BREAKING NEWS

ಆಗಸ್ಟ್‌ ಅಂತ್ಯದೊಳಗೆ ಹೊಸ ಬಿಪಿಎಲ್‌-ಎಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ

ಬೆಂಗಳೂರು : ಈ ತಿಂಗಳ ಅಂತ್ಯದೊಳಗೆ ಹೊಸ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‍ಗಳನ್ನು ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2,95,986 ಹೊಸ ಪಡಿತರಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ. ಸ್ಥಳ ಪರಿಶೀಲಿಸಿ ಅರ್ಹರಿಗೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 25 ಲಕ್ಷ ಬಿಪಿಎಲ್ ಕುಟುಂಬದವರಿಗೆ ಪಡಿತರ ವಿತರಿಸಲಾಗುತ್ತಿದೆ. ಪಡಿತರ ಕಾರ್ಡ್ ಹೊಂದಿದ್ದರೂ ಹಲವು ತಿಂಗಳುಗಳಿಂದ ಪಡಿತರ ಪಡೆಯದವರ ಬಗ್ಗೆಯೂ ತನಿಖೆ ನಡೆಸಲಾಗುವುದು. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ತಿಳಿದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಡಿತರ ಚೀಟಿಯಲ್ಲಿರುವ ಮೃತರ ಹೆಸರು ತೆಗೆಯಲು, ಕುಟುಂಬ ಸದಸ್ಯರನ್ನು ಸೇರಿಸಿಕೊಳ್ಳುವುದು ಸೇರಿದಂತೆ ಅಗತ್ಯ ತಿದ್ದುಪಡಿಗಾಗಿ ಒಂದು ತಿಂಗಳು ಅವಕಾಶ ನೀಡಲಾಗಿದೆ. ಇದರಿಂದಾಗಿ ಹೊಸ ಕಾರ್ಡ್‍ಗಳನ್ನು ನೀಡಲು ಅಧಿಕಾರಿಗಳು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ ಎಂದರು.

ರಾಜ್ಯದಲ್ಲಿ 1.28 ಕೋಟಿ ಪಡಿತರ ಚೀಟಿ ಕುಟುಂಬಗಳಲ್ಲಿ 4.42. ಕೋಟಿ ಫಲಾನುಭವಿಗಳು ಇದ್ದಾರೆ. ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ.ಉಳಿದಂತೆ 28 ಲಕ್ಷ ಕುಟುಂಬಗಳಲ್ಲಿ ಕಳೆದ 3 ತಿಂಗಳಲ್ಲಿ ಒಂದೂ ತಿಂಗಳು ಪಡಿತರ ಪಡೆದಿಲ್ಲ. 5,32,349 ಫಲಾನುಭವಿಗಳಿ ಅಂತ್ಯೋದಯ ಅನ್ನ ಪಡಿತರ ಚೀಟಿದಾರರಲ್ಲಿ ಮೂರು ಸದಸ್ಯರಿಗಿಂತ ಕಡಿಮೆ ಸದಸ್ಯರು ಇದ್ದಾರೆ. 3,40,425 ಫಲಾನುಭವಿಗಳಿಗೆ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಲ್ಲ. 19,27,225 ಪಡಿತರ ಚೀಟಿಗಳಿಗೆ ಆಧಾರ್ ಜೋಡಣೆ ಆಗಿಲ್ಲ ಮತ್ತು ಅನರ್ಹ ಪಡಿತರ ಚೀಟಿ ಆಗಿವೆ. ಇವರಿಗೆ ಹಣ ಖಾತೆಗೆ ಹಾಕಿಲ್ಲ ಎಂದು ಮಾಹಿತಿ ನೀಡಿದರು.

ಆಂಧ್ರ ಮತ್ತು ತೆಲಂಗಾಣ ರಾಜ್ಯಗಳು ಅಕ್ಕಿ ಕೊಡೋಕೆ ಈಗ ಮುಂದೆ ಬಂದಿದೆ. 34 ರೂ. ಮೇಲೆ ಹೆಚ್ಚು ಹಣ ಕೊಡಲು ಆಗುವುದಿಲ್ಲ ಎಂದು ಹೇಳಿದ್ದೇವೆ. ಎರಡು ರಾಜ್ಯಗಳ ಜೊತೆ ಮಾತಾಡುತ್ತಿದ್ದೇವೆ. ಸೆಪ್ಟೆಂಬರ್ ನಲ್ಲಿ ಅಕ್ಕಿ ಕೊಡೋ ಚಿಂತನೆ ಮಾಡಿದ್ದೇವೆ. ಹೆಚ್ಚು ದಿನ ಹಣ ಕೊಡೊಲ್ಲ. ನಾಫೆಡ್, ಕೇಂದ್ರೀಯ ಭಂಡಾರದಿಂದ ಅಕ್ಕಿ ಪಡೆಯೋ ಪ್ರಕ್ರಿಯೆ ನಡೆಸುತ್ತೇವೆ. ಆದಷ್ಟು ಬೇಗ ಅಕ್ಕಿ ಕೊಡುತ್ತೇವೆ ಎಂದರು.

ಹೊಸ ಪಡಿತರ ಚೀಟಿಗೆ ಜುಲೈ ಅಂತ್ಯಕ್ಕೆ 2,95,986 ಅರ್ಜಿ ಬಂದಿವೆ. ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕಾರ್ಡ್ ನೀಡುವ ಪ್ರಕ್ರಿಯೆ ನಿಂತಿತ್ತು. ಈಗ ಫಲಾನುಭವಿಗಳ ಮಾಹಿತಿಯನ್ನ ಜಿಲ್ಲೆಗಳಿಂದ ಪಡೆದು ನಂತರ ಆರ್ಥಿಕ ಇಲಾಖೆ ಅನುಮತಿ ಪಡೆದು ಕಾರ್ಡ್ ವಿವರಣೆ ಮಾಡಲಾಗುವುದು. ಬ್ಯಾಂಕ್ ಅಕೌಂಟ್ ಇಲ್ಲದ 28 ಲಕ್ಷ ಕುಟುಂಬಗಳಿಗೆ ಬ್ಯಾಂಕ್ ಖಾತೆ ಮಾಡಿಸಿದ ಬಳಿಕವೇ ಹಣ ಹಾಕಲಾಗವುದು ಎಂದು ಹೇಳಿದರು.

ಅಕ್ಕಿ ಜೊತೆ ರಾಗಿ ಮತ್ತು ಜೋಳ ಕೊಡಲು ಸರ್ಕಾರ ಚಿಂತನೆ ಮಾಡಿದೆ. 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರಿಂದ ರಾಗಿ, ಬಿಳಿ ಖರೀದಿಗೆ ಸರ್ಕಾರದ ನಿರ್ಧಾರ ಮಾಡಿದೆ. 8 ಲಕ್ಷ ಟನ್ ರಾಗಿ, 3 ಲಕ್ಷ ಜೋಳ ಖರೀದಿ ಮಾಡ್ತೀವಿ. ಅಕ್ಕಿ ಜೊತೆ ಜೋಳ,ರಾಗಿ ಕೂಡಾ ಪಡಿತರದಲ್ಲಿ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದರು.

ನೆರೆಯ ಆಂಧ್ರಪ್ರದೇಶದಲ್ಲಿರುವಂತೆ ಪಡಿತರ ಪಡೆಯುವವರಿಗೆ ಎ ಕಾರ್ಡ್, ವೈದ್ಯಕೀಯ ಸೇವೆಗಾಗಿ ಪಡಿತರ ಹೊಂದಿರುವವರಿಗೆ ಬಿ ಕಾರ್ಡ್ ನೀಡಲು ಚಿಂತನೆ ನಡೆಸಿದ್ದೇವೆ. ಅದರಂತೆ ನಮ್ಮ ಅಕಾರಿಗಳನ್ನು ಅಲ್ಲಿಗೆ ಕಳುಹಿಸಿ ಅಧ್ಯಯನ ಮಾಡಿ ವರದಿ ಬಂದ ನಂತರ ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈವರೆಗೆ ಆಧಾರ್ ಜೋಡಣೆ ಮಾಡಿಕೊಂಡಿರುವ 19,27,226 ಕಾರ್ಡ್‍ಗಳ ಪರಿಶೀಲನೆ ನಡೆದಿದೆ. ನ್ಯಾಯಬೆಲೆ ಅಂಗಡಿಗಳನ್ನು ವಿಂಗಡಿಸಿ ಆಹಾರ ಧಾನ್ಯಗಳನ್ನು ಪಡಿತರದಾರರಿಗೆ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರತಿ ಕ್ವಿಂಟಾಲ್ ರಾಗಿಗೆ 5 ಸಾವಿರ, ಜೋಳಕ್ಕೆ 4.5 ಸಾವಿರ ರೂ. ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಡಿತರ ವ್ಯವಸ್ಥೆಯಲ್ಲಿ 8 ಲಕ್ಷ ಟನ್ ರಾಗಿ ಹಾಗೂ 3 ಲಕ್ಷ ಟನ್ ಜೋಳ ಖರೀದಿಸಲು ಚಿಂತಿಸಲಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ 14 ಲಕ್ಷ ಬಿಪಿಎಲ್ ಕುಟುಂಬದವರಿಗೆ 20 ಸಾವಿರ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ಕೇಂದ್ರ ಸರ್ಕಾರಿ ಸ್ವಾಮ್ಯದಿಂದ ಪಡೆದು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಕಳೆದ ಮೂರು ತಿಂಗಳಿನಿಂದ ಪಡಿತರ ಪಡೆಯದ 5,32,349 ಲಕ್ಷ ಅಂತ್ಯೋದಯ ಪಡಿತರದಾರರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಇದರಲ್ಲಿ ಮೂವರು ಸದಸ್ಯರಿರುವ ಫಲಾನುಭವಿಗಳು 3,40,425 ಇದ್ದಾರೆ ಎಂದರು.

andolanait

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

29 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

1 hour ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago