ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್, 2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿವೆ, ಇದಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು ದೇವೇಗೌಡರು ಮತ್ತು ಬಿಜೆಪಿ ವರಿಷ್ಠರು ಮಾತುಕತೆ ನಡೆಸಲಿದ್ದಾರೆ ಎಂಬ ಊಹಾಪೋಹ ಇಷ್ಟು ದಿನ ಕೇಳಿಬರುತ್ತಿತ್ತು.
ಇದಕ್ಕೆಲ್ಲ ಉತ್ತರವೆಂಬಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿಯವರೆಗೆ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮದು ಪ್ರಾದೇಶಿಕ ಪಕ್ಷ. ವಿಧಾನಸಭೆಯ ಸದಸ್ಯರು ಎಲ್ಲಾ ಸೇರಿ ಇಂದು ಸಭೆ ಮಾಡಿದ್ದಾರೆ. ಪ್ರಾದೇಶಿಕ ಪಕ್ಷ ಉಳಿಸುವ ನಿಟ್ಟಿನಲ್ಲಿ ಚರ್ಚೆ ಆಗಿದೆ.
ನಾನು ಎಲ್ಲರನ್ನು ಭೇಟಿ ಮಾಡಿ ಮುಂದೆ ಯಾವ ಮಾರ್ಗದಲ್ಲಿ ಹೋಗಬೇಕು ಅನ್ನುವ ಸಲಹೆ ನೀಡಿದ್ದೇನೆ. ಒಂದು ಕಡೆ ಎನ್ ಡಿಎ, ಮತ್ತೊಂದು ಕಡೆ ಇಂಡಿಯಾ, ಹೀಗಾಗಿ ನನಗಿರುವ ಅನುಭವವನ್ನು ಅವರ ಬಳಿ ಹಂಚಿಕೊಂಡಿದ್ದೇನೆ. ಕುಮಾರಸ್ವಾಮಿ ಪಕ್ಷದ ನಾಯಕರಾಗಿದ್ದಾರೆ, ಹೊಣೆ ಹೊತ್ತು ಕೆಲಸ ಮಾಡುತ್ತಿದ್ದಾರೆ. ನನ್ನ ಅನುಭವವನ್ನು ಅವರಿಗೂ ಹೇಳಿದ್ದೇನೆ, ಜೊತೆಗೆ ಈಗಲೂ ಸಲಹೆ ನೀಡಲು ಸಿದ್ದನಿದ್ದೇನೆ ಎಂದು ತಿಳಿಸಿರು.
ಜೆಡಿಎಸ್ ಪ್ರಾದೇಶಿಕ ಪಕ್ಷ. ವಿಧಾನ ಮಂಡಲ ಕಲಾಪ ಮುಗಿಯುವ ಹಿನ್ನೆಲೆಯಲ್ಲಿ ನಮ್ಮ ಪಕ್ಷದ 19 ವಿಧಾನಸಭೆ ಸದಸ್ಯರು ಮತ್ತು 7 ಮಂದಿ ವಿಧಾನ ಪರಿಷತ್ ಸದಸ್ಯರು ಎಲ್ಲರೂ ಒಗ್ಗಟ್ಟಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪ್ರಾದೇಶಿಕ ಪಕ್ಷವನ್ನು ಹೇಗೆ ಉಳಿಸಬೇಕೆಂದು ಸುದೀರ್ಘವಾಗಿ ಚರ್ಚೆ ಮಾಡಿ ತೀರ್ಮಾನ ಮಾಡಿದ್ದಾರೆ. ನಾನು ಇವತ್ತು ಅವರನ್ನು ಭೇಟಿಯಾಗಿ ಮುಂದೆ ಯಾವ ಮಾರ್ಗದಲ್ಲಿ ಮುಂದೆ ಹೋಗಬೇಕು ಎಂಬುದನ್ನು ಶಾಸಕರ ಜೊತೆ ಹಂಚಿಕೊಂಡಿದ್ದೇನೆ ಎಂದರು.
ನಾವು ಕುಡಿಯೋದೇ ಬೇಡ ಅಂತೀವಿ, ನೀವು ಸ್ಪಲ್ಪ ಕುಡೀರಿ ಅನ್ನುತ್ತಿದ್ದೀರಿ ಪರ್ವಾಗಿಲ್ಲ ರಾಷ್ಟ್ರದ ರಾಜಕಾರಣದ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಈ ಪಕ್ಷ ಉಳಿಸುವುದು ರಾಜ್ಯದ ಜನರ ಹಿತದೃಷ್ಟಿಯಿಂದ ಅಗತ್ಯ, ನಮ್ಮ ಪಕ್ಷಕ್ಕಾಗಿರೋ ಅನ್ಯಾಯ ಅದೆಲ್ಲವನ್ನು ಜನರೆ ಮುಂದೆ ಇಟ್ಟು, ಕರ್ನಾಟಕದಲ್ಲಿ ಸಾಮರ್ಥ್ಯ ಇದೆ ಅನ್ನೋದನ್ನು ಸಾಬೀತು ಮಾಡುತ್ತೇವೆ, ರಾಜಕೀಯ ಲಾಭ ಮತ್ತು ತೋರಿಕೆಗಾಗಿ ಹೇಳುತ್ತಿಲ್ಲ. ಜೀವನದ್ದುಕ್ಕೂ ಹೋರಾಟ ಮಾಡುತ್ತೇವೆ ಎಂದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…