BREAKING NEWS

ನೂತನ ಸಂಸತ್ ಕಟ್ಟಡ ವಿವಾದ: ರಾಷ್ಟ್ರಪತಿಯೇ ಉದ್ಘಾಟಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಕೆ

ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೋಕ ಸಭೆಯ ಸಚಿವಾಲಯವು ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಪಿಐಎಲ್ ನಲ್ಲಿ ಹೇಳಲಾಗಿದೆ.

ನೂತನ ಸಂಸತ್ ಭವನದ ಉದ್ಘಾಟನೆ ಕುರಿತು ಮೇ 18 ರಂದು ಲೋಕಸಭೆಯ ಕಾರ್ಯದರ್ಶಿ ನೀಡಿದ ಹೇಳಿಕೆ ಮತ್ತು ರಾಷ್ಟ್ರಪತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ವಕೀಲರಾದ ಜಯ ಸುಕಿನ್ ಸಲ್ಲಿಸಿರುವ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.

ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆ ಮತ್ತು ಸಂಸತ್ತಿನ ಮುಖ್ಯಸ್ಥರಾಗಿದ್ದು, ಅವರಿಂದಲೇ ನೂತನ ಕಟ್ಟಡ ಉದ್ಘಾಟಿಸುವಂತೆ ನಿರ್ದೇಶಿಸಬೇಕೆಂದು ಅವರು ಕೋರಿದ್ದಾರೆ.

ಲೋಕಸಭೆ ಸ್ಪೀಕರ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಸುಮಾರು 20 ವಿರೋಧ ಪಕ್ಷಗಳು ನೂತನ ಸಂಸತ್ತಿನ ಕಟ್ಟಡವನ್ನು ಪ್ರಧಾನ ಮಂತ್ರಿ ಉದ್ಘಾಟಿಸುವುದನ್ನು ಖಂಡಿಸಿದ್ದು, ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ. 

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

1 hour ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

2 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

2 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

4 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

5 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

5 hours ago