ಲಂಡನ್: ಭಾರತವನ್ನು 200 ವರ್ಷಗಳಿಗೂ ಹೆಚ್ಚು ಕಾಲ ಆಳಿದ ಬ್ರಿಟಿಷ್ ಸಾಮ್ರಾಜ್ಯಕ್ಕೆ ಈಗ ಭಾರತ ಮೂಲದವರೇ ಆದ ರಿಷಿ ಸುನಕ್ ಅಧಿಪತಿ. ಆದರೆ, ಪ್ರಧಾನಿ ಜವಾಬ್ದಾರಿಗೆ ಹೆಗಲು ನೀಡಿರುವ ಸುನಕ್ ಮುಂದೆ ಸವಾಲುಗಳ ಶಿಖರವು ಇನ್ನಷ್ಟು ಹೆಚ್ಚಿದೆ. ಅವುಗಳನ್ನು ನಿಭಾಯಿಸುವ ಜಾಣತನ ಮುಂದಿನ ಅವರ ರಾಜಕೀಯ ಗುರಿಗಳ ಮೇಲೆ ನಿರ್ಧರಿಸಲಾಗಿದೆ.
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಆರ್ಥಿಕ ವಿಷಯದಲ್ಲಿ ನಿಪುಣರು. ಮಾಜಿ ಪಿಎಂ ಬೋರಿಸ್ ಜಾನ್ಸನ್ ಸಂಪುಟದಲ್ಲಿ ವಿತ್ತ ಸಚಿವರಾಗಿದ್ದ ಸಂಧರ್ಭದಲ್ಲಿ ಕೋವಿಡ್ ಬಿಕ್ಕಟ್ಟಿನ ಸಮಸ್ಯೆಯಲ್ಲೂ ಬ್ರಿಟನ್ ಆರ್ಥಿಕತೆ ಪಾತಾಳಕ್ಕೆ ಕುಸಿಯದಂತೆ ಶಿಸ್ತು ಬದ್ಧತೆಯಿಂದ ಮಾಡಿದ ಕೆಲಸ ಅವರಿಗೀಗ ಪ್ರಧಾನಿ ಪಟ್ಟ ತಂದುಕೊಟ್ಟಿದೆ.
ತೆರಿಗೆ ಪದ್ಧತಿ, ವಿದ್ಯುತ್ ದರ ನೀತಿವಿಧಾನ, ಸೇರಿದಂತೆ ಹಲವು ಆರ್ಥಿಕ ಬಿಕ್ಕಟ್ಟುಗಳನ್ನು ನಿಭಾಯಿಸುವ ಹಾಗೂ ಸ್ವಪಕ್ಷೀಯರ ವಿರೋಧವನ್ನು ತಣಿಸುವ ಮೂಲಕ ಪಕ್ಷ ಹಾಗೂ ದೇಶವನ್ನು ಮುನ್ನಡೆಸುವ ಸವಾಲು ಅವರ ಮುಂದಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…