BREAKING NEWS

ಫಲಿಸಿದ ಪ್ರಾರ್ಥನೆ; 17 ದಿನಗಳ ಕಾಲ ಉತ್ತರಕಾಶಿ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣೆ

ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದಾಗಿ ಸಿಲುಕಿಕೊಂಡಿದ್ದ ಎಲ್ಲಾ 41 ಕಾರ್ಮಿಕರ ರಕ್ಷಣಾ ಕಾರ್ಯ ಯಶಸ್ವಿಯಾಗಿದೆ. ನವೆಂಬರ್‌ 12ರಂದು ಸುರಂಗ ಕುಸಿತ ಸಂಭವಿಸಿತ್ತು. ಬರೋಬ್ಬರಿ 17 ದಿನಗಳ ಸತತ ಕಾರ್ಯಾಚರಣೆಯ ಬಳಿಕ ಕಾರ್ಮಿಕರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಿಸಿದೆ.

ಕಾರ್ಮಿಕರು ಸಿಲುಕಿದ್ದ ಸ್ಥಳಕ್ಕೆ ಪೈಪ್‌ ಅಳವಡಿಸಿ ಎಲ್ಲಾ 41 ಕಾರ್ಮಿಕರನ್ನು ಹಗ್ಗಕ್ಕೆ ಸ್ಟ್ರೆಚರ್‌ ಕಟ್ಟಿ ಪೈಪ್‌ ಮುಖಾಂತರ ಹೊರತೆಗೆಯುವಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯಶಸ್ವಿಯಾಗಿದೆ. ಈ ಮೂಲಕ ಹಲವು ದಿನಗಳಿಂದ ಕಾರ್ಮಿಕರ ಕುಟುಂಬಸ್ಥರು ಹಾಗೂ ಅನೇಕ ಜನರ ಪ್ರಾರ್ಥನೆ ಫಲಿಸಿದೆ.

ಇನ್ನು ಸುರಂಗದಿಂದ ಹೊರತಂದ ಕಾರ್ಮಿಕರನ್ನು ಆಮ್ಲಜನಕ ಸೌಲಭ್ಯವುಳ್ಳ ಆಂಬುಲೆನ್ಸ್‌ ಮೂಲಕ 30 ಕಿಲೋಮೀಟರ್‌ ದೂರದಲ್ಲಿರುವ ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಕೇಂದ್ರಕ್ಕೆ ಸಾಗಿಸಲಾಗಿದ್ದು ಅಲ್ಲಿ ಎಲ್ಲಾ ಕಾರ್ಮಿಕರಿಗೂ ಆಮ್ಲಜನಕ ಬೆಂಬಲಿತ ಬೆಡ್‌ಗಳುಳ್ಳ ಪ್ರತ್ಯೇಕ ವಾರ್ಡ್‌ಗಳಲ್ಲಿ ಚಿಕಿತ್ಸೆ ಆರಂಭಿಸಲಾಗಿದೆ.

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

23 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

23 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

23 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

23 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

23 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

23 hours ago