BREAKING NEWS

ಚಿಕಿತ್ಸೆಗಾಗಿ ಹೊಸ ಬಿಪಿಎಲ್‌ ಕಾರ್ಡ್‌

ದಾವಣಗೆರೆ: ರಾಜ್ಯ ಸರಕಾರವು ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಮಾತ್ರ ಹೊಸದಾಗಿ ಆದ್ಯತಾ ಪಡಿತರ ಚೀಟಿ ನೀಡಲು ವಿಶೇಷ ಅನುಮೋದನೆ ನೀಡಿದೆ. ಸರಕಾರದ ಈ ಕ್ರಮದಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಡವರಿಗೆ ಪಡಿತರ ಚೀಟಿ ಆಸರೆಯಾಗುವ ಭರವಸೆ ಮೂಡಿದೆ.

ತುರ್ತು ವೈದ್ಯಕೀಯ ಚಿಕಿತ್ಸೆಗೆ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿರುವ, ಸಲ್ಲಿಕೆಯಾಗುವ ಅರ್ಜಿಗಳಿಗೆ ಸಂಬಂಧಿಸಿ ಅನುಮೋದನೆ ನೀಡಲು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸರಕಾರದ ಅನುಮತಿ ಕೋರಿತ್ತು. ಸಕಾರಾತ್ಮಕವಾಗಿ ಸ್ಪಂದಿಸಿರುವ ಸರಕಾರ ಕೆಲವು ಸ್ಪಷ್ಟ ನಿರ್ದೇಶನಗಳೊಂದಿಗೆ ಒಪ್ಪಿಗೆ ಸೂಚಿಸಿದೆ.

ಅರ್ಜಿ ಎಲ್ಲಿ ಸಲ್ಲಿಸಬೇಕು?

ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹೊಸ ಆದ್ಯತಾ ಪಡಿತರ ಚೀಟಿ ಪಡೆಯಲಿಚ್ಛಿಸುವವರು ತಮ್ಮ ವ್ಯಾಪ್ತಿಯ ತಹಸೀಲ್ದಾರ್‌ಗೆ ಅಗತ್ಯ ವೈದ್ಯಕೀಯ ದಾಖಲೆ ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವ ಬಗ್ಗೆ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.

ಪ್ರತ್ಯೇಕ ಆದ್ಯತಾ ಪಡಿತರ ಚೀಟಿ ?

ವೈದ್ಯಕೀಯ ಉದ್ದೇಶಕ್ಕೆ ಸೀಮಿತವಾಗಿ ಆಂಧ್ರಪ್ರದೇಶ ಮಾದರಿಯಲ್ಲಿ ಪ್ರತ್ಯೇಕ ಬಿಪಿಎಲ್‌ ಪಡಿತರ ಚೀಟಿ ನೀಡಲು ಸರಕಾರ ಚಿಂತನೆ ನಡೆಸಿದೆ ಎಂದು ಈಚೆಗಷ್ಟೇ ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿಕೆ ನೀಡಿದ್ದರು. ಮುಂದಿನ ದಿನಗಳಲ್ಲಿ ವೈದ್ಯಕೀಯ ಉದ್ದೇಶಕ್ಕಾಗಿಯೇ ಪ್ರತ್ಯೇಕ ಆದ್ಯತಾ ಪಡಿತರ ಚೀಟಿ ನೀಡಬಹುದಾದ ಸಾಧ್ಯತೆಗೆ ಪುಷ್ಟಿ ದೊರಕಿದೆ.

ಇದು ಪ್ರತ್ಯೇಕ

ಕಾರ್ಡ್‌ ಅಲ್ಲ. ವೈದ್ಯಕೀಯ ಕ್ಕಾಗಿಯೇ ಪ್ರತ್ಯೇಕ ಕಾರ್ಡ್‌ ವಿತರಿಸುವ ವಿಚಾರ ಇನ್ನೂ ಚಿಂತನೆ ಹಂತದಲ್ಲಿದೆ. ಪ್ರಸ್ತುತ ವೈದ್ಯಕೀಯ ಉದ್ದೇಶಕ್ಕೆ ನೀಡುವ ಆದ್ಯತಾ ಪಡಿತರ ಚೀಟಿ ಮಾಮೂಲಿ ಪಡಿತರ ಚೀಟಿಯಾಗಿದೆ. ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿ, ಮಾರ್ಗಸೂಚಿ ಪ್ರಕಾರ ಅರ್ಹರಿಗೆ ಶೀಘ್ರ ಹೊಸ ಪಡಿತರ ಚೀಟಿ ನೀಡಲಾಗುವುದು.

-ಸಿದ್ರಾಮ ಮಾರಿಹಾಳ, ಉಪನಿರ್ದೇಶಕರು, ಆಹಾರ ಇಲಾಖೆ, ದಾವಣಗೆರೆ

andolanait

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

1 hour ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

1 hour ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

1 hour ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

1 hour ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

1 hour ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

1 hour ago