BREAKING NEWS

ಚಿಕಿತ್ಸೆಗಾಗಿ ಹೊಸ ಬಿಪಿಎಲ್‌ ಕಾರ್ಡ್‌

ದಾವಣಗೆರೆ: ರಾಜ್ಯ ಸರಕಾರವು ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಮಾತ್ರ ಹೊಸದಾಗಿ ಆದ್ಯತಾ ಪಡಿತರ ಚೀಟಿ ನೀಡಲು ವಿಶೇಷ ಅನುಮೋದನೆ ನೀಡಿದೆ. ಸರಕಾರದ ಈ ಕ್ರಮದಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಡವರಿಗೆ ಪಡಿತರ ಚೀಟಿ ಆಸರೆಯಾಗುವ ಭರವಸೆ ಮೂಡಿದೆ.

ತುರ್ತು ವೈದ್ಯಕೀಯ ಚಿಕಿತ್ಸೆಗೆ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿರುವ, ಸಲ್ಲಿಕೆಯಾಗುವ ಅರ್ಜಿಗಳಿಗೆ ಸಂಬಂಧಿಸಿ ಅನುಮೋದನೆ ನೀಡಲು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸರಕಾರದ ಅನುಮತಿ ಕೋರಿತ್ತು. ಸಕಾರಾತ್ಮಕವಾಗಿ ಸ್ಪಂದಿಸಿರುವ ಸರಕಾರ ಕೆಲವು ಸ್ಪಷ್ಟ ನಿರ್ದೇಶನಗಳೊಂದಿಗೆ ಒಪ್ಪಿಗೆ ಸೂಚಿಸಿದೆ.

ಅರ್ಜಿ ಎಲ್ಲಿ ಸಲ್ಲಿಸಬೇಕು?

ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹೊಸ ಆದ್ಯತಾ ಪಡಿತರ ಚೀಟಿ ಪಡೆಯಲಿಚ್ಛಿಸುವವರು ತಮ್ಮ ವ್ಯಾಪ್ತಿಯ ತಹಸೀಲ್ದಾರ್‌ಗೆ ಅಗತ್ಯ ವೈದ್ಯಕೀಯ ದಾಖಲೆ ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವ ಬಗ್ಗೆ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.

ಪ್ರತ್ಯೇಕ ಆದ್ಯತಾ ಪಡಿತರ ಚೀಟಿ ?

ವೈದ್ಯಕೀಯ ಉದ್ದೇಶಕ್ಕೆ ಸೀಮಿತವಾಗಿ ಆಂಧ್ರಪ್ರದೇಶ ಮಾದರಿಯಲ್ಲಿ ಪ್ರತ್ಯೇಕ ಬಿಪಿಎಲ್‌ ಪಡಿತರ ಚೀಟಿ ನೀಡಲು ಸರಕಾರ ಚಿಂತನೆ ನಡೆಸಿದೆ ಎಂದು ಈಚೆಗಷ್ಟೇ ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿಕೆ ನೀಡಿದ್ದರು. ಮುಂದಿನ ದಿನಗಳಲ್ಲಿ ವೈದ್ಯಕೀಯ ಉದ್ದೇಶಕ್ಕಾಗಿಯೇ ಪ್ರತ್ಯೇಕ ಆದ್ಯತಾ ಪಡಿತರ ಚೀಟಿ ನೀಡಬಹುದಾದ ಸಾಧ್ಯತೆಗೆ ಪುಷ್ಟಿ ದೊರಕಿದೆ.

ಇದು ಪ್ರತ್ಯೇಕ

ಕಾರ್ಡ್‌ ಅಲ್ಲ. ವೈದ್ಯಕೀಯ ಕ್ಕಾಗಿಯೇ ಪ್ರತ್ಯೇಕ ಕಾರ್ಡ್‌ ವಿತರಿಸುವ ವಿಚಾರ ಇನ್ನೂ ಚಿಂತನೆ ಹಂತದಲ್ಲಿದೆ. ಪ್ರಸ್ತುತ ವೈದ್ಯಕೀಯ ಉದ್ದೇಶಕ್ಕೆ ನೀಡುವ ಆದ್ಯತಾ ಪಡಿತರ ಚೀಟಿ ಮಾಮೂಲಿ ಪಡಿತರ ಚೀಟಿಯಾಗಿದೆ. ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿ, ಮಾರ್ಗಸೂಚಿ ಪ್ರಕಾರ ಅರ್ಹರಿಗೆ ಶೀಘ್ರ ಹೊಸ ಪಡಿತರ ಚೀಟಿ ನೀಡಲಾಗುವುದು.

-ಸಿದ್ರಾಮ ಮಾರಿಹಾಳ, ಉಪನಿರ್ದೇಶಕರು, ಆಹಾರ ಇಲಾಖೆ, ದಾವಣಗೆರೆ

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

42 mins ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

57 mins ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

1 hour ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

1 hour ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

1 hour ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

2 hours ago