BREAKING NEWS

ನಿಥಾರಿ ಹತ್ಯಾಕಾಂಡ: ಪ್ರಮುಖ ಆರೋಪಿ ಸುರಿಂದರ್ ಕೋಲಿ 12 ಕೇಸ್‌ಗಳಲ್ಲಿ ಖುಲಾಸೆ!

ನವದೆಹಲಿ : ಕುಖ್ಯಾತ ನಿಥಾರಿ ಹತ್ಯಾಕಾಂಡ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ದೋಷಿ ಎಂದು ಘೋಷಿತನಾಗಿ ಮರಣದಂಡನೆ ಶಿಕ್ಷೆ ವಿಧಿಸಲ್ಪಟ್ಟ ಸುರೀಂದರ್‌ ಕೋಲಿ ಎಂಬಾತನನ್ನು 12 ಪ್ರಕರಣಗಳಲ್ಲಿ ಇಂದು ಅಲಹಾಬಾದ್‌ ಹೈಕೋರ್ಟ್‌ ಖುಲಾಸೆಗೊಳಿಸಿದೆ. ಈ ಪ್ರಕರಣದ ಇನ್ನೋರ್ವ ಆರೋಪಿ ಮೊನಿಂದರ್‌ ಸಿಂಗ್‌ ಪಂಧೇರ್‌ ಎಂಬಾತನನ್ನು ಎರಡು ಪ್ರಕರಣಗಳಲ್ಲಿ ಖುಲಾಸೆಗೊಳಿಸಲಾಗಿದೆ.

ಹೈಕೋರ್ಟ್ ಆದೇಶದ ನಂತರ ಕೋಲಿ ಮತ್ತು ಪಂಧೇರ್‌ ಇಬ್ಬರ ಮರಣದಂಡನೆ ಶಿಕ್ಷೆಗಳು ರದ್ದುಗೊಂಡಂತಾಗಿವೆ.

ಸರಣಿ ಹತ್ಯೆಗಳು ಉತ್ತರ ಪ್ರದೇಶದ ನೊಯ್ಡಾದ ನಿಥಾರಿ ಪ್ರದೇಶದ ಮೊನಿಂದರ್‌ ಸಿಂಗ್‌ ಪಂಧೇರ್‌ನ ನಿವಾಸದಲ್ಲಿ 2005 ಮತ್ತು 2006 ನಡುವೆ ನಡೆದಿದ್ದವು. ಪಂಧೇರ್‌ ನಿವಾಸದಲ್ಲಿ ಸುರೀಂದರ್‌ ಕೊಲಿ ಸಹಾಯಕನಾಗಿ ದುಡಿಯುತ್ತಿದ್ದ.

ತನ್ನ ಉದ್ಯೋಗದಾತನ ಮನೆಯಲ್ಲಿ ಹಲವಾರು ಮಕ್ಕಳನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ಸುರೀಂದರ್‌ ದೋಷಿ ಎಂದು ಘೋಷಿತನಾಗಿದ್ದ. ಇಬ್ಬರೂ 20 ವರ್ಷದ ಯುವತಿಯ ಅತ್ಯಾಚಾರ ಹತ್ಯೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾಗಿತ್ತು.

ನಾಪತ್ತೆಯಾದ ಮಗುವೊಂದರ ದೇಹದ ಒಂದು ಭಾಗ ಪಂಧೇರ್‌ ನಿವಾಸದ ಪಕ್ಕದ ಚರಂಡಿಯಲ್ಲಿ ನೆರೆಹೊರೆಯವರು ಪತ್ತೆ ಹಚ್ಚಿದಾಗ ಇಡೀ ದೇಶವೇ ಬೆಚ್ಚಿ ಬೀಳುವ ವಿದ್ಯಮಾನ ಬೆಳಕಿಗೆ ಬಂದಿತ್ತು.

ತನಿಖೆ ಮುಂದುವರಿದಾಗ ಇನ್ನಷ್ಟು ಮಕ್ಕಳ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿತ್ತು.

ಸಿಬಿಐ 2017ರಲ್ಲಿ ಇಬ್ಬರ ವಿರುದ್ಧವೂ 19 ಪ್ರಕರಣ ದಾಖಲಿಸಿತ್ತು.

ಸುರೀಂದರ್‌ ಮಕ್ಕಳಿಗೆ ಆಮಿಷವೊಡ್ಡಿ ಮನೆಗೆ ಕರೆತರುತ್ತಿದ್ದರೆ, ನಂತರ ಆತ ಮತ್ತು ಪಂಧೇರ್‌ ಇಬ್ಬರೂ ಸೇರಿ ಅತ್ಯಾಚಾರಗೈದು ಕೊಲೆಗೈಯ್ಯುತ್ತಿದ್ದರೆಂದು ಆರೋಪಿಸಲಾಗಿತ್ತು.

andolanait

Recent Posts

ಬಿಜೆಪಿ ತನ್ನ ತಪ್ಪು ಮರೆಮಾಚಲು ಕೈ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…

7 seconds ago

ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಸ್.ಎನ್.ಹೆಗ್ಡೆ ಇನ್ನಿಲ್ಲ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…

13 mins ago

ಮೈಸೂರು | ಎಐನಲ್ಲಿ ಕ್ರಿಯೇಟ್‌ ಮಾಡಿರುವ ಚಿರತೆ ಫೋಟೋ ವೈರಲ್‌

ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…

27 mins ago

ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್‌: ಮನೆಮಾಡಿದ ಆತಂಕ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್‌ ಕೇಸ್‌ಗಳು ಮತ್ತಷ್ಟು…

1 hour ago

ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಿಷ್ಟು.!

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…

2 hours ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಸೋಮವಾರಪೇಟೆ ವಿದ್ಯುತ್‌ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್‌ ನಿರ್ವಹಣೆ ಕಾಮಗಾರಿ…

2 hours ago