BREAKING NEWS

30 ದಿನಗಳಲ್ಲಿ ದಂಡ ಪಾವತಿಸಲು ಗೂಗಲ್‌ಗೆ ಎನ್‌ಸಿಎಲ್‌ಎಟಿ ಸೂಚನೆ

ನವದೆಹಲಿ: ಆ್ಯಂಡ್ರಾಯ್ಡ್‌ ಮೊಬೈಲ್‌ ಸಾಧನಗಳ ಪ್ರಕರಣದಲ್ಲಿ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ನೀಡಿದ್ದ ಆದೇಶ ವನ್ನು ಭಾಗಶಃ ಎತ್ತಿಹಿಡಿದಿರುವ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯು (ಎನ್‌ಸಿಎಲ್‌ಎಟಿ), ₹ 1,338 ಕೋಟಿ ದಂಡವನ್ನು 30 ದಿನಗಳಲ್ಲಿ ಪಾವತಿಸು ವಂತೆ ಗೂಗಲ್‌ ಕಂಪನಿಗೆ ಸೂಚಿಸಿದೆ.

ಆದರೆ, ಗೂಗಲ್‌ ಕಂಪನಿಯು ಆ್ಯಂಡ್ರಾಯ್ಡ್‌ ಕಾರ್ಯಾಚರಣೆ ವ್ಯವಸ್ಥೆಯ ಸ್ಮಾರ್ಟ್‌ಫೋನ್‌ಗಳಲ್ಲಿ ತಾನು ಮೊದಲೇ ಇನ್‌ಸ್ಟಾಲ್‌ ಮಾಡಿರುವ ಆ್ಯಪ್‌ಗಳನ್ನು ತೆಗೆದುಹಾಕುವ ಅವಕಾಶವನ್ನು ಗ್ರಾಹಕರಿಗೆ ಕೊಡಬೇಕು ಎಂದು ಸಿಸಿಐ ನೀಡಿದ್ದ ಸೂಚನೆಯನ್ನು ಎನ್‌ಸಿಎಲ್‌ಎಟಿ ರದ್ದುಮಾಡಿದೆ.

ಎನ್‌ಸಿಎಲ್‌ಎಟಿ ನೀಡಿರುವ ಆದೇಶವನ್ನು ಪರಿಶೀಲಿಸುತ್ತಿರುವುದಾಗಿ ಗೂಗಲ್ ಹೇಳಿದೆ. ಗೂಗಲ್‌ ಕಂಪನಿಯು ಆ್ಯಂಡ್ರಾಯ್ಡ್‌ ಸ್ಮಾರ್ಟ್‌ಫೋನ್‌ಗಳ ವಿಚಾರದಲ್ಲಿ ಸ್ಪರ್ಧಾತ್ಮಕತೆಯ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಸಿಸಿಐ ಹೇಳಿತ್ತು. ಈ ಆದೇಶವನ್ನು ಎನ್‌ಸಿಎಲ್‌ಎಟಿಯಲ್ಲಿ ಪ್ರಶ್ನಿಸಲಾಗಿತ್ತು.

ತಾನು ಮೊದಲೇ ಇನ್‌ಸ್ಟಾಲ್ ಮಾಡಿಕೊಡುವ ಗೂಗಲ್‌ ಮ್ಯಾಪ್ಸ್, ಯೂಟ್ಯೂಬ್‌, ಜಿಮೇಲ್‌ನಂತಹ ಆ್ಯಪ್‌ಗಳನ್ನು ತೆಗೆದುಹಾಕಲು ಗೂಗಲ್ ಕಂಪನಿಯು ಗ್ರಾಹಕರಿಗೆ ಅವಕಾಶ ಕೊಡಬೇಕು ಎಂದು ಸಿಸಿಐ ನೀಡಿದ್ದ ನಿರ್ದೇಶನವನ್ನು ಎನ್‌ಸಿಎಲ್‌ಎಟಿ ರದ್ದುಮಾಡಿದೆ. ಅಲ್ಲದೆ, ಗೂಗಲ್‌ ಕಂಪನಿಯು ತನ್ನ ಪ್ಲೇಸ್ಟೋರ್‌ನಲ್ಲಿ ಇತರ ಕಂಪನಿಗಳ ಆ್ಯಪ್‌ ಸ್ಟೋರ್‌ಗೆ ಅವಕಾಶ ಕೊಡಬೇಕಾಗಿಲ್ಲ ಎಂದು ಕೂಡ ಎನ್‌ಸಿಎಲ್‌ಎಟಿ ಹೇಳಿದೆ.

ಯಾವುದೇ ಆ್ಯಪ್‌ ಸ್ಟೋರ್‌ ಬಳಸದೆ, ಬೇರೆಡೆಗಳಿಂದ ಆ್ಯಪ್‌ ಡೌನ್‌ಲೋಡ್‌ ಮಾಡುವುದರ ಮೇಲೆ ನಿರ್ಬಂಧ ವಿಧಿಸಲು ಗೂಗಲ್‌ಗೆ ಅವಕಾಶ ಇರುತ್ತದೆ.

ಈ ನಿರ್ದೇಶನಗಳು ಸಿಂಧು

ಸಿಸಿಐ ನೀಡಿದ್ದ ಹತ್ತು ನಿರ್ದೇಶನಗಳ ಪೈಕಿ ಆರನ್ನು ಎನ್‌ಸಿಎಲ್‌ಎಟಿ ಎತ್ತಿಹಿಡಿದಿದೆ. ಎನ್‌ಸಿಎಲ್‌ಎಟಿ ಎತ್ತಿಹಿಡಿದಿರುವ ಪ್ರಮುಖ ನಿರ್ದೇಶನಗಳು ಇಲ್ಲಿವೆ:

l ಮೊಬೈಲ್‌ ಸಾಧನವನ್ನು ಆರಂಭದಲ್ಲಿ ಬಳಕೆಗೆ ಸಿದ್ಧಮಾಡಿಕೊಳ್ಳುವಾಗ (ಸೆಟಪ್‌) ಗ್ರಾಹಕರಿಗೆ ತಮ್ಮ ಸರ್ಚ್‌ ಎಂಜಿನ್ ಯಾವುದಾಗಿರಬೇಕು ಎಂಬುದನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಇರಬೇಕು

l ಸ್ಮಾರ್ಟ್‌ಫೋನ್‌ ತಯಾರಕರಿಗೆ ಇಂಥದ್ದೇ ಆ್ಯಪ್‌ಗಳನ್ನು ಮೊದಲೇ ಇನ್‌ಸ್ಟಾಲ್‌ ಮಾಡುವಂತೆ ತಾಕೀತು ಮಾಡುವಂತಿಲ್ಲ.

andolanait

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

12 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

13 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

13 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

13 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

13 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

14 hours ago