BREAKING NEWS

ನಿಥಾರಿ ಹತ್ಯಾಕಾಂಡ: ಆರೋಪಿ ಮಣಿಂದರ್ ಸಿಂಗ್ ಪಂಧೇರ್ ಬಿಡುಗಡೆ

ನೋಯ್ಡಾ (ಉತ್ತರ ಪ್ರದೇಶ): ಇಡೀ ಭಾರತ ದೇಶಾದ್ಯಂತ ಸಂಚಲನ ಮೂಡಿಸಿದ್ದ ನಿಥಾರಿ ಹತ್ಯಾಕಾಂಡ ಪ್ರಕರಣದ ಆರೋಪಿ ಮಣಿಂದರ್ ಸಿಂಗ್ ಪಂಧೇರ್ ಜೈಲಿನಿಂದ ಬಿಡುಗಡೆ ಆಗಿದ್ಧಾನೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಇರುವ ಲುಕ್ಸಾರ್ ಕಾರಾಗೃಹದಿಂದ ಆರೋಪಿ ಮಣಿಂದರ್ ಸಿಂಗ್ ಪಂಧೇರ್‌ನನ್ನು ಬಿಡುಗಡೆ ಮಾಡಲಾಗಿದೆ.

ಕಳೆದ ಸೋಮವಾರ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ 65 ವರ್ಷ ವಯಸ್ಸಿನ ಉದ್ಯಮಿ ಮಣಿಂದರ್ ಸಿಂಗ್ ಪಂಧೇರ್‌ನನ್ನು ದೋಷ ಮುಕ್ತಗೊಳಿಸಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಮಣಿಂದರ್ ಸಿಂಗ್ ಪಂಧೇರ್ ಮನೆ ಕೆಲಸದ ಆಳು ಸುರೇಂದರ್ ಕೋಲಿ ವಿರುದ್ಧದ ದಾಖಲಾಗಿದ್ದ ಹಲವು ಪ್ರಕರಣಗಳ ಪೈಕಿ 12 ಪ್ರಕರಣಗಳಲ್ಲಿ ದೋಷ ಮುಕ್ತಗೊಳಿಸಿತ್ತು.
2005 – 2006ರ ನಡುವೆ ನಡೆದಿದ್ದ ಸರಣಿ ಹತ್ಯಾಕಾಂಡ ಪ್ರಕರಣಗಳಲ್ಲಿ ಸರ್ಕಾರಿ ವಕೀಲರು ಆರೋಪಿಗಳ ವಿರುದ್ಧದ ದೋಷಾರೋಪವನ್ನು ಸಾಬೀತು ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳಲ್ಲಿ ಆರೋಪಿಗಳನ್ನು ಖುಲಾಸೆ ಮಾಡಲಾಗಿತ್ತು. ಹಾಗೂ ಪೊಲೀಸರ ತನಿಖಾ ಪ್ರಕ್ರಿಯೆ ಬಗ್ಗೆಯೇ ಅನುಮಾನಗಳು ವ್ಯಕ್ತವಾಗಿವೆ. ಕೇವಲ ಅನುಮಾನದ ಆರೋಪದ ಮೇಲೆ ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ದೋಷಾರೋಪಪಟ್ಟಿ ದಾಖಲು ಮಾಡಲಾಗಿದ್ದು, ಆರೋಪಿಗಳ ವಿರುದ್ಧ ಆರೋಪಿಸಲಾಗಿದ್ದ ಅನುಮಾನಾಸ್ಪದ ಕೃತ್ಯವನ್ನು ಸಾಬೀತು ಮಾಡಲು ಸರ್ಕಾರಿ ವಕೀಲರು ವಿಫಲರಾಗಿದ್ದರೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.
ಸೋಮವಾರವೇ ನ್ಯಾಯಾಲಯ ನಿಥಾರಿ ಹತ್ಯಾಕಾಂಡ ಪ್ರಕರಣದಲ್ಲಿ ಮಣಿಂದರ್ ಸಿಂಗ್ ಪಂಧೇರ್ ದೋಷ ಮುಕ್ತ ಎಂದು ಹೇಳಿತ್ತು. ಇದೀಗ ಆರೋಪಿಯ ಬಿಡುಗಡೆಗೆ ಎರಡನೇ ಆದೇಶವೂ ನ್ಯಾಯಾಲಯದಿಂದ ಸಿಕ್ಕಿದೆ. ಹೀಗಾಗಿ, ಆತನನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಲುಕ್ಸಾರ್ ಕಾರಾಗೃಹದ ವರಿಷ್ಠಾಧಿಕಾರಿ ಅರುಣ್ ಪ್ರತಾಪ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜೈಲಿನ ವರಿಷ್ಠಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ ಒಂದು ಗಂಟೆ ಬಳಿಕ ಕಾರಾಗೃಹದ ಎಲ್ಲಾ ಪ್ರಕ್ರಿಯೆಗಳನ್ನೂ ಮುಕ್ತಾಯಗೊಳಿಸಿ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ.
ಇನ್ನು ನಿಥಾರಿ ಹತ್ಯಾಕಾಂಡ ಪ್ರಕರಣದ ಪ್ರಮುಖ ಆರೋಪಿ ಸುರೇಂದರ್ ಕೋಲಿ ಇನ್ನೂ ಕೂಡಾ ಜೈಲಿನಲ್ಲೇ ಇದ್ದಾನೆ. ಈತನನ್ನು ಉತ್ತರ ಪ್ರದೇಶದ ಗಾಜಿಯಾಬಾದ್‌ನ ದಸ್ನಾ ಕಾರಾಗೃಹದಲ್ಲಿ ಇರಿಸಲಾಗಿದೆ. ಆರೋಪಿಗಳಿಗೆ ಈ ಹಿಂದೆ ಕೆಳ ನ್ಯಾಯಾಲಯ ವಿಧಿಸಿದ್ದ ಮರಣ ದಂಡನೆ ಶಿಕ್ಷೆಯನ್ನು ರದ್ದು ಮಾಡಲಾಗಿದೆ. ಒಟ್ಟು 18 ಪ್ರಕರಣಗಳ ಪೈಕಿ 12 ಪ್ರಕರಣಗಳಲ್ಲಿ ಸುರೇಂದರ್ ಕೋಲಿ ಖುಲಾಸೆ ಆಗಿದ್ದಾನೆ. ಇನ್ನೂ 4 ಪ್ರಕರಣಗಳು ಆತನ ಮೇಲಿವೆ. ಈ ಪ್ರಕರಣಗಳ ಅಡಿ ಆರೋಪಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. 14 ವರ್ಷದ ಬಾಲಕಿಯ ಹತ್ಯೆ ಪ್ರಕರಣದ ಅಡಿ ಆರೋಪಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ.

ನೋಯ್ಡಾದ ನಿಥಾರಿಯಲ್ಲಿ ನಡೆದ ಮಕ್ಕಳ ಹಾಗೂ ಯುವತಿಯೊಬ್ಬಳ ಸರಣಿ ಹತ್ಯಾಕಾಂಡ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಮಣಿಂದರ್ ಸಿಂಗ್ ಪಂಧೇರ್ ಹಾಗೂ ಸುರೇಂದರ್ ಕೋಲಿಯನ್ನು ಪ್ರಮುಖ ಆರೋಪಿಗಳು ಎಂದು ಪರಿಗಣಿಸಲಾಗಿತ್ತು. ಕೆಳ ನ್ಯಾಯಾಲಯ ಆರೋಪಿಗಳಿಗೆ ಅತ್ಯಾಚಾರ ಹಾಗೂ ಕೊಲೆ ಆರೋಪದ ಅಡಿ ಮರಣ ದಂಡನೆ ಶಿಕ್ಷೆ ವಿಧಿಸಿತ್ತು.

ಬಳಿಕ ಒಂದೊಂದೇ ಪ್ರಕರಣಗಳಲ್ಲಿ ಆರೋಪಿಗಳು ದೋಷ ಮುಕ್ತರಾಗಿದ್ದಾರೆ. ಪ್ರಕರಣದ 2ನೇ ಆರೋಪಿ ಮಣಿಂದರ್ ಸಿಂಗ್ ಪಂಧೇರ್ ಜೈಲಿನಿಂದ ಹೊರಬಂದಿದ್ದು, ಮೊದಲ ಹಾಗೂ ಪ್ರಮುಖ ಆರೋಪಿ ಸುರೇಂದರ್ ಕೋಲಿ ಇನ್ನೂ ಜೈಲಿನಲ್ಲೇ ಇದ್ದಾನೆ. ಆತನ ವಿರುದ್ಧ ಇನ್ನೂ 4 ಪ್ರಕರಣಗಳು ಬಾಕಿ ಇವೆ.
ನೋಯ್ಡಾದ ಚರಂಡಿಗಳಲ್ಲಿ ಮಕ್ಕಳ ಅಸ್ಥಿ ಪಂಜರ ಪತ್ತೆಯಾಗುವ ಮೂಲಕ ಈ ಪ್ರಕರಣ ಬೆಳಕಿಗೆ ಬಂದಿತ್ತು. ಪೊಲೀಸರ ತನಿಖೆ ಮುಂದುವರೆದಂತೆ ಹಲವು ಅಸ್ಥಿ ಪಂಜರಗಳು ಪತ್ತೆಯಾದವು. ಈ ಮೂಲಕ ಈ ಪ್ರಕರಣ ದೇಶಾದ್ಯಂತ ಸುದ್ದಿಯಾಯ್ತು. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಭೀಕರ ಕೊಲೆ, ನರ ಮಾಂಸ ಭಕ್ಷಣೆ ಸೇರಿದಂತೆ ಹಲವು ಆರೋಪಗಳು ಇಬ್ಬರೂ ಆರೋಪಿಗಳ ಮೇಲಿವೆ.
andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

3 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

3 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

3 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

4 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

4 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

4 hours ago