BREAKING NEWS

ಚಿಕಿತ್ಸೆಗಾಗಿ ಹೊಸ ಬಿಪಿಎಲ್‌ ಕಾರ್ಡ್‌

ದಾವಣಗೆರೆ: ರಾಜ್ಯ ಸರಕಾರವು ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಮಾತ್ರ ಹೊಸದಾಗಿ ಆದ್ಯತಾ ಪಡಿತರ ಚೀಟಿ ನೀಡಲು ವಿಶೇಷ ಅನುಮೋದನೆ ನೀಡಿದೆ. ಸರಕಾರದ ಈ ಕ್ರಮದಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಡವರಿಗೆ ಪಡಿತರ ಚೀಟಿ ಆಸರೆಯಾಗುವ ಭರವಸೆ ಮೂಡಿದೆ.

ತುರ್ತು ವೈದ್ಯಕೀಯ ಚಿಕಿತ್ಸೆಗೆ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿರುವ, ಸಲ್ಲಿಕೆಯಾಗುವ ಅರ್ಜಿಗಳಿಗೆ ಸಂಬಂಧಿಸಿ ಅನುಮೋದನೆ ನೀಡಲು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸರಕಾರದ ಅನುಮತಿ ಕೋರಿತ್ತು. ಸಕಾರಾತ್ಮಕವಾಗಿ ಸ್ಪಂದಿಸಿರುವ ಸರಕಾರ ಕೆಲವು ಸ್ಪಷ್ಟ ನಿರ್ದೇಶನಗಳೊಂದಿಗೆ ಒಪ್ಪಿಗೆ ಸೂಚಿಸಿದೆ.

ಅರ್ಜಿ ಎಲ್ಲಿ ಸಲ್ಲಿಸಬೇಕು?

ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹೊಸ ಆದ್ಯತಾ ಪಡಿತರ ಚೀಟಿ ಪಡೆಯಲಿಚ್ಛಿಸುವವರು ತಮ್ಮ ವ್ಯಾಪ್ತಿಯ ತಹಸೀಲ್ದಾರ್‌ಗೆ ಅಗತ್ಯ ವೈದ್ಯಕೀಯ ದಾಖಲೆ ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವ ಬಗ್ಗೆ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.

ಪ್ರತ್ಯೇಕ ಆದ್ಯತಾ ಪಡಿತರ ಚೀಟಿ ?

ವೈದ್ಯಕೀಯ ಉದ್ದೇಶಕ್ಕೆ ಸೀಮಿತವಾಗಿ ಆಂಧ್ರಪ್ರದೇಶ ಮಾದರಿಯಲ್ಲಿ ಪ್ರತ್ಯೇಕ ಬಿಪಿಎಲ್‌ ಪಡಿತರ ಚೀಟಿ ನೀಡಲು ಸರಕಾರ ಚಿಂತನೆ ನಡೆಸಿದೆ ಎಂದು ಈಚೆಗಷ್ಟೇ ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿಕೆ ನೀಡಿದ್ದರು. ಮುಂದಿನ ದಿನಗಳಲ್ಲಿ ವೈದ್ಯಕೀಯ ಉದ್ದೇಶಕ್ಕಾಗಿಯೇ ಪ್ರತ್ಯೇಕ ಆದ್ಯತಾ ಪಡಿತರ ಚೀಟಿ ನೀಡಬಹುದಾದ ಸಾಧ್ಯತೆಗೆ ಪುಷ್ಟಿ ದೊರಕಿದೆ.

ಇದು ಪ್ರತ್ಯೇಕ

ಕಾರ್ಡ್‌ ಅಲ್ಲ. ವೈದ್ಯಕೀಯ ಕ್ಕಾಗಿಯೇ ಪ್ರತ್ಯೇಕ ಕಾರ್ಡ್‌ ವಿತರಿಸುವ ವಿಚಾರ ಇನ್ನೂ ಚಿಂತನೆ ಹಂತದಲ್ಲಿದೆ. ಪ್ರಸ್ತುತ ವೈದ್ಯಕೀಯ ಉದ್ದೇಶಕ್ಕೆ ನೀಡುವ ಆದ್ಯತಾ ಪಡಿತರ ಚೀಟಿ ಮಾಮೂಲಿ ಪಡಿತರ ಚೀಟಿಯಾಗಿದೆ. ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿ, ಮಾರ್ಗಸೂಚಿ ಪ್ರಕಾರ ಅರ್ಹರಿಗೆ ಶೀಘ್ರ ಹೊಸ ಪಡಿತರ ಚೀಟಿ ನೀಡಲಾಗುವುದು.

-ಸಿದ್ರಾಮ ಮಾರಿಹಾಳ, ಉಪನಿರ್ದೇಶಕರು, ಆಹಾರ ಇಲಾಖೆ, ದಾವಣಗೆರೆ

andolanait

Recent Posts

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

16 mins ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

27 mins ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

46 mins ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

2 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

2 hours ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

3 hours ago