BREAKING NEWS

ಕಾಂಗ್ರೆಸ್‌ ಪಕ್ಷದಲ್ಲಿ ಶೆಟ್ಟರ್‌ಗೆ ಯಾವುದೇ ಅನ್ಯಾಯ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಮಡಿಕೇರಿ: ಕಾಗ್ರೆಸ್‌ ಪಕ್ಷದಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಅವಮಾನವೂ ಕೂಡಾ ಆಗಿಲ್ಲ. ಅವರನ್ನು ನಾವು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಸಿಎಂ ಎಂದು ನಾವು ಅವರಿಗೆ ಟಿಕೆಟ್‌ ನೀಡಿದೆವು. ವಿಧಾನ ಸಭಾ ಚುನಾವಣೆಯಲ್ಲಿ ಅವರು ಸೋತರು. ನಂತರ, ಅವರಿಗೆ ಗೌರವವಾಗಿ ಎಂಎಲ್‌ಸಿ ಮಾಡಿದೆವು. ಈ ಬೆಳವಣಿಗೆ ಬಗ್ಗೆ ನನಗೆ ಮಾಹಿತಿಯಿಲ್ಲ. ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿರಾಜಪೇಟೆಯ ಅಂಬಟ್ಟಿ ಗಾಲ್ಫ್ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಶೆಟ್ಟರ್‌ ಬಂದಿದ್ದೇ ಅವಮಾನ ಮಾಡಿದ್ದಾರೆ. ಮತ್ತು ಟಕೆಟ್‌ ನೀಡಿಲ್ಲ ಎಂದು. ಆದರೆ ಅವರು ವಿಧಾನಸಭಾ ಚುನಾವಣೆಯಲ್ಲಿ ಸೊತರು ಸಹಾ ನಾವು ಅವರನ್ನು ಎಂ ಎಲ್‌ ಸಿ ಮಾಡದ್ದೇವೆ. ಅವರಿಗೆ ನಮ್ಮಿಂದ ಯಾವುದೇ ಅನ್ಯಾಯವಾಗಿಲ್ಲ ಎಂದು ಹೇಳಿದರು.

ಕಾಫಿ ಬೆಳೆಗಾರರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಬೇಡಿಕೆ ಈ ಹಿಂದೆ ಕೊಡಗಿನಲ್ಲಿದ್ದ ಬಿಜೆಪಿ ಶಾಸಕರು, ಸರ್ಕಾರ ಏನು ಮಾಡುತ್ತಿದ್ದರು?‌ ಕೊಡಗನ್ನು ಪ್ರತಿನಿಧಿಸುವ ಸಂಸದರ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಕೊಡಗಿನ ಬೆಳೆಗಾರರಿಗೆ 10 ಹೆಚ್.ಪಿ. ತನಕ ನೀರಾವರಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಒದಗಿಸುವ ಸಂಬಂಧ ಪರಿಶೀಲನೆ ನಡೆಸಲಾಗುವುದು‌ ಎಂದರು.

ಕಾಫಿ ಬೆಳೆಗಾರರ 10 ಹೆಚ್‌ಪಿವರೆಗಿನ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಕಲ್ಪಿಸುವ ಸಂಬಂಧ ಪರಿಶೀಲನೆ ನಡೆಸಲಾಗುವುದು. ಕೊಡಗಿ‌ನ 2 ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿ ಹಲವು ವರ್ಷಗಳ ಬಳಿಕ ಅಧಿಕಾರಕ್ಕೆ ಬಂದಿದ್ದೇವೆ. ಇದು ಮತದಾರರ ಆಶೀರ್ವಾದ ಎಂದರು.

ಇನ್ನು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯತೀಂದ್ರ ಸಿದ್ದರಾಮಯ್ಯ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು‌.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago