ನವದೆಹಲಿ : ಕುಖ್ಯಾತ ನಿಥಾರಿ ಹತ್ಯಾಕಾಂಡ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ದೋಷಿ ಎಂದು ಘೋಷಿತನಾಗಿ ಮರಣದಂಡನೆ ಶಿಕ್ಷೆ ವಿಧಿಸಲ್ಪಟ್ಟ ಸುರೀಂದರ್ ಕೋಲಿ ಎಂಬಾತನನ್ನು 12 ಪ್ರಕರಣಗಳಲ್ಲಿ ಇಂದು ಅಲಹಾಬಾದ್ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದ ಇನ್ನೋರ್ವ ಆರೋಪಿ ಮೊನಿಂದರ್ ಸಿಂಗ್ ಪಂಧೇರ್ ಎಂಬಾತನನ್ನು ಎರಡು ಪ್ರಕರಣಗಳಲ್ಲಿ ಖುಲಾಸೆಗೊಳಿಸಲಾಗಿದೆ.
ಹೈಕೋರ್ಟ್ ಆದೇಶದ ನಂತರ ಕೋಲಿ ಮತ್ತು ಪಂಧೇರ್ ಇಬ್ಬರ ಮರಣದಂಡನೆ ಶಿಕ್ಷೆಗಳು ರದ್ದುಗೊಂಡಂತಾಗಿವೆ.
ಸರಣಿ ಹತ್ಯೆಗಳು ಉತ್ತರ ಪ್ರದೇಶದ ನೊಯ್ಡಾದ ನಿಥಾರಿ ಪ್ರದೇಶದ ಮೊನಿಂದರ್ ಸಿಂಗ್ ಪಂಧೇರ್ನ ನಿವಾಸದಲ್ಲಿ 2005 ಮತ್ತು 2006 ನಡುವೆ ನಡೆದಿದ್ದವು. ಪಂಧೇರ್ ನಿವಾಸದಲ್ಲಿ ಸುರೀಂದರ್ ಕೊಲಿ ಸಹಾಯಕನಾಗಿ ದುಡಿಯುತ್ತಿದ್ದ.
ತನ್ನ ಉದ್ಯೋಗದಾತನ ಮನೆಯಲ್ಲಿ ಹಲವಾರು ಮಕ್ಕಳನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ಸುರೀಂದರ್ ದೋಷಿ ಎಂದು ಘೋಷಿತನಾಗಿದ್ದ. ಇಬ್ಬರೂ 20 ವರ್ಷದ ಯುವತಿಯ ಅತ್ಯಾಚಾರ ಹತ್ಯೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾಗಿತ್ತು.
ನಾಪತ್ತೆಯಾದ ಮಗುವೊಂದರ ದೇಹದ ಒಂದು ಭಾಗ ಪಂಧೇರ್ ನಿವಾಸದ ಪಕ್ಕದ ಚರಂಡಿಯಲ್ಲಿ ನೆರೆಹೊರೆಯವರು ಪತ್ತೆ ಹಚ್ಚಿದಾಗ ಇಡೀ ದೇಶವೇ ಬೆಚ್ಚಿ ಬೀಳುವ ವಿದ್ಯಮಾನ ಬೆಳಕಿಗೆ ಬಂದಿತ್ತು.
ತನಿಖೆ ಮುಂದುವರಿದಾಗ ಇನ್ನಷ್ಟು ಮಕ್ಕಳ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿತ್ತು.
ಸಿಬಿಐ 2017ರಲ್ಲಿ ಇಬ್ಬರ ವಿರುದ್ಧವೂ 19 ಪ್ರಕರಣ ದಾಖಲಿಸಿತ್ತು.
ಸುರೀಂದರ್ ಮಕ್ಕಳಿಗೆ ಆಮಿಷವೊಡ್ಡಿ ಮನೆಗೆ ಕರೆತರುತ್ತಿದ್ದರೆ, ನಂತರ ಆತ ಮತ್ತು ಪಂಧೇರ್ ಇಬ್ಬರೂ ಸೇರಿ ಅತ್ಯಾಚಾರಗೈದು ಕೊಲೆಗೈಯ್ಯುತ್ತಿದ್ದರೆಂದು ಆರೋಪಿಸಲಾಗಿತ್ತು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…