟರ್ ಅಪಘಾತಕ್ಕೀಡಾಯಿತು. ಇದರ ಪರಿಣಾಮವಾಗಿ ಸಿಬ್ಬಂದಿಯೊಬ್ಬರು ದುರಾದೃಷ್ಟಕರವಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನೌಕಾಪಡೆ ಎಕ್ಸ್ನಲ್ಲಿ ತಿಳಿಸಿದೆ.
ಅಪಘಾತದ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ. ನೌಕಾಪಡೆಯ ವಕ್ತಾರರು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಎಲ್ಲಾ ನೌಕಾಪಡೆಯ ಸಿಬ್ಬಂದಿ, ಯೋಗೇಂದ್ರ ಸಿಂಗ್ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಅಡ್ಮಿರಲ್ ಹರಿ ಕುಮಾರ್ ಮತ್ತು ಭಾರತೀಯ ನೌಕಾಪಡೆಯ ಎಲ್ಲಾ ಸಿಬ್ಬಂದಿ ಘಟನೆಯಲ್ಲಿ ಮೃತಪಟ್ಟ ಸಿಬ್ಬಂದಿಗೆ ಸಂತಾಪ ಸೂಚಿಸಿದ್ದಾರೆ. ಕೊಚ್ಚಿಯಲ್ಲಿ ನಡೆದ ದುರದೃಷ್ಟಕರ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಸಿಬ್ಬಂದಿ ಯೋಗೇಂದ್ರ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದು, ದುಃಖಿತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…