ನವದೆಹಲಿ : ಕ್ಯಾನ್ಸರ್ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಲೀಂಭಾಯಿ ಎಂದೇ ಖ್ಯಾತರಾಗಿದ್ದ ಅವರು, 1934ರಲ್ಲಿ ಅಫ್ಗಾನಿಸ್ತಾನದ ಕಾಬೂಲಿನಲ್ಲಿ ಜನಿಸಿದ್ದರು. ನಂತರದ ದಿನಗಳಲ್ಲಿ ಅವರ ಕುಟುಂಬವು ಭಾರತಕ್ಕೆ ಬಂದು ನೆಲೆಸಿತ್ತು. ಅವರು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಗುಜರಾತ್, ರಾಜಸ್ಥಾನ ಮತ್ತು ಸೌರಾಷ್ಟ್ರ ತಂಡಗಳನ್ನು ಪ್ರತಿನಿಧಿಸಿದ್ದರು. ಎಡಗೈ ಆಲ್ರೌಂಡರ್ ಆಗಿದ್ದ ಸಲೀಂ ಅವರು 170 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದರು. 1960 ರಿಂದ 1973ರ ಅವಧಿಯಲ್ಲಿ ಭಾರತ ತಂಡದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.
‘ಸಿಕ್ಸರ್ ಬಾರಿಸುವುದೇ ಅಪರೂಪ ಎಂಬಂತಿದ್ದ ಕಾಲದಲ್ಲಿ ಪ್ರೇಕ್ಷಕರ ಕೋರಿಕೆ ಮೇರೆಗೆ ಸಿಕ್ಸರ್ ಬಾರಿಸುತ್ತಿದ್ದ ದುರಾನಿ ಯಾವಾಗಲೂ ನೆನಪಿನಲ್ಲಿ ಉಳಿಯುವಂಥವರು’ ಎಂದು ಮುಂಬೈನ ಕುಟುಂಬ ಸ್ನೇಹಿತರೊಬ್ಬರು ಸ್ಮರಿಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ : ಸಲೀಂ ದುರಾನಿ ಅವರು ಕ್ರಿಕೆಟ್ ದಂತಕಥೆ. ಕ್ರಿಕೆಟ್ ಜಗತ್ತಿನಲ್ಲಿ ಭಾರತದ ಉದಯಕ್ಕೆ ಪ್ರಮುಖ ಕೊಡುಗೆ ನೀಡಿದವರು. ಮೈದಾನದ ಒಳಗೆ ಮತ್ತು ಹೊರಗೆ ಅವರು ತಮ್ಮ ಆಟದ ಶೈಲಿಗೆ ಹೆಸರುವಾಸಿಯಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…