ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೋಕ ಸಭೆಯ ಸಚಿವಾಲಯವು ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಪಿಐಎಲ್ ನಲ್ಲಿ ಹೇಳಲಾಗಿದೆ.
ನೂತನ ಸಂಸತ್ ಭವನದ ಉದ್ಘಾಟನೆ ಕುರಿತು ಮೇ 18 ರಂದು ಲೋಕಸಭೆಯ ಕಾರ್ಯದರ್ಶಿ ನೀಡಿದ ಹೇಳಿಕೆ ಮತ್ತು ರಾಷ್ಟ್ರಪತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ವಕೀಲರಾದ ಜಯ ಸುಕಿನ್ ಸಲ್ಲಿಸಿರುವ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.
ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆ ಮತ್ತು ಸಂಸತ್ತಿನ ಮುಖ್ಯಸ್ಥರಾಗಿದ್ದು, ಅವರಿಂದಲೇ ನೂತನ ಕಟ್ಟಡ ಉದ್ಘಾಟಿಸುವಂತೆ ನಿರ್ದೇಶಿಸಬೇಕೆಂದು ಅವರು ಕೋರಿದ್ದಾರೆ.
ಲೋಕಸಭೆ ಸ್ಪೀಕರ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಸುಮಾರು 20 ವಿರೋಧ ಪಕ್ಷಗಳು ನೂತನ ಸಂಸತ್ತಿನ ಕಟ್ಟಡವನ್ನು ಪ್ರಧಾನ ಮಂತ್ರಿ ಉದ್ಘಾಟಿಸುವುದನ್ನು ಖಂಡಿಸಿದ್ದು, ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…