BREAKING NEWS

ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ನಿಧನ: ಅಂತಿಮ ದರ್ಶನ ಪಡೆದ ನಿರ್ಮಲಾನಂದನಾಥ ಸ್ವಾಮೀಜಿ

ಹಾಸನ:  ಶ್ರವಣಬೆಳಗೊಳದ ಜೈನಮಠದ ಚಾವುಂಡರಾಯ ಸಭಾಮಂಟಪದಲ್ಲಿ ಮಧ್ಯಾಹ್ನ 12.30ರಿಂದ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ರ ನಂತರ ಮೆರವಣಿಗೆ ನಡೆಯಲಿದೆ. ನಂತರ ಶ್ರವಣಬೆಳಗೊಳದ ಚಂದ್ರಗಿರಿಯ ಚಿಕ್ಕಬೆಟ್ಟಕ್ಕೆ ಹೊಂದಿಕೊಂಡಿರುವ ತಾವರೆಕಟ್ಟೆಯ ಬೋಳುಬೆಟ್ಟದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ ಎಂದು ಮಠದ ಮೂಲಗಳು ತಿಳಿಸಿವೆ.

ಶ್ರವಣಬೆಳಗೊಳದ ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತಾಲ್ಲೂಕಿನ ಆದಿಚುಂಚನಗಿರಿ ಅಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದ ಶ್ರವಣಬೆಳಗೊಳದ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ಅವರ ಅಂತಿಮ ದರ್ಶನ‌ ಪಡೆದ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶಾಸಕ ಸುರೇಶ್ ಗೌಡ.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

13 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

13 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

14 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

14 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

15 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

16 hours ago