ನವದೆಹಲಿ : ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಎಂಡ್ ಟ್ರೈನಿಂಗ್ (ಎನ್ಸಿಇಆರ್ಟಿ) ಪಠ್ಯವನ್ನು ಪರಿಷ್ಕರಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುವ ಸಮಿತಿ (ಫೋಕಸ್ ಗ್ರೂಪ್) ಎಲ್ಲಾ ಎನ್ಸಿಆರ್ಟಿ ಪಠ್ಯಪುಸ್ತಕಗಳಲ್ಲಿ “ಇಂಡಿಯಾ” ಬದಲು “ಭಾರತ” ಎಂದು ಉಲ್ಲೇಖಿಸಬೇಕೆಂದು ಸಲಹೆ ನೀಡಿದೆ.
ಈ ಸಲಹೆಯನ್ನು 2022 ಸೋಶಿಯಲ್ ಸಾಯನ್ಸ್ ಸಮಿತಿ ಮಾಡಿದೆ ಹಾಗೂ ಮುಂದಿನ ಶೈಕ್ಷಣಿಕ ವರ್ಷದಿಂದ ಅದನ್ನು ಜಾರಿಗೊಳಿಸಲಾಗುವುದು ಎಂದು ಸಮಿತಿ ಅಧ್ಯಕ್ಷ, ನಿವೃತ್ತ ಪ್ರೊಫೆಸರ್ ಸಿ ಎಲ್ ಐಸಾಕ್ ಹೇಳಿದ್ದಾರೆ. ಐಸಾಕ್ ಅವರು ಇತಿಹಾಸಕಾರ ಮತ್ತು ಪದ್ಮ ಶ್ರೀ ಪುರಸ್ಕೃತರಾಗಿದ್ದಾರೆ.
ಸಮಿತಿಯ ಶಿಫಾರಸುಗಳ ಬಗ್ಗೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಎನ್ಸಿಇಆರ್ಟಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಲ್ಲಿ ‘ಭಾರತ್’ ಎಂಬ ಹೆಸರನ್ನು ಬಳಸಬೇಕೆಂದು ಸಮಿತಿಯು ಸರ್ವಾನುಮತದಿಂದ ಶಿಫಾರಸು ಮಾಡಿದೆ. ಪಠ್ಯಪುಸ್ತಕಗಳಲ್ಲಿ ‘ಪ್ರಾಚೀನ ಇತಿಹಾಸ’ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ವನ್ನು ಪರಿಚಯಿಸಲು ನಾವು ಶಿಫಾರಸು ಮಾಡಿದ್ದೇವೆ” ಎಂದು ಐಸಾಕ್ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.
ಈ ಸಮಿತಿಯ ಸದಸ್ಯರಲ್ಲಿ ಗಾಯಕ ಶಂಕರ್ ಮಹದೇವ, ಇನ್ಫೋಸಿಸ್ ಫೌಂಡೇಶನ್ನ ಸುಧಾ ಮೂರ್ತಿ, ಆರೆಸ್ಸೆಸ್ ಸಂಯೋಜಿತ ಸಂಸ್ಕೃತ ಭಾರತಿಯ ಚಮು ಕೃಷ್ಣ ಶಾಸ್ತ್ರಿ, ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಬಿಬೇಕ್ ದೆಬ್ರಾಯ್ ಮುಂತಾದವರು ಇದ್ದಾರೆ.
ಜಿ20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲು ಪ್ರೆಸಿಡೆಂಟ್ ಆಫ್ ಭಾರತ್ ಎಂದು ಬರೆದಿರುವುದು, ದೇಶದ ಹೆಸರಿನ ಬದಲಾವಣೆ ಮಾಡಲಾಗುವುದೇ ಎಂಬ ಚರ್ಚೆಯನ್ನು ಹುಟ್ಟುಹಾಕಿತ್ತೆಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…