BREAKING NEWS

ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಉದ್ದೇಶವಿಲ್ಲ : ಉಲ್ಟಾ ಹೊಡೆದ ಕನಕಪುರ ಬಂಡೆ

ಬೆಂಗಳೂರು : ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಉದ್ದೇಶವಿಲ್ಲ. ಕನಕಪುರ, ರಾಮನಗರ, ಚನ್ನಪಟ್ಟಣ ಸಂಬಂಧ ಉಳಿಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಹೇಳಿಕೆಗೆ ಈಗ ಉಲ್ಟಾ ಹೊಡೆದಿದ್ದಾರೆ.

ಈ ಮೊದಲು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಕೋಲಾಹಲ ಸೃಷ್ಟಿಗೆ ಕಾರಣವಾಗಿತ್ತು. ಅಲ್ಲದೆ ಒಕ್ಕಲಿಗ ನಾಯಕರ ನಡುವೆ ಕನಕಪುರ ವಿಚಾರದಲ್ಲಿ ಮಾತಿನ ವಾಗ್ಯುದ್ದವೇ ನಡೆದಿತ್ತು.

ಇದೆಲ್ಲದರ ನಡುವೆ ಇದ್ದಕ್ಕಿದ್ದಂತೆ ಒಂದೇ ದಿನದಲ್ಲಿ ಡಿಕೆಶಿ ಉಲ್ಟಾ ಹೊಡೆದಿದ್ದೇಕೆ? ಎಂಬ ಪ್ರಶ್ನೆ ಮೂಡಿದ್ದು, ರಾಜ್ಯ ರಾಜಕಾರಣದಲ್ಲಿ ಕನಕಪುರ ಯುದ್ದಕಣದ ಕಾವು ಜೋರಾಗಿ ಒಕ್ಕಲಿಗ ನಾಯಕರ ನಡುವೆ ರಣಾಂಗಣವೇ ಸೃಷ್ಟಿಯಾಗಿತ್ತು.

ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಕುರಿತು ಯಾವಾಗ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರೋ, ಆಗಲೇ ಇದೇ ವಿಚಾರಕ್ಕೆ ರಾಜಕೀಯ ಕೆಸರೆರಚಾಟ ಜೋರಾಗಿ, ದಳಪತಿ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ವಿರುದ್ಧ ಹಿಗ್ಗಾ-ಮುಗ್ಗಾ ವಾಗ್ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಅಲ್ಲದೆ ಡಿಕೆ ಶಿವಕುಮಾರ್ ನಡೆಯಿಂದ ಸಿಟ್ಟಿಗೆದ್ದಿರುವ ಕುಮಾರಸ್ವಾಮಿ, ಡಿಸಿಎಂ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶವನ್ನು ಹೊರಹಾಕಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಹೇಳಿಕೆಗೆ ಕಾಂಗ್ರೆಸ್‌ನಲ್ಲೂ ಭಾರೀ ವಿರೋಧ ವ್ಯಕ್ತವಾಗಿತ್ತು. ಸ್ವತಃ ಈ ವಿಚಾರದಲ್ಲಿ ಎಳ್ಳಷ್ಟೂ ಆಸಕ್ತಿ ತೋರದ ಸಿಎಂ ಸಿದ್ದರಾಮಯ್ಯ, ರಾಮನಗರ ವಿಚಾರವನ್ನು ಅವರನ್ನೇ ಕೇಳಿ ಎನ್ನುವ ಮೂಲಕ ಡಿಕೆ ಶಿವಕುಮಾರತ್ತ ಬೊಟ್ಟು ಮಾಡಿದ್ದರು.

ಇದೀಗ ಇದ್ದಕ್ಕಿದಂತೆ ತಮ್ಮ ಹೇಳಿಕೆಯಿಂದ ಯೂಟರ್ನ್ ಹೊಡೆದಿರುವ ಡಿಕೆ ಶಿವಕುಮಾರ್ ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ವಿಚಾರದಲ್ಲಿ ಹಿಂದಡಿ ಇಟ್ಟಿರುವುದನ್ನು ನೋಡಿದಾಗ ತಾವೇ ಹುಟ್ಟಿಸಿ ರಾಜಕೀಯ ಟೀಕೆ, ಟಪ್ಪಣಿಗಳಿಗೆ ಕಾರಣವಾಗಿದ್ದ ವಿವಾದಕ್ಕೆ ತಾವೇ ಅಂತ್ಯ ಹಾಡಿದ್ದಾರೆ.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago