BREAKING NEWS

ಶ್ರೀಗಂಧ ಬೆಳೆಯಲು ಶೀಘ್ರವೇ ಹೊಸ ನೀತಿ; ಅರಣ್ಯ ಸಚಿವ ಈಶ್ವರ ಖಂಡ್ರೆ

ಕಲಬುರಗಿ: ರೈತರು ಸೇರಿದಂತೆ ಇತರ ವ್ಯಕ್ತಿಗಳು ತಮ್ಮ ಜಮೀನುಗಳಲ್ಲಿ ಶ್ರೀಗಂಧ ಬೆಳೆಯುವ ನಿಟ್ಟಿನಲ್ಲಿ ಇರುವ ನೀತಿ ನಿಯಮಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶೀಘ್ರವೇ ಹೊಸ ನೀತಿ ಪ್ರಕಟಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ನಗರದಲ್ಲಿ ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಅವರನ್ನು ರೈತರು ಹಾಗೂ ಶ್ರೀಗಂಧ ಬೆಳೆಗಾರರು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು ಶ್ರೀಗಂಧ ಬೆಳೆಯಲು ಇರುವ ತೊಡಕುಗಳನ್ನು ಕೂಡಲೇ ಸರಳಿಕರಣ ಗೊಳಿಸುವ ನಿಟ್ಟಿನಲ್ಲಿ ಸಭೆ ಮಾಡಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಂತಿಮ ಗೊಳಿಸಲಾಗುವುದು ಎಂದರು.

ಇದಕ್ಕೂ ಮೊದಲು ಅರಣ್ಯ ಭವನದಲ್ಲಿ ಕಲ್ಬುರ್ಗಿ ವಲಯ ಅರಣ್ಯ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ವಿಸ್ತರಣೆಗೆ ಬೇಕಾದ ಅನುದಾನವನ್ನು ಶೀಘ್ರವೇ ನೀಡಲಾಗುವುದು. ಅಲ್ಲದೆ, ಕೊರತೆ ಇರುವ ಹುದ್ದೆಗಳನ್ನು ಕೂಡ ಶೀಘ್ರವೇ ಭರ್ತಿ ಮಾಡಲಾಗುವುದು ಎಂದರು.

ಸಾಮಾಜಿಕ ಅರಣ್ಯ ಯೋಜನೆ ಅಡಿಯಲ್ಲಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ನೀಡುತ್ತಿರುವ ಸಸಿಗಳನ್ನು ಮರಗಳನ್ನಾಗಿ ಬೆಳೆಸುವ ನಿಟ್ಟಿನಲ್ಲಿ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು. ಅಲ್ಲದೆ ಪ್ರೋತ್ಸಾಹ ಧನ ಯೋಜನೆಯಲ್ಲಿ ರೈತರಿಗೆ ನೀಡಲಾಗುತ್ತಿರುವ ಸಸಿಗಳು ಎಷ್ಟು ಪ್ರಮಾಣದಲ್ಲಿ ಉಳಿದುಕೊಂಡಿವೆ ಎಂದು ಮಾಹಿತಿ ಕೇಳಿದಾಗ, ಅಧಿಕಾರಿಗಳು ಶೇಕಡ 80ರಷ್ಟು ಉಳಿದಿದೆ ಎಂದು ಹೇಳಿದರು.

ಆಗ ಸಚಿವರು ಮಲೆನಾಡಿನಲ್ಲೇ ಶೇಕಡಾ 70 ಹಾಗೂ 60ರಷ್ಟು ಉಳಿಯುವಾಗ ಬಿಸಿಲಿನಾಡಿನಾದ ಕಲ್ಯಾಣದಲ್ಲಿ 80% ಉಳಿಯಲು ಹೇಗೆ ಸಾಧ್ಯ ಈ ಕುರಿತು ಸರಿಯಾಗಿ ಪರೀಕ್ಷೆ ಮಾಡಿ ತಿಳಿಸಿ ಎಂದರು.ನರ್ಸರಿ ಬೆಳೆಯುವ ಪ್ರಮಾಣವನ್ನು ಹೆಚ್ಚಿಸುವುದು ಹಾಗೂ ಪಾರ್ಕುಗಳ ನಿರ್ಮಾಣ ಮತ್ತು ಪ್ರವಾಸಿ ತಾಣಗಳನ್ನಾಗಿ ಪರಿವರ್ತನೆ ಮಾಡುವಂತಹ ಕೆಲವು ವಿಶೇಷ ಸ್ಥಳಗಳ ಬಗ್ಗೆ ಮಾಹಿತಿ ನೀಡುವಂತೆ ಮತ್ತು ದೈವಿ ವನದ ಕುರಿತು ಹೆಚ್ಚು ಮುತುವರ್ಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಸಾಮಾಜಿಕ ಅರಣ್ಯವನ್ನು ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಐದು ಕೋಟಿ ಸಸಿಗಳನ್ನು ನೆಡುವ ಉದ್ದೇಶ ಸಾಪಲ್ಯ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ರಾಯಚೂರು, ಯಾದಗಿರಿ ಬೀದರ್ ಹಾಗೂ ಕಲ್ಬುರ್ಗಿ ಜಿಲ್ಲೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

1 hour ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

2 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

3 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

3 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

3 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

3 hours ago