BREAKING NEWS

ಮೈತ್ರಿ ಇಲ್ಲ, ಸ್ವತಂತ್ರವಾಗಿ ಹೋರಾಡಿ ಪ್ರಾದೇಶಿಕ ಪಕ್ಷ ಉಳಿಸುತ್ತೇವೆ: ಎಚ್‌.ಡಿ.ದೇವೇಗೌಡ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್, 2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿವೆ, ಇದಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು ದೇವೇಗೌಡರು ಮತ್ತು ಬಿಜೆಪಿ ವರಿಷ್ಠರು ಮಾತುಕತೆ ನಡೆಸಲಿದ್ದಾರೆ ಎಂಬ ಊಹಾಪೋಹ ಇಷ್ಟು ದಿನ ಕೇಳಿಬರುತ್ತಿತ್ತು.

ಇದಕ್ಕೆಲ್ಲ ಉತ್ತರವೆಂಬಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿಯವರೆಗೆ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮದು ಪ್ರಾದೇಶಿಕ ಪಕ್ಷ. ವಿಧಾನಸಭೆಯ ಸದಸ್ಯರು ಎಲ್ಲಾ ಸೇರಿ ಇಂದು ಸಭೆ ಮಾಡಿದ್ದಾರೆ. ಪ್ರಾದೇಶಿಕ ಪಕ್ಷ ಉಳಿಸುವ ನಿಟ್ಟಿನಲ್ಲಿ ಚರ್ಚೆ ಆಗಿದೆ.

ನಾನು ಎಲ್ಲರ‌ನ್ನು ಭೇಟಿ ಮಾಡಿ ಮುಂದೆ ಯಾವ ಮಾರ್ಗದಲ್ಲಿ ಹೋಗಬೇಕು ಅನ್ನುವ ಸಲಹೆ ನೀಡಿದ್ದೇನೆ. ಒಂದು ಕಡೆ ಎನ್ ಡಿಎ, ಮತ್ತೊಂದು ಕಡೆ ಇಂಡಿಯಾ, ಹೀಗಾಗಿ ನನಗಿರುವ ಅನುಭವವನ್ನು ಅವರ ಬಳಿ ಹಂಚಿಕೊಂಡಿದ್ದೇನೆ. ಕುಮಾರಸ್ವಾಮಿ ಪಕ್ಷದ ನಾಯಕರಾಗಿದ್ದಾರೆ, ಹೊಣೆ ಹೊತ್ತು ಕೆಲಸ ಮಾಡುತ್ತಿದ್ದಾರೆ. ನನ್ನ ಅನುಭವವನ್ನು ಅವರಿಗೂ ಹೇಳಿದ್ದೇನೆ, ಜೊತೆಗೆ ಈಗಲೂ ಸಲಹೆ ನೀಡಲು ಸಿದ್ದನಿದ್ದೇನೆ ಎಂದು ತಿಳಿಸಿರು.

ಜೆಡಿಎಸ್ ಪ್ರಾದೇಶಿಕ ಪಕ್ಷ. ವಿಧಾನ ಮಂಡಲ ಕಲಾಪ ಮುಗಿಯುವ ಹಿನ್ನೆಲೆಯಲ್ಲಿ ನಮ್ಮ ಪಕ್ಷದ 19 ವಿಧಾನಸಭೆ ಸದಸ್ಯರು ಮತ್ತು 7 ಮಂದಿ ವಿಧಾನ ಪರಿಷತ್ ಸದಸ್ಯರು ಎಲ್ಲರೂ ಒಗ್ಗಟ್ಟಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪ್ರಾದೇಶಿಕ ಪಕ್ಷವನ್ನು ಹೇಗೆ ಉಳಿಸಬೇಕೆಂದು ಸುದೀರ್ಘವಾಗಿ ಚರ್ಚೆ ಮಾಡಿ ತೀರ್ಮಾನ ಮಾಡಿದ್ದಾರೆ. ನಾನು ಇವತ್ತು ಅವರನ್ನು ಭೇಟಿಯಾಗಿ ಮುಂದೆ ಯಾವ ಮಾರ್ಗದಲ್ಲಿ ಮುಂದೆ ಹೋಗಬೇಕು ಎಂಬುದನ್ನು ಶಾಸಕರ ಜೊತೆ ಹಂಚಿಕೊಂಡಿದ್ದೇನೆ ಎಂದರು.

ನಾವು ಕುಡಿಯೋದೇ ಬೇಡ ಅಂತೀವಿ, ನೀವು ಸ್ಪಲ್ಪ ಕುಡೀರಿ ಅನ್ನುತ್ತಿದ್ದೀರಿ ಪರ್ವಾಗಿಲ್ಲ ರಾಷ್ಟ್ರದ ರಾಜಕಾರಣದ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಈ ಪಕ್ಷ ಉಳಿಸುವುದು ರಾಜ್ಯದ ಜನರ ಹಿತದೃಷ್ಟಿಯಿಂದ ಅಗತ್ಯ, ನಮ್ಮ ಪಕ್ಷಕ್ಕಾಗಿರೋ ಅನ್ಯಾಯ ಅದೆಲ್ಲವನ್ನು ಜನರೆ ಮುಂದೆ ಇಟ್ಟು, ಕರ್ನಾಟಕದಲ್ಲಿ ಸಾಮರ್ಥ್ಯ ಇದೆ ಅನ್ನೋದನ್ನು ಸಾಬೀತು ಮಾಡುತ್ತೇವೆ, ರಾಜಕೀಯ ಲಾಭ ಮತ್ತು ತೋರಿಕೆಗಾಗಿ ಹೇಳುತ್ತಿಲ್ಲ. ಜೀವನದ್ದುಕ್ಕೂ ಹೋರಾಟ ಮಾಡುತ್ತೇವೆ ಎಂದರು.

andolanait

Recent Posts

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

2 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

2 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

2 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

2 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

4 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

4 hours ago