ಲಂಡನ್: ಭಾರತವನ್ನು 200 ವರ್ಷಗಳಿಗೂ ಹೆಚ್ಚು ಕಾಲ ಆಳಿದ ಬ್ರಿಟಿಷ್ ಸಾಮ್ರಾಜ್ಯಕ್ಕೆ ಈಗ ಭಾರತ ಮೂಲದವರೇ ಆದ ರಿಷಿ ಸುನಕ್ ಅಧಿಪತಿ. ಆದರೆ, ಪ್ರಧಾನಿ ಜವಾಬ್ದಾರಿಗೆ ಹೆಗಲು ನೀಡಿರುವ ಸುನಕ್ ಮುಂದೆ ಸವಾಲುಗಳ ಶಿಖರವು ಇನ್ನಷ್ಟು ಹೆಚ್ಚಿದೆ. ಅವುಗಳನ್ನು ನಿಭಾಯಿಸುವ ಜಾಣತನ ಮುಂದಿನ ಅವರ ರಾಜಕೀಯ ಗುರಿಗಳ ಮೇಲೆ ನಿರ್ಧರಿಸಲಾಗಿದೆ.
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಆರ್ಥಿಕ ವಿಷಯದಲ್ಲಿ ನಿಪುಣರು. ಮಾಜಿ ಪಿಎಂ ಬೋರಿಸ್ ಜಾನ್ಸನ್ ಸಂಪುಟದಲ್ಲಿ ವಿತ್ತ ಸಚಿವರಾಗಿದ್ದ ಸಂಧರ್ಭದಲ್ಲಿ ಕೋವಿಡ್ ಬಿಕ್ಕಟ್ಟಿನ ಸಮಸ್ಯೆಯಲ್ಲೂ ಬ್ರಿಟನ್ ಆರ್ಥಿಕತೆ ಪಾತಾಳಕ್ಕೆ ಕುಸಿಯದಂತೆ ಶಿಸ್ತು ಬದ್ಧತೆಯಿಂದ ಮಾಡಿದ ಕೆಲಸ ಅವರಿಗೀಗ ಪ್ರಧಾನಿ ಪಟ್ಟ ತಂದುಕೊಟ್ಟಿದೆ.
ತೆರಿಗೆ ಪದ್ಧತಿ, ವಿದ್ಯುತ್ ದರ ನೀತಿವಿಧಾನ, ಸೇರಿದಂತೆ ಹಲವು ಆರ್ಥಿಕ ಬಿಕ್ಕಟ್ಟುಗಳನ್ನು ನಿಭಾಯಿಸುವ ಹಾಗೂ ಸ್ವಪಕ್ಷೀಯರ ವಿರೋಧವನ್ನು ತಣಿಸುವ ಮೂಲಕ ಪಕ್ಷ ಹಾಗೂ ದೇಶವನ್ನು ಮುನ್ನಡೆಸುವ ಸವಾಲು ಅವರ ಮುಂದಿದೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…