BREAKING NEWS

ಮೈತ್ರಿ ಇಲ್ಲ, ಸ್ವತಂತ್ರವಾಗಿ ಹೋರಾಡಿ ಪ್ರಾದೇಶಿಕ ಪಕ್ಷ ಉಳಿಸುತ್ತೇವೆ: ಎಚ್‌.ಡಿ.ದೇವೇಗೌಡ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್, 2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿವೆ, ಇದಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು ದೇವೇಗೌಡರು ಮತ್ತು ಬಿಜೆಪಿ ವರಿಷ್ಠರು ಮಾತುಕತೆ ನಡೆಸಲಿದ್ದಾರೆ ಎಂಬ ಊಹಾಪೋಹ ಇಷ್ಟು ದಿನ ಕೇಳಿಬರುತ್ತಿತ್ತು.

ಇದಕ್ಕೆಲ್ಲ ಉತ್ತರವೆಂಬಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿಯವರೆಗೆ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮದು ಪ್ರಾದೇಶಿಕ ಪಕ್ಷ. ವಿಧಾನಸಭೆಯ ಸದಸ್ಯರು ಎಲ್ಲಾ ಸೇರಿ ಇಂದು ಸಭೆ ಮಾಡಿದ್ದಾರೆ. ಪ್ರಾದೇಶಿಕ ಪಕ್ಷ ಉಳಿಸುವ ನಿಟ್ಟಿನಲ್ಲಿ ಚರ್ಚೆ ಆಗಿದೆ.

ನಾನು ಎಲ್ಲರ‌ನ್ನು ಭೇಟಿ ಮಾಡಿ ಮುಂದೆ ಯಾವ ಮಾರ್ಗದಲ್ಲಿ ಹೋಗಬೇಕು ಅನ್ನುವ ಸಲಹೆ ನೀಡಿದ್ದೇನೆ. ಒಂದು ಕಡೆ ಎನ್ ಡಿಎ, ಮತ್ತೊಂದು ಕಡೆ ಇಂಡಿಯಾ, ಹೀಗಾಗಿ ನನಗಿರುವ ಅನುಭವವನ್ನು ಅವರ ಬಳಿ ಹಂಚಿಕೊಂಡಿದ್ದೇನೆ. ಕುಮಾರಸ್ವಾಮಿ ಪಕ್ಷದ ನಾಯಕರಾಗಿದ್ದಾರೆ, ಹೊಣೆ ಹೊತ್ತು ಕೆಲಸ ಮಾಡುತ್ತಿದ್ದಾರೆ. ನನ್ನ ಅನುಭವವನ್ನು ಅವರಿಗೂ ಹೇಳಿದ್ದೇನೆ, ಜೊತೆಗೆ ಈಗಲೂ ಸಲಹೆ ನೀಡಲು ಸಿದ್ದನಿದ್ದೇನೆ ಎಂದು ತಿಳಿಸಿರು.

ಜೆಡಿಎಸ್ ಪ್ರಾದೇಶಿಕ ಪಕ್ಷ. ವಿಧಾನ ಮಂಡಲ ಕಲಾಪ ಮುಗಿಯುವ ಹಿನ್ನೆಲೆಯಲ್ಲಿ ನಮ್ಮ ಪಕ್ಷದ 19 ವಿಧಾನಸಭೆ ಸದಸ್ಯರು ಮತ್ತು 7 ಮಂದಿ ವಿಧಾನ ಪರಿಷತ್ ಸದಸ್ಯರು ಎಲ್ಲರೂ ಒಗ್ಗಟ್ಟಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪ್ರಾದೇಶಿಕ ಪಕ್ಷವನ್ನು ಹೇಗೆ ಉಳಿಸಬೇಕೆಂದು ಸುದೀರ್ಘವಾಗಿ ಚರ್ಚೆ ಮಾಡಿ ತೀರ್ಮಾನ ಮಾಡಿದ್ದಾರೆ. ನಾನು ಇವತ್ತು ಅವರನ್ನು ಭೇಟಿಯಾಗಿ ಮುಂದೆ ಯಾವ ಮಾರ್ಗದಲ್ಲಿ ಮುಂದೆ ಹೋಗಬೇಕು ಎಂಬುದನ್ನು ಶಾಸಕರ ಜೊತೆ ಹಂಚಿಕೊಂಡಿದ್ದೇನೆ ಎಂದರು.

ನಾವು ಕುಡಿಯೋದೇ ಬೇಡ ಅಂತೀವಿ, ನೀವು ಸ್ಪಲ್ಪ ಕುಡೀರಿ ಅನ್ನುತ್ತಿದ್ದೀರಿ ಪರ್ವಾಗಿಲ್ಲ ರಾಷ್ಟ್ರದ ರಾಜಕಾರಣದ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಈ ಪಕ್ಷ ಉಳಿಸುವುದು ರಾಜ್ಯದ ಜನರ ಹಿತದೃಷ್ಟಿಯಿಂದ ಅಗತ್ಯ, ನಮ್ಮ ಪಕ್ಷಕ್ಕಾಗಿರೋ ಅನ್ಯಾಯ ಅದೆಲ್ಲವನ್ನು ಜನರೆ ಮುಂದೆ ಇಟ್ಟು, ಕರ್ನಾಟಕದಲ್ಲಿ ಸಾಮರ್ಥ್ಯ ಇದೆ ಅನ್ನೋದನ್ನು ಸಾಬೀತು ಮಾಡುತ್ತೇವೆ, ರಾಜಕೀಯ ಲಾಭ ಮತ್ತು ತೋರಿಕೆಗಾಗಿ ಹೇಳುತ್ತಿಲ್ಲ. ಜೀವನದ್ದುಕ್ಕೂ ಹೋರಾಟ ಮಾಡುತ್ತೇವೆ ಎಂದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago