ನವದೆಹಲಿ : ನೆಹರೂ ವಸ್ತು ಸಂಗ್ರಹಾಲಯಕ್ಕೆ ಪ್ರಧಾನ ಮಂತ್ರಿ ವಸ್ತು ಸಂಗ್ರಹಾಲಯ ಎಂದು ಮರು ನಾಮಕರಣ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ನೆಹರೂ ತಮ್ಮ ಹೆಸರಿನಿಂದ ಖ್ಯಾತರಾಗಿಲ್ಲ, ಬದಲಿಗೆ ತಮ್ಮ ಕೆಲಸಕ್ಕೆ ಖ್ಯಾತರಾಗಿದ್ದಾರೆ ಎಂದು ಹೇಳಿದ್ದಾರೆ ಎಂದು hindustantimes.com ವರದಿ ಮಾಡಿದೆ.
ನೆಹರೂ ವಸ್ತು ಸಂಗ್ರಹಾಲಯದ ಮರು ನಾಮಕರಣ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಡುವೆ ನಡೆಯುತ್ತಿರುವ ತೀಕ್ಷ್ಣ ವಾಕ್ಸಮರದ ನಡುವೆ ರಾಹುಲ್ ಗಾಂಧಿಯವರ ಈ ಪ್ರತಿಕ್ರಿಯೆ ಹೊರಬಿದ್ದಿದೆ.
“ನೆಹರೂಜೀಯ ಗುರುತು ಅವರ ಕೆಲಸದಲ್ಲಿದೆಯೇ ಹೊರತು ಹೆಸರಿನಲ್ಲಲ್ಲ” ಎಂದು ಲಡಾಖ್ ಗೆ ವಿಮಾನ ನಿಲ್ದಾಣದಿಂದ ತೆರಳುವ ಮುನ್ನ ರಾಹುಲ್ ಗಾಂಧಿ ಹೇಳಿದ್ದಾರೆ.
ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು ಆಗಸ್ಟ್ 14ರಿಂದ ಪ್ರಧಾನ ಮಂತ್ರಿ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…