BREAKING NEWS

ಶ್ರೀಗಂಧ ಬೆಳೆಯಲು ಶೀಘ್ರವೇ ಹೊಸ ನೀತಿ; ಅರಣ್ಯ ಸಚಿವ ಈಶ್ವರ ಖಂಡ್ರೆ

ಕಲಬುರಗಿ: ರೈತರು ಸೇರಿದಂತೆ ಇತರ ವ್ಯಕ್ತಿಗಳು ತಮ್ಮ ಜಮೀನುಗಳಲ್ಲಿ ಶ್ರೀಗಂಧ ಬೆಳೆಯುವ ನಿಟ್ಟಿನಲ್ಲಿ ಇರುವ ನೀತಿ ನಿಯಮಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶೀಘ್ರವೇ ಹೊಸ ನೀತಿ ಪ್ರಕಟಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ನಗರದಲ್ಲಿ ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಅವರನ್ನು ರೈತರು ಹಾಗೂ ಶ್ರೀಗಂಧ ಬೆಳೆಗಾರರು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು ಶ್ರೀಗಂಧ ಬೆಳೆಯಲು ಇರುವ ತೊಡಕುಗಳನ್ನು ಕೂಡಲೇ ಸರಳಿಕರಣ ಗೊಳಿಸುವ ನಿಟ್ಟಿನಲ್ಲಿ ಸಭೆ ಮಾಡಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಂತಿಮ ಗೊಳಿಸಲಾಗುವುದು ಎಂದರು.

ಇದಕ್ಕೂ ಮೊದಲು ಅರಣ್ಯ ಭವನದಲ್ಲಿ ಕಲ್ಬುರ್ಗಿ ವಲಯ ಅರಣ್ಯ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ವಿಸ್ತರಣೆಗೆ ಬೇಕಾದ ಅನುದಾನವನ್ನು ಶೀಘ್ರವೇ ನೀಡಲಾಗುವುದು. ಅಲ್ಲದೆ, ಕೊರತೆ ಇರುವ ಹುದ್ದೆಗಳನ್ನು ಕೂಡ ಶೀಘ್ರವೇ ಭರ್ತಿ ಮಾಡಲಾಗುವುದು ಎಂದರು.

ಸಾಮಾಜಿಕ ಅರಣ್ಯ ಯೋಜನೆ ಅಡಿಯಲ್ಲಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ನೀಡುತ್ತಿರುವ ಸಸಿಗಳನ್ನು ಮರಗಳನ್ನಾಗಿ ಬೆಳೆಸುವ ನಿಟ್ಟಿನಲ್ಲಿ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು. ಅಲ್ಲದೆ ಪ್ರೋತ್ಸಾಹ ಧನ ಯೋಜನೆಯಲ್ಲಿ ರೈತರಿಗೆ ನೀಡಲಾಗುತ್ತಿರುವ ಸಸಿಗಳು ಎಷ್ಟು ಪ್ರಮಾಣದಲ್ಲಿ ಉಳಿದುಕೊಂಡಿವೆ ಎಂದು ಮಾಹಿತಿ ಕೇಳಿದಾಗ, ಅಧಿಕಾರಿಗಳು ಶೇಕಡ 80ರಷ್ಟು ಉಳಿದಿದೆ ಎಂದು ಹೇಳಿದರು.

ಆಗ ಸಚಿವರು ಮಲೆನಾಡಿನಲ್ಲೇ ಶೇಕಡಾ 70 ಹಾಗೂ 60ರಷ್ಟು ಉಳಿಯುವಾಗ ಬಿಸಿಲಿನಾಡಿನಾದ ಕಲ್ಯಾಣದಲ್ಲಿ 80% ಉಳಿಯಲು ಹೇಗೆ ಸಾಧ್ಯ ಈ ಕುರಿತು ಸರಿಯಾಗಿ ಪರೀಕ್ಷೆ ಮಾಡಿ ತಿಳಿಸಿ ಎಂದರು.ನರ್ಸರಿ ಬೆಳೆಯುವ ಪ್ರಮಾಣವನ್ನು ಹೆಚ್ಚಿಸುವುದು ಹಾಗೂ ಪಾರ್ಕುಗಳ ನಿರ್ಮಾಣ ಮತ್ತು ಪ್ರವಾಸಿ ತಾಣಗಳನ್ನಾಗಿ ಪರಿವರ್ತನೆ ಮಾಡುವಂತಹ ಕೆಲವು ವಿಶೇಷ ಸ್ಥಳಗಳ ಬಗ್ಗೆ ಮಾಹಿತಿ ನೀಡುವಂತೆ ಮತ್ತು ದೈವಿ ವನದ ಕುರಿತು ಹೆಚ್ಚು ಮುತುವರ್ಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಸಾಮಾಜಿಕ ಅರಣ್ಯವನ್ನು ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಐದು ಕೋಟಿ ಸಸಿಗಳನ್ನು ನೆಡುವ ಉದ್ದೇಶ ಸಾಪಲ್ಯ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ರಾಯಚೂರು, ಯಾದಗಿರಿ ಬೀದರ್ ಹಾಗೂ ಕಲ್ಬುರ್ಗಿ ಜಿಲ್ಲೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

1 hour ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

1 hour ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

1 hour ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

2 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

5 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

6 hours ago