BREAKING NEWS

ಪ್ರಧಾನಿ ಮೋದಿಯನ್ನು ಯಾರಿಂದಲೂ ಹೆದರಿಸಲು ಸಾಧ್ಯವಿಲ್ಲ: ವ್ಲಾಡಿಮಿರ್ ಪುಟಿನ್

ಮಾಸ್ಕೋ : ಭಾರತ ಮತ್ತು ಭಾರತೀಯರಿಗೆ ಹಿತಾಸಕ್ತಿಗೆ ಧಕ್ಕೆ ತರಬಲ್ಲ ಯಾವುದೇ ಕ್ರಮ ಅಥವಾ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾರೂ ಹೆದರಿಸಲು ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ್ದಾರೆ.

ರಷ್ಯಾದ ಮಾಸ್ಕೋದಲ್ಲಿ ನಡೆದ ʼರಷ್ಯಾ ಕಾಲಿಂಗ್‌ʼ ಹೂಡಿಕೆ ವೇದಿಕೆಯಲ್ಲಿ ಪ್ರಧಾನಿ ಮೋದಿ ಅವರ ನಾಯಕತ್ವದ ಕುರಿತು ಮಾತನಾಡಿದ ಪುಟಿನ್‌, ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಬಲವಂತಪಡಿಸಬಹುದು. ಆದರೆ, ಅಂತಹ ಒತ್ತಡಗಳನ್ನು ಅವರು ಸಲೀಸಾಗಿ ನಿಭಾಯಿಸುತ್ತಾರೆ. ಇದನ್ನು ಯಾರು ಊಹಿಸಲು ಸಾಧ್ಯವಿಲ್ಲ. ನಾನು ಸದಾ ಗಮನಿಸುತ್ತಿರುತ್ತೇನೆ, ಭಾರತ ಹಿತಾಸಕ್ತಿಗಳನ್ನು ರಕ್ಷಿಸುವ ಅವರ ಕಠಿಣ ನಿರ್ಧಾರಗಳು ನನ್ನನ್ನು ಆಶ್ಚರ್ಯಚಕಿತಗೊಳಿಸುತ್ತದೆ. ಅವರು ಎಂದಿಗೂ ಬಾಹ್ಯ ಒತ್ತಡಗಳ ಬಗ್ಗೆ ನನ್ನೊಂದಿಗೆ ಚರ್ಚಿಸಿಲ್ಲ.

ಮಾಸ್ಕೋದಲ್ಲಿ ನಡೆದ ʼರಷ್ಯಾ ಕಾಲಿಂಗ್ʼ ಹೂಡಿಕೆ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಕುರಿತು ಮಾತನಾಡುತ್ತಾ, ‘ಮೋದಿಯವರನ್ನು ಯಾರೂ ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ ನಿರ್ಧಾರ ತೆಗೆದುಕೊಳ್ಳುವಂತೆ ಬಲವಂತಪಡಿಸಬಹುದು, ಅಂಥ ಒತ್ತಡವನ್ನು ಅವರು ಅನುಭವಿಸಬಹುದು ಎಂದು ಊಹಿಸಲು ಸಾಧ್ಯವಿಲ್ಲ. ನಾನು ಸದಾ ಗಮನಿಸುತ್ತಿರುತ್ತೇನೆ, ಭಾರತೀಯ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸುವ ಅವರ ಕಠಿಣ ನಿಲುವು ನನಗೆ ಆಶ್ಚರ್ಯಕರವಾಗಿದೆ. ʼಸ್ನೇಹರಹಿತ ದೇಶಗಳʼ ಬಾಹ್ಯ ಒತ್ತಡದ ನಡುವೆಯೂ ಪ್ರಧಾನಿ ನರೇಂದ್ರ ಮೋದಿಯವರ ದೃಢವಾದ ನಾಯಕತ್ವ ಭಾರತಕ್ಕೆ ದೊರೆತಿದೆ. ಅವರು ಎಂದಿಗೂ ಬಾಹ್ಯ ಒತ್ತಡಗಳ ಬಗ್ಗೆ ತನ್ನೊಂದಿಗೆ ಮಾತನಾಡಿಯೇ ಇಲ್ಲ ಎಂದು ಶ್ಲಾಘಿಸಿದ್ದಾರೆ.

ಜೊತೆಗೆ ಭಾರತ- ರಷ್ಯಾ ಬಾಂಧವ್ಯವು ಎಲ್ಲಾ ರಂಗಗಳಲ್ಲಿ ಪ್ರಗತಿಯಲ್ಲಿದೆ. ಉಭಯ ದೇಶಗಳ ನಡುವಿನ ಸಂಬಂಧಗಳು ಎಲ್ಲಾ ಪಥಗಳಲ್ಲಿ ಪ್ರಗತಿಪರವಾಗಿ ಅಭಿವೃದ್ಧಿ ಹೊಂದುತ್ತಿವೆ. ಇದರ ಮುಖ್ಯ ಭರವಸೆ ಪ್ರಧಾನಿ ಮೋದಿ ಅವರು ಅನುಸರಿಸುತ್ತಿರುವ ನೀತಿಯಾಗಿದೆ ಎಂದು ಪುಟಿನ್ ಹೇಳಿದ್ದಾರೆ.

ಟ್ವಿಟರ್ ನಲ್ಲಿ ಈ ಕುರಿತು 45 ಸೆಕೆಂಡ್‌ಗಳ ಈ ಸಂದರ್ಶನದ ವಿಡಿಯೋ ಅಪ್ಲೋಡ್ ಆಗಿದ್ದು, ಲಕ್ಷಾಂತರ ವೀಕ್ಷಣೆ ಪಡೆದಿದೆ. ಎರಡು ದಿನಗಳ ʼಮಾಸ್ಕೋ ಕಾಲಿಂಗ್‌ʼ ಇವೆಂಟ್‌ನಲ್ಲಿ ಚೀನಾ, ಭಾರತ, ಟರ್ಕಿ, ಗಲ್ಫ್ ದೇಶಗಳು, ಮಧ್ಯಪ್ರಾಚ್ಯ, ಆಫ್ರಿಕಾ ಮತ್ತು ಏಷ್ಯಾದ ಪ್ರತಿನಿಧಿಗಳು ಭಾಗವಹಿಸಿದ್ದಾರೆ.

https://x.com/AdityaRajKaul/status/1732884199047385427?s=20

andolanait

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

7 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

8 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

8 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

13 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

14 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

14 hours ago