BREAKING NEWS

ಮೈತ್ರಿ ಇಲ್ಲ, ಸ್ವತಂತ್ರವಾಗಿ ಹೋರಾಡಿ ಪ್ರಾದೇಶಿಕ ಪಕ್ಷ ಉಳಿಸುತ್ತೇವೆ: ಎಚ್‌.ಡಿ.ದೇವೇಗೌಡ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್, 2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿವೆ, ಇದಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು ದೇವೇಗೌಡರು ಮತ್ತು ಬಿಜೆಪಿ ವರಿಷ್ಠರು ಮಾತುಕತೆ ನಡೆಸಲಿದ್ದಾರೆ ಎಂಬ ಊಹಾಪೋಹ ಇಷ್ಟು ದಿನ ಕೇಳಿಬರುತ್ತಿತ್ತು.

ಇದಕ್ಕೆಲ್ಲ ಉತ್ತರವೆಂಬಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿಯವರೆಗೆ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮದು ಪ್ರಾದೇಶಿಕ ಪಕ್ಷ. ವಿಧಾನಸಭೆಯ ಸದಸ್ಯರು ಎಲ್ಲಾ ಸೇರಿ ಇಂದು ಸಭೆ ಮಾಡಿದ್ದಾರೆ. ಪ್ರಾದೇಶಿಕ ಪಕ್ಷ ಉಳಿಸುವ ನಿಟ್ಟಿನಲ್ಲಿ ಚರ್ಚೆ ಆಗಿದೆ.

ನಾನು ಎಲ್ಲರ‌ನ್ನು ಭೇಟಿ ಮಾಡಿ ಮುಂದೆ ಯಾವ ಮಾರ್ಗದಲ್ಲಿ ಹೋಗಬೇಕು ಅನ್ನುವ ಸಲಹೆ ನೀಡಿದ್ದೇನೆ. ಒಂದು ಕಡೆ ಎನ್ ಡಿಎ, ಮತ್ತೊಂದು ಕಡೆ ಇಂಡಿಯಾ, ಹೀಗಾಗಿ ನನಗಿರುವ ಅನುಭವವನ್ನು ಅವರ ಬಳಿ ಹಂಚಿಕೊಂಡಿದ್ದೇನೆ. ಕುಮಾರಸ್ವಾಮಿ ಪಕ್ಷದ ನಾಯಕರಾಗಿದ್ದಾರೆ, ಹೊಣೆ ಹೊತ್ತು ಕೆಲಸ ಮಾಡುತ್ತಿದ್ದಾರೆ. ನನ್ನ ಅನುಭವವನ್ನು ಅವರಿಗೂ ಹೇಳಿದ್ದೇನೆ, ಜೊತೆಗೆ ಈಗಲೂ ಸಲಹೆ ನೀಡಲು ಸಿದ್ದನಿದ್ದೇನೆ ಎಂದು ತಿಳಿಸಿರು.

ಜೆಡಿಎಸ್ ಪ್ರಾದೇಶಿಕ ಪಕ್ಷ. ವಿಧಾನ ಮಂಡಲ ಕಲಾಪ ಮುಗಿಯುವ ಹಿನ್ನೆಲೆಯಲ್ಲಿ ನಮ್ಮ ಪಕ್ಷದ 19 ವಿಧಾನಸಭೆ ಸದಸ್ಯರು ಮತ್ತು 7 ಮಂದಿ ವಿಧಾನ ಪರಿಷತ್ ಸದಸ್ಯರು ಎಲ್ಲರೂ ಒಗ್ಗಟ್ಟಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪ್ರಾದೇಶಿಕ ಪಕ್ಷವನ್ನು ಹೇಗೆ ಉಳಿಸಬೇಕೆಂದು ಸುದೀರ್ಘವಾಗಿ ಚರ್ಚೆ ಮಾಡಿ ತೀರ್ಮಾನ ಮಾಡಿದ್ದಾರೆ. ನಾನು ಇವತ್ತು ಅವರನ್ನು ಭೇಟಿಯಾಗಿ ಮುಂದೆ ಯಾವ ಮಾರ್ಗದಲ್ಲಿ ಮುಂದೆ ಹೋಗಬೇಕು ಎಂಬುದನ್ನು ಶಾಸಕರ ಜೊತೆ ಹಂಚಿಕೊಂಡಿದ್ದೇನೆ ಎಂದರು.

ನಾವು ಕುಡಿಯೋದೇ ಬೇಡ ಅಂತೀವಿ, ನೀವು ಸ್ಪಲ್ಪ ಕುಡೀರಿ ಅನ್ನುತ್ತಿದ್ದೀರಿ ಪರ್ವಾಗಿಲ್ಲ ರಾಷ್ಟ್ರದ ರಾಜಕಾರಣದ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಈ ಪಕ್ಷ ಉಳಿಸುವುದು ರಾಜ್ಯದ ಜನರ ಹಿತದೃಷ್ಟಿಯಿಂದ ಅಗತ್ಯ, ನಮ್ಮ ಪಕ್ಷಕ್ಕಾಗಿರೋ ಅನ್ಯಾಯ ಅದೆಲ್ಲವನ್ನು ಜನರೆ ಮುಂದೆ ಇಟ್ಟು, ಕರ್ನಾಟಕದಲ್ಲಿ ಸಾಮರ್ಥ್ಯ ಇದೆ ಅನ್ನೋದನ್ನು ಸಾಬೀತು ಮಾಡುತ್ತೇವೆ, ರಾಜಕೀಯ ಲಾಭ ಮತ್ತು ತೋರಿಕೆಗಾಗಿ ಹೇಳುತ್ತಿಲ್ಲ. ಜೀವನದ್ದುಕ್ಕೂ ಹೋರಾಟ ಮಾಡುತ್ತೇವೆ ಎಂದರು.

andolanait

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

2 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

7 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

7 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

7 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

18 hours ago