BREAKING NEWS

ಎಲ್ಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲು ‘ಭಾರತ್‌’ ಉಲ್ಲೇಖಿಸಲು ಎನ್‌ಸಿಇಆರ್‌ಟಿ ಸಮಿತಿಯ ಶಿಫಾರಸು

ನವದೆಹಲಿ : ನ್ಯಾಷನಲ್‌ ಕೌನ್ಸಿಲ್‌ ಆಫ್‌ ಎಜುಕೇಶನಲ್‌ ರಿಸರ್ಚ್‌ ಎಂಡ್‌ ಟ್ರೈನಿಂಗ್‌ (ಎನ್‌ಸಿಇಆರ್‌ಟಿ) ಪಠ್ಯವನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುವ ಸಮಿತಿ (ಫೋಕಸ್‌ ಗ್ರೂಪ್)‌ ಎಲ್ಲಾ ಎನ್‌ಸಿಆರ್‌ಟಿ ಪಠ್ಯಪುಸ್ತಕಗಳಲ್ಲಿ “ಇಂಡಿಯಾ” ಬದಲು “ಭಾರತ” ಎಂದು ಉಲ್ಲೇಖಿಸಬೇಕೆಂದು ಸಲಹೆ ನೀಡಿದೆ.

ಈ ಸಲಹೆಯನ್ನು 2022 ಸೋಶಿಯಲ್‌ ಸಾಯನ್ಸ್‌ ಸಮಿತಿ ಮಾಡಿದೆ ಹಾಗೂ ಮುಂದಿನ ಶೈಕ್ಷಣಿಕ ವರ್ಷದಿಂದ ಅದನ್ನು ಜಾರಿಗೊಳಿಸಲಾಗುವುದು ಎಂದು ಸಮಿತಿ ಅಧ್ಯಕ್ಷ, ನಿವೃತ್ತ ಪ್ರೊಫೆಸರ್ ಸಿ ಎಲ್‌ ಐಸಾಕ್‌ ಹೇಳಿದ್ದಾರೆ. ಐಸಾಕ್‌ ಅವರು ಇತಿಹಾಸಕಾರ ಮತ್ತು ಪದ್ಮ ಶ್ರೀ ಪುರಸ್ಕೃತರಾಗಿದ್ದಾರೆ.

ಸಮಿತಿಯ ಶಿಫಾರಸುಗಳ ಬಗ್ಗೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಎನ್‌ಸಿಇಆರ್‌ಟಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಲ್ಲಿ ‘ಭಾರತ್’ ಎಂಬ ಹೆಸರನ್ನು ಬಳಸಬೇಕೆಂದು ಸಮಿತಿಯು ಸರ್ವಾನುಮತದಿಂದ ಶಿಫಾರಸು ಮಾಡಿದೆ. ಪಠ್ಯಪುಸ್ತಕಗಳಲ್ಲಿ ‘ಪ್ರಾಚೀನ ಇತಿಹಾಸ’ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ವನ್ನು ಪರಿಚಯಿಸಲು ನಾವು ಶಿಫಾರಸು ಮಾಡಿದ್ದೇವೆ” ಎಂದು ಐಸಾಕ್ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

ಈ ಸಮಿತಿಯ ಸದಸ್ಯರಲ್ಲಿ ಗಾಯಕ ಶಂಕರ್‌ ಮಹದೇವ, ಇನ್ಫೋಸಿಸ್‌ ಫೌಂಡೇಶನ್‌ನ ಸುಧಾ ಮೂರ್ತಿ, ಆರೆಸ್ಸೆಸ್‌ ಸಂಯೋಜಿತ ಸಂಸ್ಕೃತ ಭಾರತಿಯ ಚಮು ಕೃಷ್ಣ ಶಾಸ್ತ್ರಿ, ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಬಿಬೇಕ್‌ ದೆಬ್ರಾಯ್‌ ಮುಂತಾದವರು ಇದ್ದಾರೆ.

ಜಿ20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್‌ ಆಫ್‌ ಇಂಡಿಯಾ ಬದಲು ಪ್ರೆಸಿಡೆಂಟ್‌ ಆಫ್‌ ಭಾರತ್‌ ಎಂದು ಬರೆದಿರುವುದು, ದೇಶದ ಹೆಸರಿನ ಬದಲಾವಣೆ ಮಾಡಲಾಗುವುದೇ ಎಂಬ ಚರ್ಚೆಯನ್ನು ಹುಟ್ಟುಹಾಕಿತ್ತೆಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

7 mins ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

10 mins ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

19 mins ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

25 mins ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

34 mins ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

39 mins ago