BREAKING NEWS

ಇಷ್ಟೊಂದು ಸುಳ್ಳು’ ಹೇಳುವ ಪ್ರಧಾನಿಯನ್ನು ನೋಡಿಲ್ಲ: ಸಿಎಂ ಸಿದ್ದರಾಮಯ್ಯ

ಸಾಂಗ್ಲಿ: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಷ್ಟೊಂದು ‘ಸುಳ್ಳು’ ಹೇಳುವ ಪ್ರಧಾನಿಯನ್ನು ನೋಡಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ  ರಾಜ್ಯ ಕಾಂಗ್ರೆಸ್ ನಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು. ನರೇಂದ್ರ ಮೋದಿ ಸರ್ಕಾರವನ್ನು ಸೋಲಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ ಎಂದರು.

2014 ರಲ್ಲಿ ಮೋದಿ ಜನರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂ ಜಮೆ, ಎರಡು ಕೋಟಿ ಉದ್ಯೋಗ ಸೃಷ್ಟಿ ಮತ್ತು ಅಚ್ಚೇ ದಿನ್ (ಒಳ್ಳೆಯ ದಿನಗಳು) ತರುವ ಬಗ್ಗೆ ಮಾತನಾಡಿದ್ದರು.  ಈ ರೀತಿಯ ಏನಾದರೂ ಆಗಿದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗೆ ರಾಜ್ಯದ ಮೂಲೆ ಮೂಲೆಗಳಿಗೆ ಭೇಟಿ ನೀಡಿ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ವಿವರಿಸಿದೇವು, ವಿವಿಧ ಕೆಲಸಗಳಿಗಾಗಿ 40 ಪರ್ಸೆಂಟ್ ಕಮಿಷನ್ ಬಗ್ಗೆ ಜನರಿಗೆ ಮನವರಿಕೆ ಮಾಡಲಾಯಿತು. ಬಿಜೆಪಿ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಬಿಜೆಪಿ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ ಹಿಂದೆ ಬಿಜೆಪಿ ಗೆದ್ದಿದ್ದು ಜನಾದೇಶದಿಂದಲ್ಲ, ಶಾಸಕರಿಗೆ ಹಣದ ಆಮಿಷ ಒಡ್ಡುವ ಆಪರೇಷನ್ ಕಮಲ ಮೂಲಕ ಅಧಿಕಾರಕ್ಕೆ ಬಂದಿದ್ದರು ಎಂದು ತಿಳಿಸಿದ ಮುಖ್ಯಮಂತ್ರಿ,  ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ-ದೇವೇಂದ್ರ ಫಡ್ನವೀಸ್ ಸರ್ಕಾರ ಕೂಡ ಭ್ರಷ್ಟವಾಗಿದೆ ಮತ್ತು ಅವರನ್ನು ಸೋಲಿಸುವುದು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಕೆಲಸವಾಗಿದೆ ಎಂದು ಅವರು ಹೇಳಿದರು. ಮುಂದಿನ ವರ್ಷ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ದೇಶ, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ನಾವೆಲ್ಲರೂ ಮತ್ತೊಂದು ಸ್ವಾತಂತ್ರ್ಯ ಹೋರಾಟವನ್ನು ನಡೆಸಬೇಕಾಗಿದೆ. ನಾನು ಮುಖ್ಯಮಂತ್ರಿಯಾಗಲು ಅಂಬೇಡ್ಕರ್ ಕಾರಣ.  ಬಿಜೆಪಿಯವರು ಧರ್ಮ, ಪ್ರದೇಶ, ಜಾತಿ ಮತ್ತು ಭಾಷೆಯ ಆಧಾರದ ಮೇಲೆ ಜನರನ್ನು ವಿಭಜಿಸುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಪ್ರಾರಂಭವಾಗಬೇಕಿದ್ದ ಐದು ಖಾತರಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದಂತೆ ಭಾರತೀಯ ಆಹಾರ ನಿಗಮಕ್ಕೆ ಬಿಜೆಪಿ ಹೇಳುತ್ತಿದೆ ಎಂದು ಸಿದ್ಧರಾಮಯ್ಯ ಆರೋಪಿಸಿದರು.

ಸಂವಿಧಾನವನ್ನು ಬದಲಾಯಿಸಲು ಕಾಂಗ್ರೆಸ್ ಎಂದಿಗೂ ಬಿಡುವುದಿಲ್ಲ ಮತ್ತು ಅದನ್ನು ರಕ್ಷಿಸಲು ಪಕ್ಷದ ಎಲ್ಲಾ ಕಾರ್ಯಕರ್ತರು ಯಾವುದೇ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂದು ಕರೆ ನೀಡಿದ ಸಿದ್ದರಾಮಯ್ಯ, ಸಾಂಗ್ಲಿಯ ಜತ್ ತಾಲೂಕಿನ ನೀರಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ಜನರಿಗೆ ನೀರು ಸಿಗುವಂತೆ ಮಾಡುವುದಾಗಿ ಭರವಸೆ ನೀಡಿದರು.

andolanait

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

46 mins ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

1 hour ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

1 hour ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

3 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

4 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

4 hours ago