ನವದೆಹಲಿ : ಕುಖ್ಯಾತ ನಿಥಾರಿ ಹತ್ಯಾಕಾಂಡ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ದೋಷಿ ಎಂದು ಘೋಷಿತನಾಗಿ ಮರಣದಂಡನೆ ಶಿಕ್ಷೆ ವಿಧಿಸಲ್ಪಟ್ಟ ಸುರೀಂದರ್ ಕೋಲಿ ಎಂಬಾತನನ್ನು 12 ಪ್ರಕರಣಗಳಲ್ಲಿ ಇಂದು ಅಲಹಾಬಾದ್ ಹೈಕೋರ್ಟ್ ಖುಲಾಸೆಗೊಳಿಸಿದೆ. ಈ ಪ್ರಕರಣದ ಇನ್ನೋರ್ವ ಆರೋಪಿ ಮೊನಿಂದರ್ ಸಿಂಗ್ ಪಂಧೇರ್ ಎಂಬಾತನನ್ನು ಎರಡು ಪ್ರಕರಣಗಳಲ್ಲಿ ಖುಲಾಸೆಗೊಳಿಸಲಾಗಿದೆ.
ಹೈಕೋರ್ಟ್ ಆದೇಶದ ನಂತರ ಕೋಲಿ ಮತ್ತು ಪಂಧೇರ್ ಇಬ್ಬರ ಮರಣದಂಡನೆ ಶಿಕ್ಷೆಗಳು ರದ್ದುಗೊಂಡಂತಾಗಿವೆ.
ಸರಣಿ ಹತ್ಯೆಗಳು ಉತ್ತರ ಪ್ರದೇಶದ ನೊಯ್ಡಾದ ನಿಥಾರಿ ಪ್ರದೇಶದ ಮೊನಿಂದರ್ ಸಿಂಗ್ ಪಂಧೇರ್ನ ನಿವಾಸದಲ್ಲಿ 2005 ಮತ್ತು 2006 ನಡುವೆ ನಡೆದಿದ್ದವು. ಪಂಧೇರ್ ನಿವಾಸದಲ್ಲಿ ಸುರೀಂದರ್ ಕೊಲಿ ಸಹಾಯಕನಾಗಿ ದುಡಿಯುತ್ತಿದ್ದ.
ತನ್ನ ಉದ್ಯೋಗದಾತನ ಮನೆಯಲ್ಲಿ ಹಲವಾರು ಮಕ್ಕಳನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ಸುರೀಂದರ್ ದೋಷಿ ಎಂದು ಘೋಷಿತನಾಗಿದ್ದ. ಇಬ್ಬರೂ 20 ವರ್ಷದ ಯುವತಿಯ ಅತ್ಯಾಚಾರ ಹತ್ಯೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾಗಿತ್ತು.
ನಾಪತ್ತೆಯಾದ ಮಗುವೊಂದರ ದೇಹದ ಒಂದು ಭಾಗ ಪಂಧೇರ್ ನಿವಾಸದ ಪಕ್ಕದ ಚರಂಡಿಯಲ್ಲಿ ನೆರೆಹೊರೆಯವರು ಪತ್ತೆ ಹಚ್ಚಿದಾಗ ಇಡೀ ದೇಶವೇ ಬೆಚ್ಚಿ ಬೀಳುವ ವಿದ್ಯಮಾನ ಬೆಳಕಿಗೆ ಬಂದಿತ್ತು.
ತನಿಖೆ ಮುಂದುವರಿದಾಗ ಇನ್ನಷ್ಟು ಮಕ್ಕಳ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿತ್ತು.
ಸಿಬಿಐ 2017ರಲ್ಲಿ ಇಬ್ಬರ ವಿರುದ್ಧವೂ 19 ಪ್ರಕರಣ ದಾಖಲಿಸಿತ್ತು.
ಸುರೀಂದರ್ ಮಕ್ಕಳಿಗೆ ಆಮಿಷವೊಡ್ಡಿ ಮನೆಗೆ ಕರೆತರುತ್ತಿದ್ದರೆ, ನಂತರ ಆತ ಮತ್ತು ಪಂಧೇರ್ ಇಬ್ಬರೂ ಸೇರಿ ಅತ್ಯಾಚಾರಗೈದು ಕೊಲೆಗೈಯ್ಯುತ್ತಿದ್ದರೆಂದು ಆರೋಪಿಸಲಾಗಿತ್ತು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…