ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳಲ್ಲಿ ಒಂದಾದ, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ “ಶಕ್ತಿ” ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆಂದೇ ಹೊಸದೊಂದು ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಹೇಳಿದ್ದಾರೆ.
‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳಿಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್ಗಳ ಅಗತ್ಯವಿದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್ಗಳನ್ನು ಪಡೆಯಬಹುದು ಎಂದು ರೆಡ್ಡಿ ತಿಳಿಸಿದ್ದಾರೆ.
ಹೊಸ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಗುರುತಿನ ಚೀಟಿಯನ್ನು ಅಪ್ಲೋಡ್ ಮಾಡುವ ಮೂಲಕ ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಸದ್ಯಕ್ಕೆ, ಸರ್ಕಾರ ನೀಡಿದ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮಹಿಳೆಯರು ಮೂರು ತಿಂಗಳವರೆಗೆ ಉಚಿತವಾಗಿ ಪ್ರಯಾಣಿಸಬಹುದು ಎಂದು ಅವರು ಹೇಳಿದ್ದಾರೆ.
ಈ ಯೋಜನೆಯು ರಸ್ತೆ ಸಾರಿಗೆ ನಿಗಮಗಳಿಗೆ (ಆರ್ಟಿಸಿ) ಹೆಚ್ಚಿನ ಅಧಿಕಾರ ನೀಡಿದೆ ಎಂದು ರೆಡ್ಡಿ ಹೇಳಿದರು.
ಯೋಜನೆಯಿಂದ ನಿಗಮಗಳ ಆದಾಯ ಹೆಚ್ಚಿದೆ. ಇದರಿಂದ ಸರ್ಕಾರ, ಪಾಲಿಕೆ ಹಾಗೂ ನಮ್ಮ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ. ಇದು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಶಕ್ತಿಹೀನಗೊಳಿಸಿದೆ. ಯಾಕೆಂದರೆ ಅವರು ಮಹಿಳೆಯರನ್ನು ಬೆಂಬಲಿಸುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಐದು ಚುನಾವಣಾ ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಹಯೋಜನೆಗೆ ಜೂನ್ 11 ರಂದು ಚಾಲನೆ ನೀಡಲಾಯಿತು. ಅಂದಿನಿಂದ 8,24,93,637 ಮಹಿಳೆಯರು ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ, ಮತ್ತು 194,50,13,686 ರೂಪಾಯಿ ಮೌಲ್ಯದ ಟಿಕೆಟ್ಗಳನ್ನು ವಿತರಿಸಲಾಗಿದೆ.
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…
• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…
ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…