BREAKING NEWS

ಗೃಹಜೋತಿ ಯೋಜನೆ ನೋಂದಣಿಗೆ ಕೊನೆಯ ದಿನಾಂಕವಿಲ್ಲ: ಸಚಿವ ಕೆ.ಜೆ.ಜಾರ್ಜ್

ಕಲಬುರುಗಿ : ಇದೇ ತಿಂಗಳ 27 ರ ಒಳಗೆ ನೋಂದಣಿ ಮಾಡಿಕೊಂಡವರಿಗೂ ಆಗಸ್ಟ್ ತಿಂಗಳ ವಿದ್ಯುತ್ ಬಳಕೆಯ ವಿನಾಯಿತಿ ಸೌಲಭ್ಯ ದೊರೆಯಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜುಲೈ 27 ರವರೆಗೆ ನೋಂದಣಿ ಮಾಡಿಕೊಂಡವರಿಗೆ ಸೌಲಭ್ಯ ದೊರಕುತ್ತಿದೆ. ನೋಂದಣಿಗೆ ಯಾವುದೇ ಕಾಲಮಿತಿಯಿಲ್ಲ. ಆದರೆ ಯಾವ ತಿಂಗಳಿನಲ್ಲಿ ನೋಂದಾಯಿಸಿಕೊಳ್ಳುತ್ತಾರೆ. ಆ ತಿಂಗಳಿನ ಸೌಲಭ್ಯ ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಿದರು.

ದೇಶದಲ್ಲೇ ಇದೊಂದು ಕ್ರಾಂತಿಕಾರಿ ಯೋಜನೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಬೆಲೆ ಏರಿಕೆ, ಹಣದುಬ್ಬರದಿಂದ ಸಂತ್ರಸ್ತರಾಗಿರುವ ಜನಸಾಮಾನ್ಯರಿಗೆ ಗೃಹಜ್ಯೋತಿ ಸಂಜೀವಿನಿಯಾಗಿದೆ. ಬಡವರಿಗೆ ಹಣ ಸಿಕ್ಕರೆ ಅದನ್ನು ಅವರು ಮನೆಯಲ್ಲಿಟ್ಟುಕೊಳ್ಳುವುದಿಲ್ಲ. ದೈನಂದಿನ ಅಗತ್ಯಗಳಿಗೆ ಬಳಕೆ ಮಾಡುತ್ತಾರೆ. ಇದರಿಂದ ಆರ್ಥಿಕಾಭಿವೃದ್ಧಿಯಾಗುತ್ತದೆ. ಗೃಹಜ್ಯೋತಿಯನ್ನು ಉಚಿತ ಕೊಡುಗೆ ಎನ್ನುವುದರ ಬದಲಾಗಿ ಆರ್ಥಿಕಾಭಿವೃದ್ಧಿಯ ಕಾರ್ಯಕ್ರಮ ಎಂದು ವಿಶ್ಲೇಷಿಸಬಹುದು ಎಂದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯವರು ಪಿತೂರಿ ಮಾಡಿ ಕಾಂಗ್ರೆಸ್‍ನಲ್ಲಿದ್ದ ವ್ಯಕ್ತಿಯನ್ನು ಸೆಳೆದುಕೊಂಡು ಚುನಾವಣೆಗೆ ನಿಲ್ಲಿಸಿ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಿದ್ದರು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅದಕ್ಕೆ ರಾಜ್ಯದ ಜನ ತಕ್ಕ ಉತ್ತರ ನೀಡುತ್ತಾರೆ. ಕಲಬುರ್ಗಿಯನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮನೆಯ ಪ್ರತಿಕೃತಿಯನ್ನು ಪ್ರದರ್ಶಿಸಿ ವಿದ್ಯುತ್ ದೀಪ ಹೊತ್ತಿಸಲಾಯಿತು. 10 ಮಂದಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ಬಿಲ್ ಅನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಶರಣ್ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಶರಣ ಬಸಪ್ಪ ದರ್ಶನಾಪುರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

andolanait

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

6 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

19 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

21 hours ago