ಬೆಂಗಳೂರು : ಇಸ್ರೊ ವಿಜ್ಞಾನಿಗಳನ್ನು ಅಭಿನಂದಿಸಲು ದಕ್ಷಿಣ ಆಫ್ರಿಕಾ, ಗ್ರೀಸ್ ದೇಶಗಳ ಪ್ರವಾಸ ಮುಗಿಸಿ ಇಂದು ಶನಿವಾರ ಬೆಳಗ್ಗೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದಿದ್ದರು. ಅವರನ್ನು ಸ್ವಾಗತಿಸಲು ಶಿಷ್ಠಾಚಾರ ಪ್ರಕಾರವಾಗಿ ಮುಖ್ಯಮಂತ್ರಿ, ಇಲ್ಲದಿದ್ದರೆ ಉಪ ಮುಖ್ಯಮಂತ್ರಿಗಳು, ರಾಜ್ಯಪಾಲರು ಸಾಮಾನ್ಯವಾಗಿ ಹೋಗುತ್ತಾರೆ.
ಆದರೆ ಇಂದು ಎಚ್ ಎ ಎಲ್ ಏರ್ ಪೋರ್ಟ್ ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸೇರಿದಂತೆ ಇತರ ಪ್ರಮುಖ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಮಾತ್ರ ಹೋಗಿದ್ದರು. ಇದಕ್ಕೆ ಬಿಜೆಪಿ ನಾಯಕರು ಆಕ್ರೋಶಗೊಂಡಿದ್ದಾರೆ. ಸರ್ಕಾರ ಶಿಷ್ಟಾಚಾರ ಪಾಲನೆ ಉಲ್ಲಂಘಿಸಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಆರೋಪಿಸಿದ್ದರು.
ಅದಕ್ಕೆ ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಆರ್ ಅಶೋಕ್ ಗೆ ಸ್ವಲ್ಪ ಪ್ರಾಬ್ಲಂ ಇದೆ. ಆರ್ ಅಶೋಕ್ ನ ಕೇಂದ್ರ ಸರ್ಕಾರ, ಪ್ರಧಾನಿ ಕಚೇರಿ ಎಷ್ಟು ದೂರ ಇಟ್ಟಿದ್ದಾರೆ ಎನ್ನುವುದಕ್ಕೆ ಇವೆಲ್ಲ ಮಾತುಗಳು ಸಾಕ್ಷಿ. ನಮಗೆ ಸಮಯ ಪ್ರಜ್ಞೆ, ರಾಜಕೀಯ ಪ್ರಜ್ಞೆ, ಪ್ರೊಟೊಕಾಲ್, ಯಾರಿಗೆ ಏನು ಯಾವ ಸಮಯದಲ್ಲಿ ಗೌರವ ನೀಡಬೇಕೆಂದು ಬಿಜೆಪಿಯವರಿಗಿಂತ ಜಾಸ್ತಿ ಚೆನ್ನಾಗಿ ಗೊತ್ತಿದೆ.
ಬೆಳಗ್ಗೆಯೇ ಶಿಷ್ಠಾಚಾರ ಪಾಲನೆ ಪ್ರಕಾರ ಪ್ರಧಾನ ಮಂತ್ರಿಗಳು ರಾಜ್ಯದಲ್ಲಿ ಚುನಾವಣೆ ಮುಗಿದ ನಂತರ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮುಖ್ಯಮಂತ್ರಿಗಳು, ಸರ್ಕಾರ ಅವರನ್ನು ಸ್ವಾಗತಿಸಲು ಸಜ್ಜಾಗಿದ್ದೆವು. ಪ್ರಧಾನ ಮಂತ್ರಿ ಕಚೇರಿಯಿಂದ ನಮಗೆ ಅನಧಿಕೃತವಾಗಿ ಮುಖ್ಯ ಕಾರ್ಯದರ್ಶಿಗಳಿಗೆ ಫೋನ್ ಬಂತು. ಆಗ ನಾವು ಒಪ್ಪದೆ ಅಧಿಕೃತವಾಗಿ ಬರಹ ರೂಪದಲ್ಲಿ ಕೊಡಿ ಎಂದು ಮುಖ್ಯ ಕಾರ್ಯದರ್ಶಿಗಳ ಮೂಲಕ ಮನವಿ ಮಾಡಿದೆವು. ಆಗ ಅಧಿಕೃತವಾಗಿಯೇ ಪ್ರಧಾನ ಮಂತ್ರಿ ಕಚೇರಿಯಿಂದ ರಾಜ್ಯಪಾಲರು, ಮುಖ್ಯಮಂತ್ರಿಗಳು ಸೇರಿದಂತೆ ನಾಯಕರು ಯಾರೂ ಬರುವುದು ಬೇಡವೆಂದು ತಿಳಿಸಿದ್ದಾರೆ ಎಂದರು.
ಯಾರಿಗೆ ಎಷ್ಟು ಪ್ರೊಟೊಕಾಲ್ ನೀಡಬೇಕೆಂದು ನಮಗೆ ಖಂಡಿತ ಅರಿವಿದೆ. ಇದನ್ನು ಪ್ರಧಾನಿ ಕಚೇರಿ ಬಳಿ ಬೇಕಾದರೆ ಬಿಜೆಪಿಯವರು ಚರ್ಚಿಸಲಿ, ನನ್ನ ಫೋನಲ್ಲಿ ದಾಖಲೆಯಿದೆ ಬೇಕಾದರೆ ಬಿಡುಗಡೆ ಮಾಡುತ್ತೇನೆ, ಪ್ರಧಾನಿ ಹುದ್ದೆಗೆ ನಾವು ಗೌರವ ಕೊಡುತ್ತೇವೆ, ಅವರು ವಿಜ್ಞಾನಿಗಳನ್ನು ಅಭಿನಂದಿಸಲು ಬಂದಿದ್ದಾರೆ, ನಾವು ಅವರಿಗೆ ಸ್ವಾಗತ ಕೋರಿ ಶುಭಕೋರುತ್ತಿದ್ದೆವು ಎಂದರು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…