BREAKING NEWS

ಕಾಂಗ್ರೆಸ್‌ ಪಕ್ಷದಲ್ಲಿ ಶೆಟ್ಟರ್‌ಗೆ ಯಾವುದೇ ಅನ್ಯಾಯ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಮಡಿಕೇರಿ: ಕಾಗ್ರೆಸ್‌ ಪಕ್ಷದಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಅವಮಾನವೂ ಕೂಡಾ ಆಗಿಲ್ಲ. ಅವರನ್ನು ನಾವು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಸಿಎಂ ಎಂದು ನಾವು ಅವರಿಗೆ ಟಿಕೆಟ್‌ ನೀಡಿದೆವು. ವಿಧಾನ ಸಭಾ ಚುನಾವಣೆಯಲ್ಲಿ ಅವರು ಸೋತರು. ನಂತರ, ಅವರಿಗೆ ಗೌರವವಾಗಿ ಎಂಎಲ್‌ಸಿ ಮಾಡಿದೆವು. ಈ ಬೆಳವಣಿಗೆ ಬಗ್ಗೆ ನನಗೆ ಮಾಹಿತಿಯಿಲ್ಲ. ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿರಾಜಪೇಟೆಯ ಅಂಬಟ್ಟಿ ಗಾಲ್ಫ್ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಶೆಟ್ಟರ್‌ ಬಂದಿದ್ದೇ ಅವಮಾನ ಮಾಡಿದ್ದಾರೆ. ಮತ್ತು ಟಕೆಟ್‌ ನೀಡಿಲ್ಲ ಎಂದು. ಆದರೆ ಅವರು ವಿಧಾನಸಭಾ ಚುನಾವಣೆಯಲ್ಲಿ ಸೊತರು ಸಹಾ ನಾವು ಅವರನ್ನು ಎಂ ಎಲ್‌ ಸಿ ಮಾಡದ್ದೇವೆ. ಅವರಿಗೆ ನಮ್ಮಿಂದ ಯಾವುದೇ ಅನ್ಯಾಯವಾಗಿಲ್ಲ ಎಂದು ಹೇಳಿದರು.

ಕಾಫಿ ಬೆಳೆಗಾರರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಬೇಡಿಕೆ ಈ ಹಿಂದೆ ಕೊಡಗಿನಲ್ಲಿದ್ದ ಬಿಜೆಪಿ ಶಾಸಕರು, ಸರ್ಕಾರ ಏನು ಮಾಡುತ್ತಿದ್ದರು?‌ ಕೊಡಗನ್ನು ಪ್ರತಿನಿಧಿಸುವ ಸಂಸದರ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಕೊಡಗಿನ ಬೆಳೆಗಾರರಿಗೆ 10 ಹೆಚ್.ಪಿ. ತನಕ ನೀರಾವರಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಒದಗಿಸುವ ಸಂಬಂಧ ಪರಿಶೀಲನೆ ನಡೆಸಲಾಗುವುದು‌ ಎಂದರು.

ಕಾಫಿ ಬೆಳೆಗಾರರ 10 ಹೆಚ್‌ಪಿವರೆಗಿನ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಕಲ್ಪಿಸುವ ಸಂಬಂಧ ಪರಿಶೀಲನೆ ನಡೆಸಲಾಗುವುದು. ಕೊಡಗಿ‌ನ 2 ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿ ಹಲವು ವರ್ಷಗಳ ಬಳಿಕ ಅಧಿಕಾರಕ್ಕೆ ಬಂದಿದ್ದೇವೆ. ಇದು ಮತದಾರರ ಆಶೀರ್ವಾದ ಎಂದರು.

ಇನ್ನು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯತೀಂದ್ರ ಸಿದ್ದರಾಮಯ್ಯ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು‌.

andolanait

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

52 mins ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

2 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

3 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

3 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

5 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

6 hours ago