BREAKING NEWS

ಎಲ್ಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲು ‘ಭಾರತ್‌’ ಉಲ್ಲೇಖಿಸಲು ಎನ್‌ಸಿಇಆರ್‌ಟಿ ಸಮಿತಿಯ ಶಿಫಾರಸು

ನವದೆಹಲಿ : ನ್ಯಾಷನಲ್‌ ಕೌನ್ಸಿಲ್‌ ಆಫ್‌ ಎಜುಕೇಶನಲ್‌ ರಿಸರ್ಚ್‌ ಎಂಡ್‌ ಟ್ರೈನಿಂಗ್‌ (ಎನ್‌ಸಿಇಆರ್‌ಟಿ) ಪಠ್ಯವನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುವ ಸಮಿತಿ (ಫೋಕಸ್‌ ಗ್ರೂಪ್)‌ ಎಲ್ಲಾ ಎನ್‌ಸಿಆರ್‌ಟಿ ಪಠ್ಯಪುಸ್ತಕಗಳಲ್ಲಿ “ಇಂಡಿಯಾ” ಬದಲು “ಭಾರತ” ಎಂದು ಉಲ್ಲೇಖಿಸಬೇಕೆಂದು ಸಲಹೆ ನೀಡಿದೆ.

ಈ ಸಲಹೆಯನ್ನು 2022 ಸೋಶಿಯಲ್‌ ಸಾಯನ್ಸ್‌ ಸಮಿತಿ ಮಾಡಿದೆ ಹಾಗೂ ಮುಂದಿನ ಶೈಕ್ಷಣಿಕ ವರ್ಷದಿಂದ ಅದನ್ನು ಜಾರಿಗೊಳಿಸಲಾಗುವುದು ಎಂದು ಸಮಿತಿ ಅಧ್ಯಕ್ಷ, ನಿವೃತ್ತ ಪ್ರೊಫೆಸರ್ ಸಿ ಎಲ್‌ ಐಸಾಕ್‌ ಹೇಳಿದ್ದಾರೆ. ಐಸಾಕ್‌ ಅವರು ಇತಿಹಾಸಕಾರ ಮತ್ತು ಪದ್ಮ ಶ್ರೀ ಪುರಸ್ಕೃತರಾಗಿದ್ದಾರೆ.

ಸಮಿತಿಯ ಶಿಫಾರಸುಗಳ ಬಗ್ಗೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಎನ್‌ಸಿಇಆರ್‌ಟಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಲ್ಲಿ ‘ಭಾರತ್’ ಎಂಬ ಹೆಸರನ್ನು ಬಳಸಬೇಕೆಂದು ಸಮಿತಿಯು ಸರ್ವಾನುಮತದಿಂದ ಶಿಫಾರಸು ಮಾಡಿದೆ. ಪಠ್ಯಪುಸ್ತಕಗಳಲ್ಲಿ ‘ಪ್ರಾಚೀನ ಇತಿಹಾಸ’ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ವನ್ನು ಪರಿಚಯಿಸಲು ನಾವು ಶಿಫಾರಸು ಮಾಡಿದ್ದೇವೆ” ಎಂದು ಐಸಾಕ್ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

ಈ ಸಮಿತಿಯ ಸದಸ್ಯರಲ್ಲಿ ಗಾಯಕ ಶಂಕರ್‌ ಮಹದೇವ, ಇನ್ಫೋಸಿಸ್‌ ಫೌಂಡೇಶನ್‌ನ ಸುಧಾ ಮೂರ್ತಿ, ಆರೆಸ್ಸೆಸ್‌ ಸಂಯೋಜಿತ ಸಂಸ್ಕೃತ ಭಾರತಿಯ ಚಮು ಕೃಷ್ಣ ಶಾಸ್ತ್ರಿ, ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಬಿಬೇಕ್‌ ದೆಬ್ರಾಯ್‌ ಮುಂತಾದವರು ಇದ್ದಾರೆ.

ಜಿ20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್‌ ಆಫ್‌ ಇಂಡಿಯಾ ಬದಲು ಪ್ರೆಸಿಡೆಂಟ್‌ ಆಫ್‌ ಭಾರತ್‌ ಎಂದು ಬರೆದಿರುವುದು, ದೇಶದ ಹೆಸರಿನ ಬದಲಾವಣೆ ಮಾಡಲಾಗುವುದೇ ಎಂಬ ಚರ್ಚೆಯನ್ನು ಹುಟ್ಟುಹಾಕಿತ್ತೆಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

3 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

17 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

17 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

17 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

17 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

17 hours ago