BREAKING NEWS

ಭಾರತದ ಪರಿಕಲ್ಪನೆಯನ್ನು ಕಗ್ಗೊಲೆ ಮಾಡುವ ಯಾರೂ ಭಾರತವನ್ನು ಪ್ರೀತಿಸಲು ಸಾಧ್ಯವಿಲ್ಲ: ರಾಹುಲ್‌ ಗಾಂಧಿ

ವಯನಾಡ್ (ಕೇರಳ) : ಸಂಸದ ಸ್ಥಾನವನ್ನು ಮರಳಿ ಪಡೆದ ನಂತರ ತಾವು ಪ್ರತಿನಿಧಿಸುತ್ತಿರುವ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ, ವಯನಾಡ್ ನನ್ನ ಕುಟುಂಬವಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಗೆ ಕುಟುಂಬಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದು ತಿಳಿದಿಲ್ಲ ಎಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಹೇಳಿದ್ದಾರೆ ಎಂದು hindustantimes.com ವರದಿ ಮಾಡಿದೆ.

“ಒಂದು ವೇಳೆ ಯಾರಾದರೂ ಇಬ್ಬರು ಸಹೋದರರನ್ನು ಅಥವಾ ತಂದೆಯನ್ನು ಆತನ ಮಗಳಿಂದ ಬೇರ್ಪಡಿಸಲು ಬಯಸಿದರೆ ಅವರ ಸಂಬಂಧವು ಮತ್ತಷ್ಟು ಬಲಿಷ್ಠವಾಗುತ್ತದೆ. ಅವರು ನನ್ನನ್ನು ಹಾಗೂ ನಿಮ್ಮನ್ನು ಬೇರ್ಪಡಿಸಲು ಪ್ರಯತ್ನಿಸಿದಷ್ಟೂ ನಾವಿಬ್ಬರೂ ಮತ್ತಷ್ಟು ಹತ್ತಿರವಾಗುತ್ತೇವೆ ಎಂಬ ಸಂಗತಿಯನ್ನು ಅವರು ಅರ್ಥ ಮಾಡಿಕೊಳ್ಳಲಾರರು.

ಒಂದು ವೇಳೆ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದರೆ ವಯನಾಡ್ ನೊಂದಿಗೆ ಆತನ ಸಂಬಂಧ ಮುರಿದು ಬೀಳಲಿದೆ ಎಂದು ಅವರು ಭಾವಿಸಿದ್ದಾರೆ. ಇಲ್ಲ, ಒಂದು ವೇಳೆ ನೀವು ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದರೆ, ಜನರೊಂದಿಗಿನ ಆತನ ಸಂಬಂಧ ಮತ್ತಷ್ಟು ಬಲಿಷ್ಠವಾಗುತ್ತದೆ. ನೀವು ನನ್ನ ಪರವಾಗಿ ನಿಂತಿದ್ದೀರಿ. ನನ್ನನ್ನು 50 ಬಾರಿ ಅನರ್ಹಗೊಳಿಸಿದರೂ, ವಯನಾಡ್ ನೊಂದಿಗಿನ ನನ್ನ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರಲು ಸಾಧ್ಯವಿಲ್ಲ ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕಿದೆ” ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

“ಬಿಜೆಪಿ ಮಾಡುವುದೇ ಈ ಕೆಲಸವನ್ನು. ಅವರು ಕುಟುಂಬಗಳನ್ನು ಬೇರ್ಪಡಿಸುತ್ತಾರೆ. ಮಣಿಪುರದಲ್ಲಿ ಅವರು ಅದನ್ನೇ ಮಾಡಿದರು. ನಾವು ಅದನ್ನು ಮರು ನಿರ್ಮಾಣ ಮಾಡುತ್ತೇವೆ. ಒಂದು ವೇಳೆ ನೀವು ಎರಡು ತಿಂಗಳಲ್ಲಿ ಮಣಿಪುರಕ್ಕೆ ಬೆಂಕಿ ಹಚ್ಚಿದರೆ, ನಾವದನ್ನು ಐದು ವರ್ಷಗಳೊಳಗೆ ಮರು ನಿರ್ಮಾಣ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ

“ಕುಟುಂಬವೆಂದರೇನು? ಅದು ನಿಮ್ಮನ್ನು ನೋಡಿಕೊಳ್ಳುತ್ತದೆ, ನಿಮ್ಮನ್ನು ರಕ್ಷಿಸುತ್ತದೆ, ನಿಮಗೆ ಗೌರವ ನೀಡುತ್ತದೆ. ನೀವು ನನಗೆ ಮಾಡಿರುವುದು ಇದನ್ನೇ. ನೀವು ನನ್ನನ್ನು ರಕ್ಷಿಸಿದಿರಿ, ನನಗೆ ಪ್ರೀತಿ, ವಾತ್ಸಲ್ಯ ನೀಡಿದಿರಿ. ನೀವು ನನ್ನನ್ನು 50 ಬಾರಿ, 100 ಬಾರಿ ಅನರ್ಹಗೊಳಿಸಬಹುದು. ಆದರೆ, ಅದರಿಂದ ಈ ಸಂಬಂಧ ಮತ್ತಷ್ಟು ಬಲಿಷ್ಠವಾಗಲಿದೆ.” ಎಂದೂ ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಭಾರತವೊಂದು ಕುಟುಂಬವಾಗಿದ್ದು, ಅದನ್ನು ವಿಭಜಿಸಲು ಅವರು ಬಯಸುತ್ತಿದ್ದಾರೆ. ಮಣಿಪುರ ಕೂಡಾ ಒಂದು ಕುಟುಂಬವಾಗಿದ್ದು, ಅದನ್ನು ನಾಶಪಡಿಸಲು ಅವರು ಯತ್ನಿಸುತ್ತಿದ್ದಾರೆ. ಬಿಜೆಪಿ ಪೊಲೀಸರಿಂದ ಸಾವಿರಾರು ಕುಟುಂಬಗಳು ನಾಶವಾಗಿವೆ. ನಾವು ಜನರನ್ನು ಒಗ್ಗೂಡಿಸಿ, ಕುಟುಂಬಗಳನ್ನು ಮರು ನಿರ್ಮಾಣ ಮಾಡುತ್ತೇವೆ” ಎಂದು ಅವರು ಭರವಸೆ ನೀಡಿದ್ದಾರೆ.

ಮಣಿಪುರದ ಅನುಭವವನ್ನು ಸ್ಮರಿಸಿಕೊಂಡ ರಾಹುಲ್ ಗಾಂಧಿ, ಬಿಜೆಪಿ ಮಣಿಪುರವನ್ನು ಕಗ್ಗೊಲೆ ಮಾಡಿದೆ; ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಲು ಅವಕಾಶ ನೀಡಿದೆ. “ದೇಶದ ಪ್ರಧಾನಿಯಾಗಿ ನೀವು ನಗುತ್ತಿದ್ದೀರಾ? ಭಾರತ ಮಾತೆಯ ಕಗ್ಗೊಲೆ ಬಗ್ಗೆ ಮಾತನಾಡಲು ನೀವು ಕೇವಲ ಎರಡು ನಿಮಿಷ ವ್ಯಯಿಸಿದಿರಿ. ಹೀಗೆ ಮಾಡಲು ನಿಮಗೆಷ್ಟು ಧೈರ್ಯ? ಭಾರತದ ಪರಿಕಲ್ಪನೆಯನ್ನು ನೀವು ಅದ್ಹೇಗೆ ಅಗೌರವಿಸುತ್ತೀರಿ? ಕಳೆದ ನಾಲ್ಕು ತಿಂಗಳಿನಿಂದ ನೀವೇನು ಮಾಡುತ್ತಿದ್ದಿರಿ? ನೀವೇಕೆ ಅಲ್ಲಿಗೆ ತೆರಳಲಿಲ್ಲ? ನೀವು ಹಿಂಸಾಚಾರವನ್ನು ತಡೆಯಲು ಏಕೆ ಯತ್ನಿಸಲಿಲ್ಲ? ಯಾಕೆಂದರೆ, ನೀವು ರಾಷ್ಟ್ರೀಯವಾದಿಯಲ್ಲ. ಭಾರತದ ಪರಿಕಲ್ಪನೆಯನ್ನು ಕಗ್ಗೊಲೆ ಮಾಡುವ ಯಾರೂ ರಾಷ್ಟ್ರೀಯವಾದಿಯಾಗಿರಲು ಸಾಧ್ಯವಿಲ್ಲ. ಭಾರತವನ್ನು ಪ್ರೀತಿಸಲು ಸಾಧ್ಯವಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

andolanait

Recent Posts

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

52 mins ago

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

3 hours ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

3 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

3 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

3 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

4 hours ago