BREAKING NEWS

NEET ರದ್ದುಗೊಳಿಸಲಾಗುವುದು: ತಮಿಳುನಾಡು ಸಿಎಂ ಸ್ಟಾಲಿನ್

ನವದೆಹಲಿ : ಚೆನ್ನೈನ 19 ವರ್ಷದ ಎಂಬಿಬಿಎಸ್ ಆಕಾಂಕ್ಷಿಯೊಬ್ಬ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET) ಸೀಟು ಪಡೆಯಲು ವಿಫಲರಾದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೆಲವೇ ದಿನಗಳ ಬಳಿಕ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು NEET ಅನ್ನು ರದ್ದುಗೊಳಿಸುವುದಾಗಿ ವಿದ್ಯಾರ್ಥಿಗಳಿಗೆ ಸೋಮವಾರ ಭರವಸೆ ನೀಡಿದ್ದಾರೆ.

ಯಾವುದೇ ರೀತಿಯ ಆತ್ಮಹತ್ಯಾ ಪ್ರವೃತ್ತಿಯನ್ನು ಬೆಳೆಸಿಕೊಳ್ಳದೆ ಆತ್ಮಸ್ಥೈರ್ಯದಿಂದ ಜೀವನವನ್ನು ಎದುರಿಸಬೇಕು ಎಂದು ಸ್ಟಾಲಿನ್ ಹೇಳಿದರು.

“ಯಾವುದೇ ಸಂದರ್ಭದಲ್ಲೂ ಯಾವುದೇ ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ಕಳೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಬಾರದು ಎಂದು ನಾನು ಮನವಿ ಮಾಡುತ್ತೇನೆ. ನಿಮ್ಮ ಬೆಳವಣಿಗೆಗೆ ಅಡ್ಡಿಯಾಗಿರುವ NEET ಅನ್ನು ರದ್ದುಗೊಳಿಸಲಾಗುವುದು. ರಾಜ್ಯ ಸರಕಾರವು ಈ ನಿಟ್ಟಿನಲ್ಲಿ ಕಾನೂನು ಉಪಕ್ರಮದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಸ್ಟಾಲಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

19 ವರ್ಷದ ವೈದ್ಯಕೀಯ ಆಕಾಂಕ್ಷಿ ಜಗದೀಶ್ವರನ್ ಚೆನ್ನೈನಲ್ಲಿ ಎರಡು ಬಾರಿ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಂತರ ಆತನ ತಂದೆ ಸೆಲ್ವಂ ಕೂಡ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯಪಾಲ ಆರ್.ಎನ್.ರವಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ, ರಾಜಕೀಯ ಬದಲಾವಣೆಗಳು ನಡೆದಾಗ ಕೆಲವೇ ತಿಂಗಳಲ್ಲಿ NEET ತಡೆಗೋಡೆ ಕುಸಿಯಲಿದೆ ಎಂದು ಹೇಳಿದ್ದಾರೆ.

andolanait

Recent Posts

ಬೆಂಗಳೂರಿನಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ ಬಸ್‌

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು…

10 mins ago

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ ಗಾಮಿನಿ ಚೀತಾ

ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್‌…

25 mins ago

ಗ್ರಾಮದೇವತೆ ಹಬ್ಬದಲ್ಲಿ ಅವಘಡ: ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವು

ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…

1 hour ago

ಹುಣಸೂರು| ಅಕ್ರಮ ರಸಗೊಬ್ಬರ ದಾಸ್ತಾನು ಗೋದಾಮಿನ ಮೇಲೆ ದಾಳಿ: 1296 ಮೂಟೆ ಯೂರಿಯಾ ವಶ

ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…

1 hour ago

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

4 hours ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

4 hours ago