BREAKING NEWS

ಐಟಿಆರ್ ಸಲ್ಲಿಸಲು ಕೊನೆ ದಿನಾಂಕದ ವಿಸ್ತರಣೆಯಿಲ್ಲ: ಹಣಕಾಸು ಸಚಿವಾಲು

ಪ್ರತಿ ವರ್ಷದಂತೆ ಈ ವರ್ಷವೂ ಐಟಿಆರ್ ಸಲ್ಲಿಸಲು ಹಣಕಾಸು ಸಚಿವಾಲಯ ಕೊನೆ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ ಈ ವರ್ಷ ಯಾವುದೇ ಕಾರಣಕ್ಕೂ ಐಟಿಆರ್ (ITR) ಸಲ್ಲಿಸಲು ಇರುವ ಕೊನೆ ದಿನಾಂಕವನ್ನು ವಿಸ್ತರಣೆ ಮಾಡುವುದಿಲ್ಲ ಆದ್ದರಿಂದ ನಿಗದಿತ ದಿನಾಂಕದೊಳಗೆ ಐಟಿಆರ್ ಸಲ್ಲಿಸಲು ಹಣಕಾಸು ಸಚಿವಾಲಯ ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದೆ.

ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರು “ಆದಾಯ ತೆರಿಗೆ ಪಾವತಿದಾರರು ತಮ್ಮ ಐಟಿಆರ್ ರಿಟರ್ನ್ ಅನ್ನು ಆದಷ್ಟು ಬೇಗ ಸಲ್ಲಿಸಬೇಕೆಂದು ವಿನಂತಿಸಿಕೊಂಡಿದ್ದಾರೆ. ಏಕೆಂದರೆ ಜುಲೈ 31 ರ ನಂತರ ಸಲ್ಲಿಕೆಯ ದಿನಾಂಕವನ್ನು ವಿಸ್ತರಣೆ ಮಾಡುವುದರ ಕುರಿತು ಹಣಕಾಸು ಸಚಿವಾಲಯವು ಆಲೋಚಿಸುತ್ತಿಲ್ಲ.

2022-23ರ ಮೌಲ್ಯಮಾಪನ ವರ್ಷವನ್ನು ನೋಡುವುದಾದರೆ ಕಳೆದ ವರ್ಷ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನವಾದ ಜುಲೈ 31 ರಂದು ಸುಮಾರು 5.83 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲಾಗಿದೆ” ಎಂದಿದ್ದಾರೆ.

“ಐಟಿಆರ್ ಫೈಲಿಂಗ್ ಕಳೆದ ವರ್ಷಕ್ಕಿಂತ ಹೆಚ್ಚಾಗಿರುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ. ಇದು ಕಳೆದ ವರ್ಷಕ್ಕಿಂತ ಹೆಚ್ಚಿರಬೇಕು ಎಂದು ನಾವು ಭಾವಿಸುತ್ತೇವೆ” ಎಂದು ಸಂಜಯ್ ಅವರು ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

“ಐಟಿಆರ್ ಫೈಲಿಂಗ್ ಕಳೆದ ವರ್ಷಕ್ಕಿಂತ ಹೆಚ್ಚು ವೇಗದಲ್ಲಿ ಇರುವುದರಿಂದ ನಾವು ಆದಾಯ ತೆರಿಗೆ ರಿಟರ್ನ್ ಸಲ್ಲಿಸುವವರಿಗೆ ಧನ್ಯವಾದ ಹೇಳಲು ಬಯಸುತ್ತೇವೆ ಮತ್ತು ಕೊನೆಯ ಕ್ಷಣದವರೆಗೆ ಕಾಯಬೇಡಿ ಮತ್ತು ಯಾವುದೇ ದಿನಾಂಕ ವಿಸ್ತರಣೆಗಳಿಗಾಗಿ ಆಶಿಸಬೇಡಿ ಎಂದು ನಾವು ಅವರಿಗೆ ಸಲಹೆ ನೀಡುತ್ತೇವೆ” ಎಂದಿದ್ದಾರೆ.

ಆದ್ದರಿಂದ, ಜುಲೈ 31 ರ ಗಡುವು ವೇಗವಾಗಿ ಸಮೀಪಿಸುತ್ತಿರುವ ಕಾರಣ ತಮ್ಮ ತೆರಿಗೆ ರಿಟರ್ನ್ ಅನ್ನು ಆದಷ್ಟು ಬೇಗ ಸಲ್ಲಿಸಲು ನಾನು ಅವರಿಗೆ ಸಲಹೆ ನೀಡುತ್ತೇನೆ, ”ಎಂದು ಅವರು ಹೇಳಿದರು.

“ತೆರಿಗೆ ಕ್ರೋಢೀಕರಣ ಗುರಿಗೆ ಸಂಬಂಧಿಸಿದಂತೆ, ಇದು ಹೆಚ್ಚು ಕಡಿಮೆ ಗುರಿ ಬೆಳವಣಿಗೆ ದರಕ್ಕೆ ಅನುಗುಣವಾಗಿದೆ. ಇದು ಶೇಕಡಾ 10.5 ರಷ್ಟು ಆಗಿದೆ” ಎಂದು ಮಲ್ಹೋತ್ರಾ ಹೇಳಿದರು, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಬೆಳವಣಿಗೆ ದರವು ಇಲ್ಲಿಯವರೆಗೆ ಶೇ 12 ರಷ್ಟಿದೆ ಎಂದು ಅವರು ಹೇಳಿದರು.

ಇದರೊಂದಿಗೆ, ದರ ಕಡಿತದ ಕಾರಣದಿಂದಾಗಿ ಅಬಕಾರಿ ಸುಂಕದ ಬೆಳವಣಿಗೆ ದರವು ಶೇಕಡಾ 12 ರಷ್ಟು ಕಡಿಮೆಯಾಗಿದೆ.

“ಇದು ಸದ್ಯದ ಮಟ್ಟಿಗೆ ನೆಗಿಟಿವ್ ದರವಾಗಿದ್ದರೂ, ಮುಂದೆ ಉತ್ತಮವಾಗುವ ಸಂದರ್ಭ ಬರುತ್ತದೆ. ತೆರಿಗೆ ದರಗಳಲ್ಲಿನ ಇಳಿಕೆಯ ಪರಿಣಾಮವು ಮುಗಿದ ನಂತರ, ನಾವು ಅಬಕಾರಿ ಸುಂಕಗಳ ಸಂಗ್ರಹದಲ್ಲಿ ಸ್ವಲ್ಪ ಹೆಚ್ಚಳವನ್ನು ನೋಡಬಹುದಾಗಿದೆ.

ಆದ್ದರಿಂದ, ಒಟ್ಟಾರೆಯಾಗಿ ಇದು ಇನ್ನೂ ಆರಂಭಿಕ ದಿನಗಳು ಮಾತ್ರ. ಇದರಿಂದ ನಾವು ನಮ್ಮ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂಬುದು ನಮ್ಮ ಆಶಯ” ಎಂದು ಅವರು ಹೇಳಿದರು.

ಪ್ರಸಕ್ತ ಹಣಕಾಸು ವರ್ಷದ ಬಜೆಟ್

ಬಜೆಟ್ 2023-24 ರ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದಲ್ಲಿ 33.61 ಲಕ್ಷ ಕೋಟಿ ರೂಪಾಯಿಗಳ ಒಟ್ಟು ತೆರಿಗೆ ಸ್ವೀಕೃತಿಯನ್ನು ಸರ್ಕಾರ ನಿರೀಕ್ಷಿಸುತ್ತದೆ.

ಇದರಲ್ಲಿ 18.23 ಲಕ್ಷ ಕೋಟಿ ರೂ.ಗಳನ್ನು ಒಟ್ಟುಗೂಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇದು ಬಜೆಟ್ ಪೇಪರ್‌ಗಳ ಪ್ರಕಾರ ಕಾರ್ಪೊರೇಟ್ ಮತ್ತು ವೈಯಕ್ತಿಕ ಆದಾಯ ತೆರಿಗೆಯಿಂದ ಸಂಗ್ರಹಿಸಿದ ಶೇಕಡಾ 10.5 ರಷ್ಟು ಹೆಚ್ಚು ಎಂಬುದು ಗಮನಾರ್ಹ ಸಂಗತಿ.

FY23 ರ ಪರಿಷ್ಕೃತ ಅಂದಾಜಿನಲ್ಲಿ ಕಸ್ಟಮ್ಸ್ ಸುಂಕದಿಂದ ಸಂಗ್ರಹಣೆಗಳು 2.10 ಲಕ್ಷ ಕೋಟಿ ರೂಪಾಯಿಗಳಿಂದ 2.33 ಲಕ್ಷ ಕೋಟಿ ರೂಪಾಯಿಗಳಿಗೆ ಏರುವ ನಿರೀಕ್ಷೆಯಿದೆ.

ಜಿಎಸ್‌ಟಿ ಸಂಗ್ರಹವು ಮುಂದಿನ ಹಣಕಾಸು ವರ್ಷದಲ್ಲಿ ಶೇ.12ರಷ್ಟು ಏರಿಕೆಯಾಗಿ 9.56 ಲಕ್ಷ ಕೋಟಿಗೆ ತಲುಪಲಿದೆ ಎಂದು ಹಣಕಾಸು ಸಚಿವಾಲಯ ಅಂದಾಜು ಮಾಡಿದೆ.

ನೇರ ಮತ್ತು ಪರೋಕ್ಷ ತೆರಿಗೆಗಳನ್ನು ತೆಗೆದುಕೊಂಡರೆ, ಒಟ್ಟು ತೆರಿಗೆ ಸಂಗ್ರಹವು 2023-24 ರಲ್ಲಿ 33.61 ಲಕ್ಷ ಕೋಟಿ ರೂ.ಗೆ 10.45% ರಷ್ಟು ಬೆಳವಣಿಗೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ಕಳೆದ ಹಣಕಾಸು ವರ್ಷದಲ್ಲಿ 30.43 ಲಕ್ಷ ಕೋಟಿ ರೂ. ಆಗಿತ್ತು ಎಂದೂ ಹಣಕಾಸು ಸಚಿವಾಲಯ ವರದಿ ಮಾಡಿದೆ.

andolanait

Recent Posts

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

5 mins ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

23 mins ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

1 hour ago

ಗ್ರೇಟರ್‌ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್‌ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ…

1 hour ago

ಹಾಸನ| ಆಟವಾಡುತ್ತಾ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವು

ಹಾಸನ: ಸೈಕಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನದ ಅಣಚಿಹಳ್ಳಿ…

2 hours ago

ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿರುವ ಸಾರಿಗೆ ನೌಕರರು

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ…

2 hours ago