ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳಲ್ಲಿ ಒಂದಾದ, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ “ಶಕ್ತಿ” ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆಂದೇ ಹೊಸದೊಂದು ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಹೇಳಿದ್ದಾರೆ.
‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳಿಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್ಗಳ ಅಗತ್ಯವಿದೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್ಗಳನ್ನು ಪಡೆಯಬಹುದು ಎಂದು ರೆಡ್ಡಿ ತಿಳಿಸಿದ್ದಾರೆ.
ಹೊಸ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಗುರುತಿನ ಚೀಟಿಯನ್ನು ಅಪ್ಲೋಡ್ ಮಾಡುವ ಮೂಲಕ ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಸದ್ಯಕ್ಕೆ, ಸರ್ಕಾರ ನೀಡಿದ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮಹಿಳೆಯರು ಮೂರು ತಿಂಗಳವರೆಗೆ ಉಚಿತವಾಗಿ ಪ್ರಯಾಣಿಸಬಹುದು ಎಂದು ಅವರು ಹೇಳಿದ್ದಾರೆ.
ಈ ಯೋಜನೆಯು ರಸ್ತೆ ಸಾರಿಗೆ ನಿಗಮಗಳಿಗೆ (ಆರ್ಟಿಸಿ) ಹೆಚ್ಚಿನ ಅಧಿಕಾರ ನೀಡಿದೆ ಎಂದು ರೆಡ್ಡಿ ಹೇಳಿದರು.
ಯೋಜನೆಯಿಂದ ನಿಗಮಗಳ ಆದಾಯ ಹೆಚ್ಚಿದೆ. ಇದರಿಂದ ಸರ್ಕಾರ, ಪಾಲಿಕೆ ಹಾಗೂ ನಮ್ಮ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ. ಇದು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಶಕ್ತಿಹೀನಗೊಳಿಸಿದೆ. ಯಾಕೆಂದರೆ ಅವರು ಮಹಿಳೆಯರನ್ನು ಬೆಂಬಲಿಸುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಐದು ಚುನಾವಣಾ ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಹಯೋಜನೆಗೆ ಜೂನ್ 11 ರಂದು ಚಾಲನೆ ನೀಡಲಾಯಿತು. ಅಂದಿನಿಂದ 8,24,93,637 ಮಹಿಳೆಯರು ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ, ಮತ್ತು 194,50,13,686 ರೂಪಾಯಿ ಮೌಲ್ಯದ ಟಿಕೆಟ್ಗಳನ್ನು ವಿತರಿಸಲಾಗಿದೆ.
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…