BREAKING NEWS

ಶ್ರೀಗಂಧ ಬೆಳೆಯಲು ಶೀಘ್ರವೇ ಹೊಸ ನೀತಿ; ಅರಣ್ಯ ಸಚಿವ ಈಶ್ವರ ಖಂಡ್ರೆ

ಕಲಬುರಗಿ: ರೈತರು ಸೇರಿದಂತೆ ಇತರ ವ್ಯಕ್ತಿಗಳು ತಮ್ಮ ಜಮೀನುಗಳಲ್ಲಿ ಶ್ರೀಗಂಧ ಬೆಳೆಯುವ ನಿಟ್ಟಿನಲ್ಲಿ ಇರುವ ನೀತಿ ನಿಯಮಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶೀಘ್ರವೇ ಹೊಸ ನೀತಿ ಪ್ರಕಟಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ನಗರದಲ್ಲಿ ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಅವರನ್ನು ರೈತರು ಹಾಗೂ ಶ್ರೀಗಂಧ ಬೆಳೆಗಾರರು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು ಶ್ರೀಗಂಧ ಬೆಳೆಯಲು ಇರುವ ತೊಡಕುಗಳನ್ನು ಕೂಡಲೇ ಸರಳಿಕರಣ ಗೊಳಿಸುವ ನಿಟ್ಟಿನಲ್ಲಿ ಸಭೆ ಮಾಡಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಂತಿಮ ಗೊಳಿಸಲಾಗುವುದು ಎಂದರು.

ಇದಕ್ಕೂ ಮೊದಲು ಅರಣ್ಯ ಭವನದಲ್ಲಿ ಕಲ್ಬುರ್ಗಿ ವಲಯ ಅರಣ್ಯ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ವಿಸ್ತರಣೆಗೆ ಬೇಕಾದ ಅನುದಾನವನ್ನು ಶೀಘ್ರವೇ ನೀಡಲಾಗುವುದು. ಅಲ್ಲದೆ, ಕೊರತೆ ಇರುವ ಹುದ್ದೆಗಳನ್ನು ಕೂಡ ಶೀಘ್ರವೇ ಭರ್ತಿ ಮಾಡಲಾಗುವುದು ಎಂದರು.

ಸಾಮಾಜಿಕ ಅರಣ್ಯ ಯೋಜನೆ ಅಡಿಯಲ್ಲಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ನೀಡುತ್ತಿರುವ ಸಸಿಗಳನ್ನು ಮರಗಳನ್ನಾಗಿ ಬೆಳೆಸುವ ನಿಟ್ಟಿನಲ್ಲಿ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು. ಅಲ್ಲದೆ ಪ್ರೋತ್ಸಾಹ ಧನ ಯೋಜನೆಯಲ್ಲಿ ರೈತರಿಗೆ ನೀಡಲಾಗುತ್ತಿರುವ ಸಸಿಗಳು ಎಷ್ಟು ಪ್ರಮಾಣದಲ್ಲಿ ಉಳಿದುಕೊಂಡಿವೆ ಎಂದು ಮಾಹಿತಿ ಕೇಳಿದಾಗ, ಅಧಿಕಾರಿಗಳು ಶೇಕಡ 80ರಷ್ಟು ಉಳಿದಿದೆ ಎಂದು ಹೇಳಿದರು.

ಆಗ ಸಚಿವರು ಮಲೆನಾಡಿನಲ್ಲೇ ಶೇಕಡಾ 70 ಹಾಗೂ 60ರಷ್ಟು ಉಳಿಯುವಾಗ ಬಿಸಿಲಿನಾಡಿನಾದ ಕಲ್ಯಾಣದಲ್ಲಿ 80% ಉಳಿಯಲು ಹೇಗೆ ಸಾಧ್ಯ ಈ ಕುರಿತು ಸರಿಯಾಗಿ ಪರೀಕ್ಷೆ ಮಾಡಿ ತಿಳಿಸಿ ಎಂದರು.ನರ್ಸರಿ ಬೆಳೆಯುವ ಪ್ರಮಾಣವನ್ನು ಹೆಚ್ಚಿಸುವುದು ಹಾಗೂ ಪಾರ್ಕುಗಳ ನಿರ್ಮಾಣ ಮತ್ತು ಪ್ರವಾಸಿ ತಾಣಗಳನ್ನಾಗಿ ಪರಿವರ್ತನೆ ಮಾಡುವಂತಹ ಕೆಲವು ವಿಶೇಷ ಸ್ಥಳಗಳ ಬಗ್ಗೆ ಮಾಹಿತಿ ನೀಡುವಂತೆ ಮತ್ತು ದೈವಿ ವನದ ಕುರಿತು ಹೆಚ್ಚು ಮುತುವರ್ಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಸಾಮಾಜಿಕ ಅರಣ್ಯವನ್ನು ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಐದು ಕೋಟಿ ಸಸಿಗಳನ್ನು ನೆಡುವ ಉದ್ದೇಶ ಸಾಪಲ್ಯ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ರಾಯಚೂರು, ಯಾದಗಿರಿ ಬೀದರ್ ಹಾಗೂ ಕಲ್ಬುರ್ಗಿ ಜಿಲ್ಲೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

14 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

14 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

14 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

17 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

17 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

17 hours ago