Mysore
20
broken clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ನಿಧನ: ಅಂತಿಮ ದರ್ಶನ ಪಡೆದ ನಿರ್ಮಲಾನಂದನಾಥ ಸ್ವಾಮೀಜಿ

ಹಾಸನ:  ಶ್ರವಣಬೆಳಗೊಳದ ಜೈನಮಠದ ಚಾವುಂಡರಾಯ ಸಭಾಮಂಟಪದಲ್ಲಿ ಮಧ್ಯಾಹ್ನ 12.30ರಿಂದ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ರ ನಂತರ ಮೆರವಣಿಗೆ ನಡೆಯಲಿದೆ. ನಂತರ ಶ್ರವಣಬೆಳಗೊಳದ ಚಂದ್ರಗಿರಿಯ ಚಿಕ್ಕಬೆಟ್ಟಕ್ಕೆ ಹೊಂದಿಕೊಂಡಿರುವ ತಾವರೆಕಟ್ಟೆಯ ಬೋಳುಬೆಟ್ಟದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ ಎಂದು ಮಠದ ಮೂಲಗಳು ತಿಳಿಸಿವೆ.

ಶ್ರವಣಬೆಳಗೊಳದ ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತಾಲ್ಲೂಕಿನ ಆದಿಚುಂಚನಗಿರಿ ಅಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದ ಶ್ರವಣಬೆಳಗೊಳದ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ಅವರ ಅಂತಿಮ ದರ್ಶನ‌ ಪಡೆದ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶಾಸಕ ಸುರೇಶ್ ಗೌಡ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!