BREAKING NEWS

ನಂದಿನಿ ಜೊತೆ ಸ್ಪರ್ಧೆಯಿಲ್ಲ : ಅಮುಲ್‌ ಎಂಡಿ ಜಯನ್‌ ಮೆಹ್ತಾ

ನವದೆಹಲಿ : ಕರ್ನಾಟಕದ ಡೈರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸುತ್ತಿರುವುದು ನಂದಿನಿ ಬ್ರಾಂಡ್‌ನೊಂದಿಗೆ ಸ್ಪರ್ಧಿಸಲು ಅಲ್ಲ. ಬದಲಿಗೆ ಸಹಬಾಳ್ವೆ ನಡೆಸಲು ಇನ್ನೂ 10 ವರ್ಷಗಳವರೆಗೆ ಚಿಲ್ಲರೆ ಮಾರುಕಟ್ಟೆಯಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ನಮಗೆ ಸಾಧ್ಯವೇ ಇಲ್ಲ ಎಂದು ಅಮುಲ್‌ ಬ್ರ್ಯಾಂಡ್‌ನ್ನು ಮುನ್ನಡೆಸುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಜಯನ್ ಮೆಹ್ತಾ ಹೇಳಿದ್ದಾರೆ.

ಒಂದೆಡೆ ಕರ್ನಾಟಕದಲ್ಲಿ ಡೈರಿ ದೈತ್ಯ ಅಮುಲ್‌ನ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ರಾಜಕೀಯ, ಸಾಮಾಜಿಕ ನಾಯಕರು ಕರೆ ನೀಡಿದ್ದರೆ, ಇನ್ನೊಂದೆಡೆ ಅಮುಲ್‌ Vs ನಂದಿನಿ ಗದ್ದಲ ತಾರಕಕ್ಕೇರಿದೆ. ಇಂಥಹ ಮಹತ್ವದ ಸಂದರ್ಭದಲ್ಲಿ ಆಂಗ್ಲ ಮಾಧ್ಯಮಗಳಿಗೆ ಸಂದರ್ಶನ ನೀಡಿರುವ ಜಯನ್‌ ಮೆಹ್ತಾ ಕರ್ನಾಟಕದಲ್ಲಿ ಅಮುಲ್‌ನ ವಹಿವಾಟಿನ ಆಳ-ಅಗಲ, ಗುರಿ-ಉದ್ದೇಶಗಳನ್ನು ಬಿಚ್ಚಿಟ್ಟಿದ್ದಾರೆ.

ಅಮುಲ್‌ ವರ್ಸಸ್‌ ನಂದಿನಿ ಅಲ್ಲ : ಇದು ಅಮುಲ್ ವರ್ಸಸ್ ನಂದಿನಿ ಅಲ್ಲ. ಬದಲಿಗೆ ಅಮುಲ್ ಮತ್ತು ನಂದಿನಿ. ಇವೆರಡೂ ಒಂದೇ ರೀತಿಯ ಹಿತಾಸಕ್ತಿಗಳ ಮೇಲೆ ಕೆಲಸ ಮಾಡುತ್ತಿರುವ ರೈತರ ಮಾಲಿಕತ್ವದ ಸಹಕಾರಿ ಸಂಸ್ಥೆಗಳು. ನಾವಿಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅಮುಲ್ ಬಹಿಷ್ಕರಿಸಿ ಮತ್ತು ಗೋಬ್ಯಾಕ್ ಅಮುಲ್ ನಂತಹ ಘೋಷಣೆಗಳಿಗೆ ಪ್ರತಿಕ್ರಿಯಿಸಿರುವ ಮೆಹ್ತಾ, ನಮ್ಮ ದಾರಿಯಲ್ಲಿ ಬರುವ ಪ್ರತಿಕ್ರಿಯೆಗಳನ್ನು ನಾವು ಟೀಕಿಸಲು ಆಗಲ್ಲ. ನಮ್ಮನ್ನು ವಿರೋಧಿಸುವವರು ಕೂಡ ನಮ್ಮ ಗ್ರಾಹಕರೇ. ತಮ್ಮ ಮನಸ್ಸಿನಲ್ಲಿರುವುದನ್ನು ಹೇಳಲು ಅವರು ಸ್ವತಂತ್ರರು. ಆದರೆ ನಂದಿನಿ ಮತ್ತು ಅಮುಲ್ ನಡುವಿನ ಉತ್ತಮ ಬಾಂಧವ್ಯವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಹಲವು ವಿಚಾರಗಳಲ್ಲಿ ನಾವು ನಂದಿನಿಯೊಂದಿಗೆ ಕೈ ಜೋಡಿಸಿದ್ದೇವೆ. ಕಳೆದ ಒಂದು ದಶಕದಿಂದ ಬೆಂಗಳೂರಿನ ಮದರ್ ಡೈರಿ ಪ್ಲಾಂಟ್‌ನಲ್ಲಿ ನಂದಿನಿ ಹಾಲನ್ನು ಬಳಸಿಯೇ ನಾವು ಅಮುಲ್ ಐಸ್ ಕ್ರೀಂ ತಯಾರಿಸುತ್ತಿದ್ದೇವೆ. ನಮಗೆ ಚೀಸ್‌ನ ಕೊರತೆ ಇದ್ದಾಗ ನಾವು ನಂದಿನಿಯಿಂದಲೇ ಚೆಡ್ಡಾರ್ ಚೀಸ್ ಖರೀದಿಸಿದ್ದೇವೆ ಎಂದು ಹೇಳಿದ್ದಾರೆ.ಅಮುಲ್‌ ಹಾಲು ಮತ್ತು ಮೊಸರನ್ನು ಚಿಲ್ಲರೆ ವ್ಯಾಪಾರಿಗಳಿಗೆ ಪೂರೈಕೆ ಮಾಡುವುದನ್ನು ತಳ್ಳಿ ಹಾಕಿರುವ ಅವರು, ಕಂಪನಿಯು ಬೆಂಗಳೂರಿನಲ್ಲಿ ಇ-ಕಾಮರ್ಸ್ ಮತ್ತು ಕ್ವಿಕ್‌ ಕಾಮರ್ಸ್‌ ವೇದಿಕೆಗಳ ಮೂಲಕ ಮಾತ್ರ ಹಾಲು ಹಾಗೂ ಮೊಸರನ್ನು ಮಾರಾಟ ಮಾಡಲು ಯೋಜಿಸುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

lokesh

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

47 mins ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

1 hour ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

2 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

2 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

3 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

3 hours ago