BREAKING NEWS

ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲು ‘ಭಾರತ’ ಪದ ಬಳಕೆ ಕ್ರಮದ ಹಿಂದೆ ಎನ್‌ಡಿಎ ಕೈವಾಡವಿದೆ: ಡಿಕೆಶಿ

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಎಂಬ ಹೆಸರಿನ ಬದಲು ‘ಭಾರತ’ ಎಂಬ ಹೆಸರನ್ನು ಬಳಸಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ರಚಿಸಿದ್ದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿರುವುದು ‘ತಪ್ಪು’ ಮತ್ತು ಈ ಕ್ರಮದ ಹಿಂದೆ ಎನ್‌ಡಿಎ ಕೈವಾಡವಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಎನ್‌ಸಿಇಆರ್‌ಟಿ ರಚಿಸಿದ್ದ ಉನ್ನತ ಮಟ್ಟದ ಸಮಿತಿಯು ಒಂದರಿಂದ ಹನ್ನೆರಡನೇ ತರಗತಿವರೆಗಿನ ಎಲ್ಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಎಂಬ ಹೆಸರಿನ ಬದಲು ‘ಭಾರತ’ ಎಂದು ಬಳಸಬೇಕು ಎಂದು ಬುಧವಾರ ಶಿಫಾರಸು ಮಾಡಿದೆ.

ಪಠ್ಯಕ್ರಮದಲ್ಲಿ ‘ಪುರಾತನ ಇತಿಹಾಸ’ದ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ವನ್ನು ಅಳವಡಿಸಬೇಕು. ಎಲ್ಲಾ ವಿಷಯಗಳಲ್ಲಿಯೂ ‘ಭಾರತೀಯ ಜ್ಞಾನ ವ್ಯವಸ್ಥೆ’ಯನ್ನು (ಐಕೆಎಸ್) ಅಳವಡಿಸಬೇಕು ಎಂಬ ಶಿಫಾರಸನ್ನು ಕೂಡ ಮಾಡಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಸಿಐ ಐಸಾಕ್ ತಿಳಿಸಿದ್ದಾರೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಶಿವಕುಮಾರ್, ‘ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಅಡ್ಮಿನಿಸ್ಟ್ರೇಷನ್ ಸರ್ವಿಸ್ ಮತ್ತು ಇಂಡಿಯನ್ ಫಾರಿನ್ ಸರ್ವಿಸ್ ಏಕೆ ಇನ್ನೂ ಇವೆ. ಇವುಗಳಲ್ಲಿ ಏಕೆ ಇನ್ನೂ ಭಾರತ ಎಂಬ ಪದವನ್ನು ಬಳಸಿಲ್ಲ. ಭಾರತೀಯ ಪಾಸ್‌ಪೋರ್ಟ್‌ನಲ್ಲಿ ‘ರಿಪಬ್ಲಿಕ್ ಆಫ್ ಇಂಡಿಯಾ’ ಎಂದು ಏಕೆ ಬರೆಯಲಾಗಿದೆ’ ಎಂದು ಪ್ರಶ್ನಿಸಿದರು.

‘ಈ ಸರ್ಕಾರಕ್ಕೆ ಏನೋ ಆಗಿದೆ ಎಂದು ನಾನು ಭಾವಿಸುತ್ತೇನೆ. ಅವರು ಭಾರತೀಯ ಯುವ ಮನಸ್ಸುಗಳನ್ನು ಏಕೆ ಗೊಂದಲಗೊಳಿಸುತ್ತಿದ್ದಾರೆಂದು ನನಗೆ ತಿಳಿದಿಲ್ಲ. ನಾವು ಭಾರತೀಯರಲ್ಲ, ಆದರೆ ನಾವು ಹೆಮ್ಮೆಯ ಇಂಡಿಯನ್ಸ್‌ ಎಂದು ಕೆಲವರು ಹೇಳುತ್ತಿದ್ದಾರೆ. ಅವರು ಯಾವುದೇ ನಿಲುವು ತಳೆದಿದ್ದರೂ ಅದು ಜನವಿರೋಧಿ, ಭಾರತ ವಿರೋಧಿ ಮತ್ತು ಇಂಡಿಯಾ ವಿರೋಧಿ ಎಂದು ನಾನು ಭಾವಿಸುತ್ತೇನೆ’ ಎಂದು ಹೇಳಿದರು.

ಎನ್‌ಡಿಎ ಸರ್ಕಾರವು ಎನ್‌ಸಿಇಆರ್‌ಟಿಯನ್ನು ಈ ‘ನಿರ್ಧಾರ’ ತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಈ ಕ್ರಮವು ‘ಸಂಪೂರ್ಣ ತಪ್ಪು’ ಎಂದ ಅವರು, ಈ ಶಿಫಾರಸನ್ನು ಸ್ವೀಕರಿಸದಂತೆ ಕೇಂದ್ರಕ್ಕೆ ಮನವಿ ಮಾಡಿದರು.

‘ನೀವು ಇಂಡಿಯಾದ ಇತಿಹಾಸವನ್ನು ಬದಲಾಯಿಸಲು ಸಾಧ್ಯವಿಲ್ಲ, ನೀವು ಕಾಂಗ್ರೆಸ್‌ನ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸಿದರೂ ಅದನ್ನು ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್‌ನ ಇತಿಹಾಸವು ದೇಶದ ಇತಿಹಾಸವಾಗಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷವು ದೇಶಕ್ಕೆ ದೊಡ್ಡ ಇತಿಹಾಸವನ್ನು ನೀಡಿದೆ. ನಾವು ಭಾರತಕ್ಕೆ ಸ್ವಾತಂತ್ರ್ಯ ಪಡೆದುಕೊಂಡೆವು, ನಾವು ಅದನ್ನು ಇಂಡಿಯನ್ ಸ್ವಾತಂತ್ರ್ಯ ಎಂದು ಕರೆಯುತ್ತೇವೆ. ನಾವು ಅದನ್ನು ಭಾರತ ಸ್ವಾತಂತ್ರ್ಯ ಎಂದು ಕರೆಯುವುದಿಲ್ಲ’ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಈ ಹಿಂದೆ ಇದ್ದದ್ದನ್ನು ಮುಂದುವರಿಸುತ್ತೇವೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸುತ್ತೇವೆ, ಯಾವುದನ್ನೂ ಬದಲಾಯಿಸುವುದಿಲ್ಲ ಎಂದು ಶಿವಕುಮಾರ್ ಹೇಳಿದರು.

andolanait

Recent Posts

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

32 mins ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

37 mins ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

1 hour ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

11 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

11 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

11 hours ago