BREAKING NEWS

ಚಿಕಿತ್ಸೆಗಾಗಿ ಹೊಸ ಬಿಪಿಎಲ್‌ ಕಾರ್ಡ್‌

ದಾವಣಗೆರೆ: ರಾಜ್ಯ ಸರಕಾರವು ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಮಾತ್ರ ಹೊಸದಾಗಿ ಆದ್ಯತಾ ಪಡಿತರ ಚೀಟಿ ನೀಡಲು ವಿಶೇಷ ಅನುಮೋದನೆ ನೀಡಿದೆ. ಸರಕಾರದ ಈ ಕ್ರಮದಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಡವರಿಗೆ ಪಡಿತರ ಚೀಟಿ ಆಸರೆಯಾಗುವ ಭರವಸೆ ಮೂಡಿದೆ.

ತುರ್ತು ವೈದ್ಯಕೀಯ ಚಿಕಿತ್ಸೆಗೆ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿರುವ, ಸಲ್ಲಿಕೆಯಾಗುವ ಅರ್ಜಿಗಳಿಗೆ ಸಂಬಂಧಿಸಿ ಅನುಮೋದನೆ ನೀಡಲು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸರಕಾರದ ಅನುಮತಿ ಕೋರಿತ್ತು. ಸಕಾರಾತ್ಮಕವಾಗಿ ಸ್ಪಂದಿಸಿರುವ ಸರಕಾರ ಕೆಲವು ಸ್ಪಷ್ಟ ನಿರ್ದೇಶನಗಳೊಂದಿಗೆ ಒಪ್ಪಿಗೆ ಸೂಚಿಸಿದೆ.

ಅರ್ಜಿ ಎಲ್ಲಿ ಸಲ್ಲಿಸಬೇಕು?

ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹೊಸ ಆದ್ಯತಾ ಪಡಿತರ ಚೀಟಿ ಪಡೆಯಲಿಚ್ಛಿಸುವವರು ತಮ್ಮ ವ್ಯಾಪ್ತಿಯ ತಹಸೀಲ್ದಾರ್‌ಗೆ ಅಗತ್ಯ ವೈದ್ಯಕೀಯ ದಾಖಲೆ ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವ ಬಗ್ಗೆ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.

ಪ್ರತ್ಯೇಕ ಆದ್ಯತಾ ಪಡಿತರ ಚೀಟಿ ?

ವೈದ್ಯಕೀಯ ಉದ್ದೇಶಕ್ಕೆ ಸೀಮಿತವಾಗಿ ಆಂಧ್ರಪ್ರದೇಶ ಮಾದರಿಯಲ್ಲಿ ಪ್ರತ್ಯೇಕ ಬಿಪಿಎಲ್‌ ಪಡಿತರ ಚೀಟಿ ನೀಡಲು ಸರಕಾರ ಚಿಂತನೆ ನಡೆಸಿದೆ ಎಂದು ಈಚೆಗಷ್ಟೇ ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿಕೆ ನೀಡಿದ್ದರು. ಮುಂದಿನ ದಿನಗಳಲ್ಲಿ ವೈದ್ಯಕೀಯ ಉದ್ದೇಶಕ್ಕಾಗಿಯೇ ಪ್ರತ್ಯೇಕ ಆದ್ಯತಾ ಪಡಿತರ ಚೀಟಿ ನೀಡಬಹುದಾದ ಸಾಧ್ಯತೆಗೆ ಪುಷ್ಟಿ ದೊರಕಿದೆ.

ಇದು ಪ್ರತ್ಯೇಕ

ಕಾರ್ಡ್‌ ಅಲ್ಲ. ವೈದ್ಯಕೀಯ ಕ್ಕಾಗಿಯೇ ಪ್ರತ್ಯೇಕ ಕಾರ್ಡ್‌ ವಿತರಿಸುವ ವಿಚಾರ ಇನ್ನೂ ಚಿಂತನೆ ಹಂತದಲ್ಲಿದೆ. ಪ್ರಸ್ತುತ ವೈದ್ಯಕೀಯ ಉದ್ದೇಶಕ್ಕೆ ನೀಡುವ ಆದ್ಯತಾ ಪಡಿತರ ಚೀಟಿ ಮಾಮೂಲಿ ಪಡಿತರ ಚೀಟಿಯಾಗಿದೆ. ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿ, ಮಾರ್ಗಸೂಚಿ ಪ್ರಕಾರ ಅರ್ಹರಿಗೆ ಶೀಘ್ರ ಹೊಸ ಪಡಿತರ ಚೀಟಿ ನೀಡಲಾಗುವುದು.

-ಸಿದ್ರಾಮ ಮಾರಿಹಾಳ, ಉಪನಿರ್ದೇಶಕರು, ಆಹಾರ ಇಲಾಖೆ, ದಾವಣಗೆರೆ

andolanait

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

49 mins ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

5 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

5 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

5 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

5 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

8 hours ago