BREAKING NEWS

ಫಲಿಸಿದ ಪ್ರಾರ್ಥನೆ; 17 ದಿನಗಳ ಕಾಲ ಉತ್ತರಕಾಶಿ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣೆ

ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದಾಗಿ ಸಿಲುಕಿಕೊಂಡಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣಾ ಕಾರ್ಯ ಯಶಸ್ವಿಯಾಗಿದೆ. ನವೆಂಬರ್‌ 12ರಂದು ಸುರಂಗ ಕುಸಿತ ಸಂಭವಿಸಿತ್ತು. ಬರೋಬ್ಬರಿ 17 ದಿನಗಳ ಸತತ ಕಾರ್ಯಾಚರಣೆಯ ಬಳಿಕ ಕಾರ್ಮಿಕರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಿಸಿದೆ.

ಕಾರ್ಮಿಕರು ಸಿಲುಕಿದ್ದ ಸ್ಥಳಕ್ಕೆ ಪೈಪ್‌ ಅಳವಡಿಸಿ ಎಲ್ಲಾ 41 ಕಾರ್ಮಿಕರನ್ನು ಹಗ್ಗಕ್ಕೆ ಸ್ಟ್ರೆಚರ್‌ ಕಟ್ಟಿ ಪೈಪ್‌ ಮುಖಾಂತರ ಹೊರತೆಗೆಯುವಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯಶಸ್ವಿಯಾಗಿದೆ. ಈ ಮೂಲಕ ಹಲವು ದಿನಗಳಿಂದ ಕಾರ್ಮಿಕರ ಕುಟುಂಬಸ್ಥರು ಹಾಗೂ ಅನೇಕ ಜನರ ಪ್ರಾರ್ಥನೆ ಫಲಿಸಿದೆ.

ಇನ್ನು ಸುರಂಗದಿಂದ ಹೊರತಂದ ಕಾರ್ಮಿಕರನ್ನು ಆಮ್ಲಜನಕ ಸೌಲಭ್ಯವುಳ್ಳ ಆಂಬುಲೆನ್ಸ್‌ ಮೂಲಕ 30 ಕಿಲೋಮೀಟರ್‌ ದೂರದಲ್ಲಿರುವ ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಕೇಂದ್ರಕ್ಕೆ ಸಾಗಿಸಲಾಗಿದ್ದು ಅಲ್ಲಿ ಎಲ್ಲಾ ಕಾರ್ಮಿಕರಿಗೂ ಆಮ್ಲಜನಕ ಬೆಂಬಲಿತ ಬೆಡ್‌ಗಳುಳ್ಳ ಪ್ರತ್ಯೇಕ ವಾರ್ಡ್‌ಗಳಲ್ಲಿ ಚಿಕಿತ್ಸೆ ಆರಂಭಿಸಲಾಗಿದೆ.

andolana

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

6 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

7 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

9 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

11 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

11 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

11 hours ago