BREAKING NEWS

ನೂತನ ಸಂಸತ್ ಕಟ್ಟಡ ವಿವಾದ: ರಾಷ್ಟ್ರಪತಿಯೇ ಉದ್ಘಾಟಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಕೆ

ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೋಕ ಸಭೆಯ ಸಚಿವಾಲಯವು ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಪಿಐಎಲ್ ನಲ್ಲಿ ಹೇಳಲಾಗಿದೆ.

ನೂತನ ಸಂಸತ್ ಭವನದ ಉದ್ಘಾಟನೆ ಕುರಿತು ಮೇ 18 ರಂದು ಲೋಕಸಭೆಯ ಕಾರ್ಯದರ್ಶಿ ನೀಡಿದ ಹೇಳಿಕೆ ಮತ್ತು ರಾಷ್ಟ್ರಪತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ವಕೀಲರಾದ ಜಯ ಸುಕಿನ್ ಸಲ್ಲಿಸಿರುವ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.

ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆ ಮತ್ತು ಸಂಸತ್ತಿನ ಮುಖ್ಯಸ್ಥರಾಗಿದ್ದು, ಅವರಿಂದಲೇ ನೂತನ ಕಟ್ಟಡ ಉದ್ಘಾಟಿಸುವಂತೆ ನಿರ್ದೇಶಿಸಬೇಕೆಂದು ಅವರು ಕೋರಿದ್ದಾರೆ.

ಲೋಕಸಭೆ ಸ್ಪೀಕರ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಸುಮಾರು 20 ವಿರೋಧ ಪಕ್ಷಗಳು ನೂತನ ಸಂಸತ್ತಿನ ಕಟ್ಟಡವನ್ನು ಪ್ರಧಾನ ಮಂತ್ರಿ ಉದ್ಘಾಟಿಸುವುದನ್ನು ಖಂಡಿಸಿದ್ದು, ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಲು ನಿರ್ಧರಿಸಿವೆ. 

andolanait

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

26 mins ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

32 mins ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

51 mins ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

2 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

2 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

2 hours ago